AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಹಬ್ಬ: ಬೆಂಗಳೂರು, ಹುಬ್ಬಳ್ಳಿ ಮತ್ತು ಕಲಬುರಗಿ ಮಧ್ಯೆ ವಿಶೇಷ ರೈಲು

Deepavali Festival Special Train: ದೀಪಾವಳಿ ಹಬ್ಬ ಮತ್ತು ವೀಕೆಂಡ್​ ಹಿನ್ನೆಲೆಯಲ್ಲಿ ಊರುಗಳಿಗೆ ಪ್ರಯಾಣಿಸುವವರ ಸಂಖ್ಯೆ ಅಧಿಕವಾಗಿರುತ್ತದೆ. ಹೀಗಾಗಿ ಪ್ರಯಾಣಿಕರ ಬೇಡಿಕೆ ಮತ್ತು ದಟ್ಟಣೆಯನ್ನಿ ನಿರ್ವಹಣೆಗಾಗಿ ನೈಋತ್ಯ ರೈಲ್ವೆ ವಲಯವು ಬೆಂಗಳೂರು, ಕಲಬುರಗಿ ಮತ್ತು ಹುಬ್ಬಳ್ಳಿ ಮಧ್ಯೆ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ.

ದೀಪಾವಳಿ ಹಬ್ಬ: ಬೆಂಗಳೂರು, ಹುಬ್ಬಳ್ಳಿ ಮತ್ತು ಕಲಬುರಗಿ ಮಧ್ಯೆ ವಿಶೇಷ ರೈಲು
ರೈಲು
TV9 Web
| Edited By: |

Updated on: Oct 26, 2024 | 7:45 AM

Share

ಬೆಂಗಳೂರು, ಅಕ್ಟೋಬರ್​ 26: ದೀಪಾವಳಿ ಹಬ್ಬದ (Deepavali Festival) ಸಂದರ್ಭದಲ್ಲಿ ಹೆಚ್ಚುವರಿ ಬೇಡಿಕೆ ಮತ್ತು ಪ್ರಯಾಣಿಕರ ದಟ್ಟಣೆ ನಿರ್ವಹಣೆಗಾಗಿ ನೈಋತ್ಯ ರೈಲ್ವೆ ವಲಯವು (South Western Railway) ವಿಶೇಷ ರೈಲುಗಳನ್ನು ಘೋಷಣೆ ಮಾಡಿದೆ. ಎಸ್​ಎಂವಿಟಿ ಬೆಂಗಳೂರು-ಕಲಬುರಗಿ, ಎಸ್​ಎಸ್​ಎಸ್ ಹುಬ್ಬಳ್ಳಿ-ಯಶವಂತಪುರ ನಡುವೆ ವಿಶೇಷ ರೈಲುಗಳು ಸಂಚರಿಸಲಿದ್ದು, ಪ್ರಯಾಣಿಕರು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸುವ ಮೂಲಕ ನೈಋತ್ಯ ರೈಲ್ವೆ ವಲಯ ಮಾಹಿತಿ ನೀಡಿದೆ.

ನೈಋತ್ಯ ರೈಲ್ವೆ ಎಕ್ಸ್​ ಸಂದೇಶ

ಬೆಂಗಳೂರು-ಕಲಬುರಗಿ ವಿಶೇಷ ರೈಲು

ಎಸ್​ಎಮ್​​ವಿಟಿ ಬೆಂಗಳೂರು-ಕಲಬುರಗಿ (06217) ವಿಶೇಷ ರೈಲು ಅಕ್ಟೋಬರ್​ 31 ರಂದು ರಾತ್ರಿ 9:15ಕ್ಕೆ ಎಸ್​ಎಮ್​​ವಿಟಿ ಬೆಂಗಳೂರಿನಿಂದ ಹೊರಟು ಮರುದಿನ ಬೆಳಗ್ಗೆ 7:40ಕ್ಕೆ ಕಲಬುರಗಿ ತಲುಪಲಿದೆ.

ಎಸ್​ಎಮ್​​ವಿಟಿ ಬೆಂಗಳೂರು-ಕಲಬುರಗಿ (06218) ವಿಶೇಷ ರೈಲು ನವೆಂಬರ್​ ​01 ರಂದು ಬೆಳಗ್ಗೆ 9:35ಕ್ಕೆ ಕಲುಬುರಗಿಯಿಂದ ಹೊರಟು ಅದೇ ದಿನ ರಾತ್ರಿ 8:00ಕ್ಕೆ ಎಸ್​ಎಮ್​​ವಿಟಿ ಬೆಂಗಳೂರಿನಿಂದ ತಲುಪಲಿದೆ.

ಇದನ್ನೂ ಓದಿ: ದೀಪಾವಳಿ ಸ್ಪೆಷಲ್, ಕರ್ನಾಟಕದ ಹಲವು ನಿಲ್ದಾಣಗಳಿಗೆ ವಿಶೇಷ ರೈಲು; ಇಲ್ಲಿದೆ ವಿವರ

ಎಲ್ಲೆಲ್ಲಿ ನಿಲುಗಡೆ?

ಈ ರೈಲು ಯಲಹಂಕ, ಧರ್ಮಾವರಂ, ಅನಂತಪುರ, ಗುಂಟಕಲ್​, ಅಡೋನಿ, ಮಂತ್ರಾಲಯಂ ರೋಡ್​, ರಾಯಚೂರು, ಕೃಷ್ಣಾ, ಯಾದಗಿರಿ ಮತ್ತು ಶಹಬಾದ್​ ನಿಲ್ದಾಣಗಳಲ್ಲಿ​ ನಿಲ್ಲುತ್ತದೆ.

ಈ ರೈಲು 2 ಎಸಿ ತ್ರಿ ಟಯರ್ ಬೋಗಿಗಳು​​, 2 ಸ್ಲೀಪರ್​ ಕ್ಲಾಸ್​, 12 ಜನರಲ್​ ಸೆಕೆಂಡ್​ ಕ್ಲಾಸ್​, 1 ಎಸ್​ಎಲ್​ಆರ್​ಒ, 1 ಲಗೇಜ್​​/ ಬ್ರೇಕ್​ ವ್ಯಾನ್ಸ್​​ ಕಮ್​ ಜನರೇಟ್​​ ಕಾರ್​ ಸೇರಿದಂತೆ ಒಟ್ಟು 19 ಬೋಗಿಗಳನ್ನು ಹೊಂದಿರಲಿದೆ.

ಹುಬ್ಬಳ್ಳಿ-ಯಶವಂತಪರ ರೈಲು

ಹುಬ್ಬಳ್ಳಿ-ಯಶವಂತಪುರ (07323) ವಿಶೇಷ ರೈಲು ಅಕ್ಟೋಬರ್​ 30 ರಂದು ಎಸ್​ಎಸ್​ಎಸ್​ ಹುಬ್ಬಳ್ಳಿಯಿಂದ ಬೆಳಗ್ಗೆ 8 ಗಂಟೆಗೆ ಹೊರಟು ಅದೇ ದಿನ ಸಂಜೆ 3:45ಕ್ಕೆ ಯಶವಂತಪುರ ತಲುಪಲಿದೆ.

ಎಲ್ಲೆಲ್ಲಿ ನಿಲುಗಡೆ?

ಈ ರೈಲು ಹಾವೇರಿ, ರಾಣೇಬೆನ್ನೂರು, ದಾವಣಗೆರೆ, ಬೀರೂರು, ಅರಸಿಕೇರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲ್ಲುತ್ತದೆ.

ಈ ರೈಲು 1 ಎಸಿ ಫಸ್ಟ್​ ಕ್ಲಾಸ್ ಬೋಗಿ​, 2 ಎಸಿ ಟೂ ಟಯರ್ ಬೋಗಿಗಳು​, 4 ಎಸ್​ಇ 3 ಟಯರ್​ ಬೋಗಿಗಳು, ಎಸಿ 3 ಟಯರ್​ ಎಕಾನಾಮಿ, 6 ಸ್ಲೀಪರ್​ ಕ್ಲಾಸ್​, 2 ಜನರಲ್​ ಸೆಕೆಂಡ್​ ಕ್ಲಾಸ್​, 1 ಪ್ಯಾಂಟ್ರಿ ಕಾರ್ ಮತ್ತು 2 ಲಗೇಜ್​ ಬ್ರೇಕ್​​ ಮತ್ತು ಜನರಲ್​ ಕಾರ್ಸ್​​ ಸೇರಿದಂತೆ ಒಟ್ಟು 21 ಬೋಗಿಗಳನ್ನು ಹೊಂದಿರಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ