AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಋತ್ಯ ರೈಲ್ವೆಯಿಂದ ದೀಪಾವಳಿ ಹಬ್ಬಕ್ಕೆ 2 ವಿಶೇಷ ಎಕ್ಸಪ್ರೆಸ್​ ರೈಲು: ಯಾವ ಯಾವ ನಗರ ಮಧ್ಯೆ ಸಂಚಾರ? ಇಲ್ಲಿದೆ ಮಾಹಿತಿ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ಮತ್ತು ಪ್ರಯಾಣಿಕರ ಮನವಿ ಮೇರೆಗೆ ನೈಋತ್ಯ ರೈಲ್ವೆಯು ಎರಡು ವಿಶೇಷ ಎಕ್ಸಪ್ರೆಸ್​ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಯಾವ ಯಾವ ನಗರಗಳ ಮಧ್ಯೆ ಸಂಚರಿಸಲಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ನೈಋತ್ಯ ರೈಲ್ವೆಯಿಂದ ದೀಪಾವಳಿ ಹಬ್ಬಕ್ಕೆ 2 ವಿಶೇಷ ಎಕ್ಸಪ್ರೆಸ್​ ರೈಲು: ಯಾವ ಯಾವ ನಗರ ಮಧ್ಯೆ ಸಂಚಾರ? ಇಲ್ಲಿದೆ ಮಾಹಿತಿ
ರೈಲು
ವಿವೇಕ ಬಿರಾದಾರ
|

Updated on: Nov 06, 2023 | 8:03 AM

Share

ಹುಬ್ಬಳ್ಳಿ ನ.06: ಇನ್ನೇನು ಕೆಲವೇ ದಿನಗಳಲ್ಲಿ ಬೆಳಕಿನ ಹಬ್ಬ ದೀಪಾವಳಿ (Deepavali) ಬಂದೇ ಬಿಡುತ್ತದೆ. ಹಬ್ಬದ ಸಮಯದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ಮತ್ತು ಪ್ರಯಾಣಿಕರ ಮನವಿ ಮೇರೆಗೆ ನೈಋತ್ಯ ರೈಲ್ವೆಯು (SWR) ಸರ್​ಎಂ ವಿಶ್ವೇಶ್ವರಯ್ಯ ಟರ್ಮಿನಲ್ (SMVT) ಬೆಂಗಳೂರು-ವಿಜಯಪುರ ಮತ್ತು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳನ್ನು (Train) ಓಡಿಸಲಿದೆ.

ರೈಲು ಸಂಖ್ಯೆ 06231: ಎಸ್‌ಎಂವಿಟಿ ಬೆಂಗಳೂರು-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 10 ರಂದು ಸಂಜೆ 7 ಗಂಟೆಗೆ ಎಸ್‌ಎಂವಿಟಿ ಬೆಂಗಳೂರಿನಿಂದ ಹೊರಟು ಮರುದಿನ ಬೆಳಿಗ್ಗೆ 10.55 ಕ್ಕೆ ವಿಜಯಪುರ ತಲುಪಲಿದೆ.

ರೈಲು ಸಂಖ್ಯೆ 06232: ವಿಜಯಪುರ-ಎಸ್‌ಎಂವಿಟಿ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 14 ರಂದು ಸಂಜೆ 5 ಗಂಟೆಗೆ ವಿಜಯಪುರದಿಂದ ಹೊರಟು ಮರುದಿನ ಬೆಳಿಗ್ಗೆ 9.30 ಕ್ಕೆ ಎಸ್‌ಎಂವಿಟಿಗೆ ಆಗಮಿಸುತ್ತದೆ.

ಇದನ್ನೂ ಓದಿ: ದೀಪಾವಳಿ: KSRTC ಯಿಂದ 2 ಸಾವಿರ ಹೆಚ್ಚುವರಿ ವಿಶೇಷ ಬಸ್​​ ವ್ಯವಸ್ಥೆ: ಇಲ್ಲಿದೆ ಮಾಹಿತಿ

ರೈಲು ಸಂಖ್ಯೆ 06585: ಎಸ್​ಎಂವಿಟಿ-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 10 ರಂದು ರಾತ್ರಿ 8 ಗಂಟೆಗೆ ಎಸ್​​ಎಮ್​ವಿಟಿಯಿಂದ ಹೊರಟು ಮರುದಿನ ಬೆಳಿಗ್ಗೆ 8 ಗಂಟೆಗೆ ಬೆಳಗಾವಿಗೆ ಆಗಮಿಸುತ್ತದೆ. ರೈಲು ಸಂಖ್ಯೆ 06586: ಬೆಳಗಾವಿ-ಎಸ್​ಎಮ್​ವಿಟಿ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 14 ರಂದು ಸಂಜೆ 6.50 ಕ್ಕೆ ಬೆಳಗಾವಿಯಿಂದ ಹೊರಟು ಮರುದಿನ ಬೆಳಿಗ್ಗೆ 6 ಗಂಟೆಗೆ ಎಸ್​ಎಮ್​ವಿಟಿಗೆ ಆಗಮಿಸುತ್ತದೆ.

ಈ ಮೇಲೆ ತಿಳಿಸಿದ ಪ್ರತಿಯೊಂದು ರೈಲುಗಳು 16 ಕೋಚ್‌ಗಳನ್ನು ಒಳಗೊಂಡಿರುತ್ತವೆ. ಇದರಲ್ಲಿ ಒಂದು ಎಸಿ ಟು-ಟೈರ್, ಮೂರು ಎಸಿ ತ್ರೀ-ಟೈರ್, ಎಂಟು ಸ್ಲೀಪರ್ ಕ್ಲಾಸ್, ಎರಡು ಸಾಮಾನ್ಯ ಸೆಕೆಂಡ್ ಕ್ಲಾಸ್ ಮತ್ತು ಎರಡು ಸೆಕೆಂಡ್ ಕ್ಲಾಸ್ ಲಗೇಜ್-ಕಮ್-ಬ್ರೇಕ್-ವ್ಯಾನ್‌ಗಳು/ಅಂಗವಿಕಲ ಸ್ನೇಹಿ ಕಂಪಾರ್ಟ್‌ಮೆಂಟ್‌ಗಳು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ