AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ ಹಬ್ಬ: ಬೆಂಗಳೂರು, ಹುಬ್ಬಳ್ಳಿ ಮತ್ತು ಕಲಬುರಗಿ ಮಧ್ಯೆ ವಿಶೇಷ ರೈಲು

Deepavali Festival Special Train: ದೀಪಾವಳಿ ಹಬ್ಬ ಮತ್ತು ವೀಕೆಂಡ್​ ಹಿನ್ನೆಲೆಯಲ್ಲಿ ಊರುಗಳಿಗೆ ಪ್ರಯಾಣಿಸುವವರ ಸಂಖ್ಯೆ ಅಧಿಕವಾಗಿರುತ್ತದೆ. ಹೀಗಾಗಿ ಪ್ರಯಾಣಿಕರ ಬೇಡಿಕೆ ಮತ್ತು ದಟ್ಟಣೆಯನ್ನಿ ನಿರ್ವಹಣೆಗಾಗಿ ನೈಋತ್ಯ ರೈಲ್ವೆ ವಲಯವು ಬೆಂಗಳೂರು, ಕಲಬುರಗಿ ಮತ್ತು ಹುಬ್ಬಳ್ಳಿ ಮಧ್ಯೆ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ.

ದೀಪಾವಳಿ ಹಬ್ಬ: ಬೆಂಗಳೂರು, ಹುಬ್ಬಳ್ಳಿ ಮತ್ತು ಕಲಬುರಗಿ ಮಧ್ಯೆ ವಿಶೇಷ ರೈಲು
ರೈಲು
TV9 Web
| Edited By: ವಿವೇಕ ಬಿರಾದಾರ|

Updated on: Oct 26, 2024 | 7:45 AM

Share

ಬೆಂಗಳೂರು, ಅಕ್ಟೋಬರ್​ 26: ದೀಪಾವಳಿ ಹಬ್ಬದ (Deepavali Festival) ಸಂದರ್ಭದಲ್ಲಿ ಹೆಚ್ಚುವರಿ ಬೇಡಿಕೆ ಮತ್ತು ಪ್ರಯಾಣಿಕರ ದಟ್ಟಣೆ ನಿರ್ವಹಣೆಗಾಗಿ ನೈಋತ್ಯ ರೈಲ್ವೆ ವಲಯವು (South Western Railway) ವಿಶೇಷ ರೈಲುಗಳನ್ನು ಘೋಷಣೆ ಮಾಡಿದೆ. ಎಸ್​ಎಂವಿಟಿ ಬೆಂಗಳೂರು-ಕಲಬುರಗಿ, ಎಸ್​ಎಸ್​ಎಸ್ ಹುಬ್ಬಳ್ಳಿ-ಯಶವಂತಪುರ ನಡುವೆ ವಿಶೇಷ ರೈಲುಗಳು ಸಂಚರಿಸಲಿದ್ದು, ಪ್ರಯಾಣಿಕರು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸುವ ಮೂಲಕ ನೈಋತ್ಯ ರೈಲ್ವೆ ವಲಯ ಮಾಹಿತಿ ನೀಡಿದೆ.

ನೈಋತ್ಯ ರೈಲ್ವೆ ಎಕ್ಸ್​ ಸಂದೇಶ

ಬೆಂಗಳೂರು-ಕಲಬುರಗಿ ವಿಶೇಷ ರೈಲು

ಎಸ್​ಎಮ್​​ವಿಟಿ ಬೆಂಗಳೂರು-ಕಲಬುರಗಿ (06217) ವಿಶೇಷ ರೈಲು ಅಕ್ಟೋಬರ್​ 31 ರಂದು ರಾತ್ರಿ 9:15ಕ್ಕೆ ಎಸ್​ಎಮ್​​ವಿಟಿ ಬೆಂಗಳೂರಿನಿಂದ ಹೊರಟು ಮರುದಿನ ಬೆಳಗ್ಗೆ 7:40ಕ್ಕೆ ಕಲಬುರಗಿ ತಲುಪಲಿದೆ.

ಎಸ್​ಎಮ್​​ವಿಟಿ ಬೆಂಗಳೂರು-ಕಲಬುರಗಿ (06218) ವಿಶೇಷ ರೈಲು ನವೆಂಬರ್​ ​01 ರಂದು ಬೆಳಗ್ಗೆ 9:35ಕ್ಕೆ ಕಲುಬುರಗಿಯಿಂದ ಹೊರಟು ಅದೇ ದಿನ ರಾತ್ರಿ 8:00ಕ್ಕೆ ಎಸ್​ಎಮ್​​ವಿಟಿ ಬೆಂಗಳೂರಿನಿಂದ ತಲುಪಲಿದೆ.

ಇದನ್ನೂ ಓದಿ: ದೀಪಾವಳಿ ಸ್ಪೆಷಲ್, ಕರ್ನಾಟಕದ ಹಲವು ನಿಲ್ದಾಣಗಳಿಗೆ ವಿಶೇಷ ರೈಲು; ಇಲ್ಲಿದೆ ವಿವರ

ಎಲ್ಲೆಲ್ಲಿ ನಿಲುಗಡೆ?

ಈ ರೈಲು ಯಲಹಂಕ, ಧರ್ಮಾವರಂ, ಅನಂತಪುರ, ಗುಂಟಕಲ್​, ಅಡೋನಿ, ಮಂತ್ರಾಲಯಂ ರೋಡ್​, ರಾಯಚೂರು, ಕೃಷ್ಣಾ, ಯಾದಗಿರಿ ಮತ್ತು ಶಹಬಾದ್​ ನಿಲ್ದಾಣಗಳಲ್ಲಿ​ ನಿಲ್ಲುತ್ತದೆ.

ಈ ರೈಲು 2 ಎಸಿ ತ್ರಿ ಟಯರ್ ಬೋಗಿಗಳು​​, 2 ಸ್ಲೀಪರ್​ ಕ್ಲಾಸ್​, 12 ಜನರಲ್​ ಸೆಕೆಂಡ್​ ಕ್ಲಾಸ್​, 1 ಎಸ್​ಎಲ್​ಆರ್​ಒ, 1 ಲಗೇಜ್​​/ ಬ್ರೇಕ್​ ವ್ಯಾನ್ಸ್​​ ಕಮ್​ ಜನರೇಟ್​​ ಕಾರ್​ ಸೇರಿದಂತೆ ಒಟ್ಟು 19 ಬೋಗಿಗಳನ್ನು ಹೊಂದಿರಲಿದೆ.

ಹುಬ್ಬಳ್ಳಿ-ಯಶವಂತಪರ ರೈಲು

ಹುಬ್ಬಳ್ಳಿ-ಯಶವಂತಪುರ (07323) ವಿಶೇಷ ರೈಲು ಅಕ್ಟೋಬರ್​ 30 ರಂದು ಎಸ್​ಎಸ್​ಎಸ್​ ಹುಬ್ಬಳ್ಳಿಯಿಂದ ಬೆಳಗ್ಗೆ 8 ಗಂಟೆಗೆ ಹೊರಟು ಅದೇ ದಿನ ಸಂಜೆ 3:45ಕ್ಕೆ ಯಶವಂತಪುರ ತಲುಪಲಿದೆ.

ಎಲ್ಲೆಲ್ಲಿ ನಿಲುಗಡೆ?

ಈ ರೈಲು ಹಾವೇರಿ, ರಾಣೇಬೆನ್ನೂರು, ದಾವಣಗೆರೆ, ಬೀರೂರು, ಅರಸಿಕೇರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲ್ಲುತ್ತದೆ.

ಈ ರೈಲು 1 ಎಸಿ ಫಸ್ಟ್​ ಕ್ಲಾಸ್ ಬೋಗಿ​, 2 ಎಸಿ ಟೂ ಟಯರ್ ಬೋಗಿಗಳು​, 4 ಎಸ್​ಇ 3 ಟಯರ್​ ಬೋಗಿಗಳು, ಎಸಿ 3 ಟಯರ್​ ಎಕಾನಾಮಿ, 6 ಸ್ಲೀಪರ್​ ಕ್ಲಾಸ್​, 2 ಜನರಲ್​ ಸೆಕೆಂಡ್​ ಕ್ಲಾಸ್​, 1 ಪ್ಯಾಂಟ್ರಿ ಕಾರ್ ಮತ್ತು 2 ಲಗೇಜ್​ ಬ್ರೇಕ್​​ ಮತ್ತು ಜನರಲ್​ ಕಾರ್ಸ್​​ ಸೇರಿದಂತೆ ಒಟ್ಟು 21 ಬೋಗಿಗಳನ್ನು ಹೊಂದಿರಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"