AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಋತ್ಯ ರೈಲ್ವೆಯಿಂದ ದೀಪಾವಳಿ ಹಬ್ಬಕ್ಕೆ 2 ವಿಶೇಷ ಎಕ್ಸಪ್ರೆಸ್​ ರೈಲು: ಯಾವ ಯಾವ ನಗರ ಮಧ್ಯೆ ಸಂಚಾರ? ಇಲ್ಲಿದೆ ಮಾಹಿತಿ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ಮತ್ತು ಪ್ರಯಾಣಿಕರ ಮನವಿ ಮೇರೆಗೆ ನೈಋತ್ಯ ರೈಲ್ವೆಯು ಎರಡು ವಿಶೇಷ ಎಕ್ಸಪ್ರೆಸ್​ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಯಾವ ಯಾವ ನಗರಗಳ ಮಧ್ಯೆ ಸಂಚರಿಸಲಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ನೈಋತ್ಯ ರೈಲ್ವೆಯಿಂದ ದೀಪಾವಳಿ ಹಬ್ಬಕ್ಕೆ 2 ವಿಶೇಷ ಎಕ್ಸಪ್ರೆಸ್​ ರೈಲು: ಯಾವ ಯಾವ ನಗರ ಮಧ್ಯೆ ಸಂಚಾರ? ಇಲ್ಲಿದೆ ಮಾಹಿತಿ
ರೈಲು
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Nov 06, 2023 | 8:03 AM

Share

ಹುಬ್ಬಳ್ಳಿ ನ.06: ಇನ್ನೇನು ಕೆಲವೇ ದಿನಗಳಲ್ಲಿ ಬೆಳಕಿನ ಹಬ್ಬ ದೀಪಾವಳಿ (Deepavali) ಬಂದೇ ಬಿಡುತ್ತದೆ. ಹಬ್ಬದ ಸಮಯದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ಮತ್ತು ಪ್ರಯಾಣಿಕರ ಮನವಿ ಮೇರೆಗೆ ನೈಋತ್ಯ ರೈಲ್ವೆಯು (SWR) ಸರ್​ಎಂ ವಿಶ್ವೇಶ್ವರಯ್ಯ ಟರ್ಮಿನಲ್ (SMVT) ಬೆಂಗಳೂರು-ವಿಜಯಪುರ ಮತ್ತು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳನ್ನು (Train) ಓಡಿಸಲಿದೆ.

ರೈಲು ಸಂಖ್ಯೆ 06231: ಎಸ್‌ಎಂವಿಟಿ ಬೆಂಗಳೂರು-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 10 ರಂದು ಸಂಜೆ 7 ಗಂಟೆಗೆ ಎಸ್‌ಎಂವಿಟಿ ಬೆಂಗಳೂರಿನಿಂದ ಹೊರಟು ಮರುದಿನ ಬೆಳಿಗ್ಗೆ 10.55 ಕ್ಕೆ ವಿಜಯಪುರ ತಲುಪಲಿದೆ.

ರೈಲು ಸಂಖ್ಯೆ 06232: ವಿಜಯಪುರ-ಎಸ್‌ಎಂವಿಟಿ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 14 ರಂದು ಸಂಜೆ 5 ಗಂಟೆಗೆ ವಿಜಯಪುರದಿಂದ ಹೊರಟು ಮರುದಿನ ಬೆಳಿಗ್ಗೆ 9.30 ಕ್ಕೆ ಎಸ್‌ಎಂವಿಟಿಗೆ ಆಗಮಿಸುತ್ತದೆ.

ಇದನ್ನೂ ಓದಿ: ದೀಪಾವಳಿ: KSRTC ಯಿಂದ 2 ಸಾವಿರ ಹೆಚ್ಚುವರಿ ವಿಶೇಷ ಬಸ್​​ ವ್ಯವಸ್ಥೆ: ಇಲ್ಲಿದೆ ಮಾಹಿತಿ

ರೈಲು ಸಂಖ್ಯೆ 06585: ಎಸ್​ಎಂವಿಟಿ-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 10 ರಂದು ರಾತ್ರಿ 8 ಗಂಟೆಗೆ ಎಸ್​​ಎಮ್​ವಿಟಿಯಿಂದ ಹೊರಟು ಮರುದಿನ ಬೆಳಿಗ್ಗೆ 8 ಗಂಟೆಗೆ ಬೆಳಗಾವಿಗೆ ಆಗಮಿಸುತ್ತದೆ. ರೈಲು ಸಂಖ್ಯೆ 06586: ಬೆಳಗಾವಿ-ಎಸ್​ಎಮ್​ವಿಟಿ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 14 ರಂದು ಸಂಜೆ 6.50 ಕ್ಕೆ ಬೆಳಗಾವಿಯಿಂದ ಹೊರಟು ಮರುದಿನ ಬೆಳಿಗ್ಗೆ 6 ಗಂಟೆಗೆ ಎಸ್​ಎಮ್​ವಿಟಿಗೆ ಆಗಮಿಸುತ್ತದೆ.

ಈ ಮೇಲೆ ತಿಳಿಸಿದ ಪ್ರತಿಯೊಂದು ರೈಲುಗಳು 16 ಕೋಚ್‌ಗಳನ್ನು ಒಳಗೊಂಡಿರುತ್ತವೆ. ಇದರಲ್ಲಿ ಒಂದು ಎಸಿ ಟು-ಟೈರ್, ಮೂರು ಎಸಿ ತ್ರೀ-ಟೈರ್, ಎಂಟು ಸ್ಲೀಪರ್ ಕ್ಲಾಸ್, ಎರಡು ಸಾಮಾನ್ಯ ಸೆಕೆಂಡ್ ಕ್ಲಾಸ್ ಮತ್ತು ಎರಡು ಸೆಕೆಂಡ್ ಕ್ಲಾಸ್ ಲಗೇಜ್-ಕಮ್-ಬ್ರೇಕ್-ವ್ಯಾನ್‌ಗಳು/ಅಂಗವಿಕಲ ಸ್ನೇಹಿ ಕಂಪಾರ್ಟ್‌ಮೆಂಟ್‌ಗಳು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ