AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಋತ್ಯ ರೈಲ್ವೆಯಿಂದ ದೀಪಾವಳಿ ಹಬ್ಬಕ್ಕೆ 2 ವಿಶೇಷ ಎಕ್ಸಪ್ರೆಸ್​ ರೈಲು: ಯಾವ ಯಾವ ನಗರ ಮಧ್ಯೆ ಸಂಚಾರ? ಇಲ್ಲಿದೆ ಮಾಹಿತಿ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ಮತ್ತು ಪ್ರಯಾಣಿಕರ ಮನವಿ ಮೇರೆಗೆ ನೈಋತ್ಯ ರೈಲ್ವೆಯು ಎರಡು ವಿಶೇಷ ಎಕ್ಸಪ್ರೆಸ್​ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಯಾವ ಯಾವ ನಗರಗಳ ಮಧ್ಯೆ ಸಂಚರಿಸಲಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ನೈಋತ್ಯ ರೈಲ್ವೆಯಿಂದ ದೀಪಾವಳಿ ಹಬ್ಬಕ್ಕೆ 2 ವಿಶೇಷ ಎಕ್ಸಪ್ರೆಸ್​ ರೈಲು: ಯಾವ ಯಾವ ನಗರ ಮಧ್ಯೆ ಸಂಚಾರ? ಇಲ್ಲಿದೆ ಮಾಹಿತಿ
ರೈಲು
ವಿವೇಕ ಬಿರಾದಾರ
|

Updated on: Nov 06, 2023 | 8:03 AM

Share

ಹುಬ್ಬಳ್ಳಿ ನ.06: ಇನ್ನೇನು ಕೆಲವೇ ದಿನಗಳಲ್ಲಿ ಬೆಳಕಿನ ಹಬ್ಬ ದೀಪಾವಳಿ (Deepavali) ಬಂದೇ ಬಿಡುತ್ತದೆ. ಹಬ್ಬದ ಸಮಯದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ಮತ್ತು ಪ್ರಯಾಣಿಕರ ಮನವಿ ಮೇರೆಗೆ ನೈಋತ್ಯ ರೈಲ್ವೆಯು (SWR) ಸರ್​ಎಂ ವಿಶ್ವೇಶ್ವರಯ್ಯ ಟರ್ಮಿನಲ್ (SMVT) ಬೆಂಗಳೂರು-ವಿಜಯಪುರ ಮತ್ತು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳನ್ನು (Train) ಓಡಿಸಲಿದೆ.

ರೈಲು ಸಂಖ್ಯೆ 06231: ಎಸ್‌ಎಂವಿಟಿ ಬೆಂಗಳೂರು-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 10 ರಂದು ಸಂಜೆ 7 ಗಂಟೆಗೆ ಎಸ್‌ಎಂವಿಟಿ ಬೆಂಗಳೂರಿನಿಂದ ಹೊರಟು ಮರುದಿನ ಬೆಳಿಗ್ಗೆ 10.55 ಕ್ಕೆ ವಿಜಯಪುರ ತಲುಪಲಿದೆ.

ರೈಲು ಸಂಖ್ಯೆ 06232: ವಿಜಯಪುರ-ಎಸ್‌ಎಂವಿಟಿ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 14 ರಂದು ಸಂಜೆ 5 ಗಂಟೆಗೆ ವಿಜಯಪುರದಿಂದ ಹೊರಟು ಮರುದಿನ ಬೆಳಿಗ್ಗೆ 9.30 ಕ್ಕೆ ಎಸ್‌ಎಂವಿಟಿಗೆ ಆಗಮಿಸುತ್ತದೆ.

ಇದನ್ನೂ ಓದಿ: ದೀಪಾವಳಿ: KSRTC ಯಿಂದ 2 ಸಾವಿರ ಹೆಚ್ಚುವರಿ ವಿಶೇಷ ಬಸ್​​ ವ್ಯವಸ್ಥೆ: ಇಲ್ಲಿದೆ ಮಾಹಿತಿ

ರೈಲು ಸಂಖ್ಯೆ 06585: ಎಸ್​ಎಂವಿಟಿ-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 10 ರಂದು ರಾತ್ರಿ 8 ಗಂಟೆಗೆ ಎಸ್​​ಎಮ್​ವಿಟಿಯಿಂದ ಹೊರಟು ಮರುದಿನ ಬೆಳಿಗ್ಗೆ 8 ಗಂಟೆಗೆ ಬೆಳಗಾವಿಗೆ ಆಗಮಿಸುತ್ತದೆ. ರೈಲು ಸಂಖ್ಯೆ 06586: ಬೆಳಗಾವಿ-ಎಸ್​ಎಮ್​ವಿಟಿ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 14 ರಂದು ಸಂಜೆ 6.50 ಕ್ಕೆ ಬೆಳಗಾವಿಯಿಂದ ಹೊರಟು ಮರುದಿನ ಬೆಳಿಗ್ಗೆ 6 ಗಂಟೆಗೆ ಎಸ್​ಎಮ್​ವಿಟಿಗೆ ಆಗಮಿಸುತ್ತದೆ.

ಈ ಮೇಲೆ ತಿಳಿಸಿದ ಪ್ರತಿಯೊಂದು ರೈಲುಗಳು 16 ಕೋಚ್‌ಗಳನ್ನು ಒಳಗೊಂಡಿರುತ್ತವೆ. ಇದರಲ್ಲಿ ಒಂದು ಎಸಿ ಟು-ಟೈರ್, ಮೂರು ಎಸಿ ತ್ರೀ-ಟೈರ್, ಎಂಟು ಸ್ಲೀಪರ್ ಕ್ಲಾಸ್, ಎರಡು ಸಾಮಾನ್ಯ ಸೆಕೆಂಡ್ ಕ್ಲಾಸ್ ಮತ್ತು ಎರಡು ಸೆಕೆಂಡ್ ಕ್ಲಾಸ್ ಲಗೇಜ್-ಕಮ್-ಬ್ರೇಕ್-ವ್ಯಾನ್‌ಗಳು/ಅಂಗವಿಕಲ ಸ್ನೇಹಿ ಕಂಪಾರ್ಟ್‌ಮೆಂಟ್‌ಗಳು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ