AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಂಕೆ ಕಾಟಕ್ಕೆ ಅನ್ನದಾತರ ಪರದಾಟ; ಬೀದರ್ ರೈತರು ಹೈರಾಣು

ಹಿಂಡು ಹಿಂಡಾಗಿ ಹೊಲಕ್ಕೆ ನುಗ್ಗುವ ಜಿಂಕೆಗಳು ಬೆಳೆಯನ್ನು ತಿಂದು ಹಾನಿ ಮಾಡುತ್ತಿವೆ. ಗೆಣುದ್ದ ಬೆಳೆದ ಉದ್ದು ಮತ್ತು ಸೋಯಾವನ್ನು ಕಾಡು ಪ್ರಾಣಿಗಳು ತಿನ್ನುತ್ತಿವೆ. ಈ ವರ್ಷ ಸಕಾಲಕ್ಕೆ ಉತ್ತಮ ಮಳೆಯಾಗಿ ಬೆಳೆ ಚೆನ್ನಾಗಿ ಬಂದಿದೆ.

ಜಿಂಕೆ ಕಾಟಕ್ಕೆ ಅನ್ನದಾತರ ಪರದಾಟ; ಬೀದರ್ ರೈತರು ಹೈರಾಣು
ಬೆಳೆಯನ್ನು ತಿನ್ನುತ್ತಿರುವ ಜಿಂಕೆ ಹಿಂಡು
TV9 Web
| Edited By: |

Updated on: Jul 10, 2021 | 9:26 AM

Share

ಬೀದರ್: ಕೊರೊನಾದಿಂದಾಗಿ ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗಲಿಲ್ಲ. ಲಾಕ್​ಡೌನ್​ ಜಾರಿಯಿದ್ದ ಕಾರಣ ನಿರೀಕ್ಷೆಗೆ ತಕ್ಕಂತೆ ವ್ಯಾಪಾರ ಆಗಲಿಲ್ಲ. ಇದರಿಂದ ಅನಿವಾರ್ಯವಾಗಿ ರೈತನೇ ತಾನು ಬೆಳೆದ ಬೆಳೆಯನ್ನು ನಾಶಮಾಡುವ ಪರಿಸ್ಥಿತಿ ಎದುರಾಗಿತ್ತು. ಈ ನಡುವೆ ಕಾಡು ಪ್ರಾಣಿಗಳ ಕಾಟ ರೈತರಿಗೆ ದೊಡ್ಡ ತಲೆನೋವಾಗಿದೆ. ಜಿಂಕೆ ಕಾಟಕ್ಕೆ ಬೀದರ್ ಜಿಲ್ಲೆಯ ರೈತರು ಬೆಚ್ಚಿಬಿದ್ದಿದ್ದಾರೆ. ಬೆಳೆದ ಬೆಳೆಯನ್ನು ಉಳಿಸಿಕೊಳ್ಳಲು ಪರದಾಡುತ್ತಿದ್ದು, ಜಿಲ್ಲೆಯ ಕಮಲನಗರ-ಔರಾದ್ ತಾಲೂಕಿನ ರೈತರು ಹೈರಾಣಾಗಿದ್ದಾರೆ.

ಹಿಂಡು ಹಿಂಡಾಗಿ ಹೊಲಕ್ಕೆ ನುಗ್ಗುವ ಜಿಂಕೆಗಳು ಬೆಳೆಯನ್ನು ತಿಂದು ಹಾನಿ ಮಾಡುತ್ತಿವೆ. ಗೆಣುದ್ದ ಬೆಳೆದ ಉದ್ದು ಮತ್ತು ಸೋಯಾವನ್ನು ಕಾಡು ಪ್ರಾಣಿಗಳು ತಿನ್ನುತ್ತಿವೆ. ಈ ವರ್ಷ ಸಕಾಲಕ್ಕೆ ಉತ್ತಮ ಮಳೆಯಾಗಿ ಬೆಳೆ ಚೆನ್ನಾಗಿ ಬಂದಿದೆ. ಆದರೆ ಜಿಂಕೆಗಳು ಬೆಳೆಯನ್ನು ತಿಂದು ಹಾಳು ಮಾಡುತ್ತಿವೆ. ಸಾಲಾ ಸೋಲ ಮಾಡಿ ಬಿತ್ತಿದ ಬೆಳೆಯನ್ನ ಮೊಳಕೆಯಲ್ಲಿಯೇ ಜಿಂಕೆಗಳು ತಿನ್ನುತ್ತಿವೆ.

ಕಳೆದ ಎರಡು ವರ್ಷದಿಂದ ಜಿಲ್ಲೆಯಲ್ಲಿ ಜಿಂಕೆಗಳ ಸಂಖ್ಯೆ ದುಪ್ಪಟ್ಟಾಗಿದ್ದು, ಜಿಂಕೆಗಳಿಂದ ಬೆಳೆಯನ್ನು ರಕ್ಷಿಸಿ ಎಂದು ಅರಣ್ಯ ಇಲಾಖೆಗೆ ರೈತರು ಅಲೆದು ಅಲೆದು ಸುಸ್ತಾಗಿದ್ದಾರೆ. ಒಂದೊಂದು ಗುಂಪಿನಲ್ಲಿ ನೂರರಿಂದ ಇನ್ನೂರರ ಸಂಖ್ಯೆಯಲ್ಲಿ ಜಿಂಕೆ ಹಿಂಡು ಬಂದು ಬೆಳೆಯನ್ನು ತಿನ್ನುತ್ತಿವೆ. ಒಂದು ಸಲ ರೈತನ ಹೊಲಕ್ಕೆ ಜಿಂಕೆ ಹಿಂಡು ನುಗ್ಗಿದರೆ ಒಂದು ಎಕರೆಯಷ್ಟು ಬೆಳೆ ಹಾನಿಯಾಗುತ್ತದೆ. ಒಂದೆರಡು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರಿಗೆ ಇದರಿಂದ ಭಾರೀ ನಷ್ಟವಾಗುತ್ತದೆ.

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಜೀತ, ಬಾಲಕಾರ್ಮಿಕ ಪದ್ಧತಿ ಜೀವಂತ ಆರೋಪ; ದಾಳಿ ವೇಳೆ ಸುಮಾರು 10 ಮಕ್ಕಳ ರಕ್ಷಣೆ

Karnataka Dams: ಮುಂಗಾರು ಮಳೆ ಮತ್ತೆ ಅಬ್ಬರಿಸತೊಡಗಿದೆ; ರಾಜ್ಯದ 12 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೀಗಿದೆ

(Deer are destroying crops in bidar)

Follow Us
Web contact
Web contact

TV9 Kannada

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?