AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಬಸ್​ಗಳಿಂದ ದುಪ್ಪಟ್ಟು ಹಣ ವಸೂಲಿ; ಮೂರು ದಿನಗಳಲ್ಲಿ 1.90 ಲಕ್ಷ ದಂಡ ವಿಧಿಸಿದ ಆರ್​ಟಿಓ ಅಧಿಕಾರಿಗಳು

ಹಬ್ಬದ ಹಿನ್ನೆಲೆ ದುಪ್ಪಟ್ಟು ಟಿಕೆಟ್ ದರ ವಸೂಲಿ ಮಾಡುತ್ತಿದ್ದ ಖಾಸಗಿ ಬಸ್​ಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ ಆರ್​ಟಿಓ ಅಧಿಕಾರಿಗಳು ಮೂರು ದಿನಗಳಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ದಂಡ ವಸೂಲಿ ಮಾಡಿದ್ದಾರೆ.

ಖಾಸಗಿ ಬಸ್​ಗಳಿಂದ ದುಪ್ಪಟ್ಟು ಹಣ ವಸೂಲಿ; ಮೂರು ದಿನಗಳಲ್ಲಿ 1.90 ಲಕ್ಷ ದಂಡ ವಿಧಿಸಿದ ಆರ್​ಟಿಓ ಅಧಿಕಾರಿಗಳು
ಖಾಸಗಿ ಬಸ್​ಗಳಿಂದ ದುಪ್ಪಟ್ಟು ಹಣ ವಸೂಲಿ; ದಂಡ ವಿಧಿಸಿದ ಆರ್​ಟಿಓ ಅಧಿಕಾರಿಗಳುImage Credit source: ಸಾಂದರ್ಭಿಕ ಚಿತ್ರ
TV9 Web
| Updated By: Rakesh Nayak Manchi|

Updated on: Oct 23, 2022 | 4:26 PM

Share

ದೀಪಾವಳಿ (Diwali 2022) ಹಬ್ಬಕ್ಕೆ ಒಂದು ಊರಿನಿಂದ ಮತ್ತೊಂದು ಊರಿಗೆ ಹೋಗುವವರ ಸಂಖ್ಯೆ ಹೆಚ್ಚು. ಹಬ್ಬಕ್ಕೆ ಸಾಲು ಸಾಲು ರಜೆಗಳು ಇರುವ ಹಿನ್ನೆಲೆ ಸಾಕಷ್ಟು ಜನರು ತಮ್ಮ ಸ್ವಂತ ಊರಿನತ್ತ ಹೋಗುತ್ತಿದ್ದಾರೆ. ಇದನ್ನೆ ಬಂಡವಾಳ ಮಾಡಿಕೊಂಡಿರುವ ಕೆಲ ಖಾಸಗಿ ಬಸ್ಸು (Private bus) ಗಳು ಟಿಕೆಟ್ ದರವನ್ನು ಡಬಲ್ ಪಡೆಯುತ್ತಿದ್ದಾರೆ. ಆದರೆ ಪ್ರಯಾಣಿಕರಿಂದ ಹಣ ವಸೂಲಿಗೆ ಇಲಿದ ಖಾಸಗಿ ಬಸ್​ಗಳ ವಿರುದ್ಧ ಅಖಾಡಕ್ಕಿಳಿದ ಆರ್​ಟಿಓ (RTO) ಅಧಿಕಾರಿಗಳು ಮೂರು ದಿನಗಳಲ್ಲಿ 1.90 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಇಂದು ಸಹ ಸಂಜೆ 5 ಗಂಟೆಯಿಂದ ಖಾಸಗಿ ಬಸ್ಸುಗಳ ಪರಿಶೀಲನೆ ಆರಂಭವಾಗಲಿದೆ.

ದೀಪಾವಳಿ ಹಬ್ಬಕ್ಕೆ ಖಾಸಗಿ ಬಸ್ಸುಗಳ ದರ ದುಪ್ಪಟ್ಟು ಏರಿಕೆ ಹಿನ್ನಲೆ ಮೂರು ದಿನಗಳಿಂದ ಫೀಲ್ಡ್​ಗೆ ಇಳಿದಿರುವ ಆರ್​ಟಿಓ ಅಧಿಕಾರಿಗಳು, ದುಪ್ಪಟ್ಟ ದರ ಕಂಡುಬಂದಂತಹ ಟ್ರಾವೆಲ್ಸ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸುತ್ತಿದ್ದಾರೆ. ಮೊದಲನೇ ದಿನ ಅಂದರೆ ಅ.20ರಂದು ದುಬಾರಿ ಟಿಕೆಟ್ ದರ ವಸೂಲಿ ಮಾಡುತ್ತಿದ್ದ 198 ಬಸ್​ಗಳನ್ನು ಹಿಡಿದು ಪ್ರಕರಣ ದಾಖಲಿಸಲಾಗಿದೆ. ಎರಡನೇ ದಿನ ಅಂದರೆ ಅ.21 ರಂದು 143 ಗಾಡಿಗಾಲನ್ನ ಹಿಡಿದು ಪ್ರಕರಣ ದಾಖಲಿಸಿದರೆ, ಮೂರನೇ ದಿನದಂದು ಅಂದರೆ ಅ.22 ರಂದು 109 ಗಾಡಿಗಳನ್ನ ಹಿಡಿದು ಪ್ರಕರಣ ದಾಖಲಿಸಲಾಗಿದೆ.

ಆರ್​ಟಿಓ ಅಧಿಕಾರಿಗಳು ಟ್ರಾವೆಲ್ಸ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ ಇಟ್ಟು 1.90 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಇಂದು ಸಹ ಸಂಜೆ 5 ಗಂಟೆಯಿಂದ ಖಾಸಗಿ ಬಸ್ಸುಗಳ ಪರಿಶೀಲನೆಯನ್ನು ಅಧಿಕಾರಿಗಳು ನಡೆಸಲಿದ್ದು, ದುಪ್ಪಟ್ಟು ದಂಡ ವಸೂಲಿ ಮಾಡಿದರೆ ಬಸ್ ಮಾಲೀಕರ ವಿರುದ್ಧ ಕೇಸ್ ದಾಖಲಿಸಿ ದಂಡ ವಸೂಲಿ ಮಾಡಲಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?