AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಬಸ್​ಗಳಿಂದ ದುಪ್ಪಟ್ಟು ಹಣ ವಸೂಲಿ; ಮೂರು ದಿನಗಳಲ್ಲಿ 1.90 ಲಕ್ಷ ದಂಡ ವಿಧಿಸಿದ ಆರ್​ಟಿಓ ಅಧಿಕಾರಿಗಳು

ಹಬ್ಬದ ಹಿನ್ನೆಲೆ ದುಪ್ಪಟ್ಟು ಟಿಕೆಟ್ ದರ ವಸೂಲಿ ಮಾಡುತ್ತಿದ್ದ ಖಾಸಗಿ ಬಸ್​ಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ ಆರ್​ಟಿಓ ಅಧಿಕಾರಿಗಳು ಮೂರು ದಿನಗಳಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ದಂಡ ವಸೂಲಿ ಮಾಡಿದ್ದಾರೆ.

ಖಾಸಗಿ ಬಸ್​ಗಳಿಂದ ದುಪ್ಪಟ್ಟು ಹಣ ವಸೂಲಿ; ಮೂರು ದಿನಗಳಲ್ಲಿ 1.90 ಲಕ್ಷ ದಂಡ ವಿಧಿಸಿದ ಆರ್​ಟಿಓ ಅಧಿಕಾರಿಗಳು
ಖಾಸಗಿ ಬಸ್​ಗಳಿಂದ ದುಪ್ಪಟ್ಟು ಹಣ ವಸೂಲಿ; ದಂಡ ವಿಧಿಸಿದ ಆರ್​ಟಿಓ ಅಧಿಕಾರಿಗಳುImage Credit source: ಸಾಂದರ್ಭಿಕ ಚಿತ್ರ
TV9 Web
| Edited By: Rakesh Nayak Manchi|

Updated on: Oct 23, 2022 | 4:26 PM

Share

ದೀಪಾವಳಿ (Diwali 2022) ಹಬ್ಬಕ್ಕೆ ಒಂದು ಊರಿನಿಂದ ಮತ್ತೊಂದು ಊರಿಗೆ ಹೋಗುವವರ ಸಂಖ್ಯೆ ಹೆಚ್ಚು. ಹಬ್ಬಕ್ಕೆ ಸಾಲು ಸಾಲು ರಜೆಗಳು ಇರುವ ಹಿನ್ನೆಲೆ ಸಾಕಷ್ಟು ಜನರು ತಮ್ಮ ಸ್ವಂತ ಊರಿನತ್ತ ಹೋಗುತ್ತಿದ್ದಾರೆ. ಇದನ್ನೆ ಬಂಡವಾಳ ಮಾಡಿಕೊಂಡಿರುವ ಕೆಲ ಖಾಸಗಿ ಬಸ್ಸು (Private bus) ಗಳು ಟಿಕೆಟ್ ದರವನ್ನು ಡಬಲ್ ಪಡೆಯುತ್ತಿದ್ದಾರೆ. ಆದರೆ ಪ್ರಯಾಣಿಕರಿಂದ ಹಣ ವಸೂಲಿಗೆ ಇಲಿದ ಖಾಸಗಿ ಬಸ್​ಗಳ ವಿರುದ್ಧ ಅಖಾಡಕ್ಕಿಳಿದ ಆರ್​ಟಿಓ (RTO) ಅಧಿಕಾರಿಗಳು ಮೂರು ದಿನಗಳಲ್ಲಿ 1.90 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಇಂದು ಸಹ ಸಂಜೆ 5 ಗಂಟೆಯಿಂದ ಖಾಸಗಿ ಬಸ್ಸುಗಳ ಪರಿಶೀಲನೆ ಆರಂಭವಾಗಲಿದೆ.

ದೀಪಾವಳಿ ಹಬ್ಬಕ್ಕೆ ಖಾಸಗಿ ಬಸ್ಸುಗಳ ದರ ದುಪ್ಪಟ್ಟು ಏರಿಕೆ ಹಿನ್ನಲೆ ಮೂರು ದಿನಗಳಿಂದ ಫೀಲ್ಡ್​ಗೆ ಇಳಿದಿರುವ ಆರ್​ಟಿಓ ಅಧಿಕಾರಿಗಳು, ದುಪ್ಪಟ್ಟ ದರ ಕಂಡುಬಂದಂತಹ ಟ್ರಾವೆಲ್ಸ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸುತ್ತಿದ್ದಾರೆ. ಮೊದಲನೇ ದಿನ ಅಂದರೆ ಅ.20ರಂದು ದುಬಾರಿ ಟಿಕೆಟ್ ದರ ವಸೂಲಿ ಮಾಡುತ್ತಿದ್ದ 198 ಬಸ್​ಗಳನ್ನು ಹಿಡಿದು ಪ್ರಕರಣ ದಾಖಲಿಸಲಾಗಿದೆ. ಎರಡನೇ ದಿನ ಅಂದರೆ ಅ.21 ರಂದು 143 ಗಾಡಿಗಾಲನ್ನ ಹಿಡಿದು ಪ್ರಕರಣ ದಾಖಲಿಸಿದರೆ, ಮೂರನೇ ದಿನದಂದು ಅಂದರೆ ಅ.22 ರಂದು 109 ಗಾಡಿಗಳನ್ನ ಹಿಡಿದು ಪ್ರಕರಣ ದಾಖಲಿಸಲಾಗಿದೆ.

ಆರ್​ಟಿಓ ಅಧಿಕಾರಿಗಳು ಟ್ರಾವೆಲ್ಸ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ ಇಟ್ಟು 1.90 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಇಂದು ಸಹ ಸಂಜೆ 5 ಗಂಟೆಯಿಂದ ಖಾಸಗಿ ಬಸ್ಸುಗಳ ಪರಿಶೀಲನೆಯನ್ನು ಅಧಿಕಾರಿಗಳು ನಡೆಸಲಿದ್ದು, ದುಪ್ಪಟ್ಟು ದಂಡ ವಸೂಲಿ ಮಾಡಿದರೆ ಬಸ್ ಮಾಲೀಕರ ವಿರುದ್ಧ ಕೇಸ್ ದಾಖಲಿಸಿ ದಂಡ ವಸೂಲಿ ಮಾಡಲಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್