AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಶಿವಾನಂದ ಪಾಟೀಲ್ ವಿರುದ್ಧ ಮಾನಹಾನಿಕರ ಹೇಳಿಕೆ: ಶಾಸಕ ಯತ್ನಾಳ್​ಗೆ ಕೋರ್ಟ್​ನಿಂದ ನೋಟಿಸ್​

ಲೋಕಸಭಾ ಚುನಾವಣೆ ವೇಳೆ ಸಚಿವ ಶಿವಾನಂದ ಪಾಟೀಲ್ ವಿರುದ್ಧ ಶಾಸಕ ಯತ್ನಾಳ್ ಮಾಡಿದ್ದ ಭ್ರಷ್ಟಾಚಾರದ ಸುಳ್ಳು ಆರೋಪದಿಂದ ವರ್ಚಸ್ಸಿಗೆ ಧಕ್ಕೆಯಾಗಿದೆ. ಹೀಗಾಗಿ ಮಾನನಷ್ಟ ಪ್ರಕರಣ ದಾಖಲಿಸುವಂತೆ ಖಾಸಗಿ ದೂರು ನೀಡಿದ್ದರು. ಹಾಗಾಗಿ ಶಾಸಕ ಯತ್ನಾಳ್​ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ನೋಟಿಸ್ ನೀಡಲಾಗಿದೆ.

ಸಚಿವ ಶಿವಾನಂದ ಪಾಟೀಲ್ ವಿರುದ್ಧ ಮಾನಹಾನಿಕರ ಹೇಳಿಕೆ: ಶಾಸಕ ಯತ್ನಾಳ್​ಗೆ ಕೋರ್ಟ್​ನಿಂದ ನೋಟಿಸ್​
ಸಚಿವ ಶಿವಾನಂದ ಪಾಟೀಲ್ ವಿರುದ್ಧ ಮಾನಹಾನಿಕರ ಹೇಳಿಕೆ: ಶಾಸಕ ಯತ್ನಾಳ್​ಗೆ ಕೋರ್ಟ್​ನಿಂದ ನೋಟಿಸ್​
Ramesha M
| Edited By: |

Updated on:Jul 15, 2024 | 9:02 PM

Share

ಬೆಂಗಳೂರು, ಜುಲೈ 15: ಸಚಿವ ಶಿವಾನಂದ ಪಾಟೀಲ್ (Shivanand Patil) ವಿರುದ್ಧ ಮಾನಹಾನಿಕರ ಹೇಳಿಕೆ ಹಿನ್ನೆಲೆ ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು. ಇದೀಗ ದೂರು ಸಂಬಂಧ ಯತ್ನಾಳ್​ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ನೋಟಿಸ್ ನೀಡಲಾಗಿದೆ. ಲೋಕಸಭಾ ಚುನಾವಣೆ ವೇಳೆ ಯತ್ನಾಳ್​ ಮಾಡಿದ್ದ ಭ್ರಷ್ಟಾಚಾರದ ಸುಳ್ಳು ಆರೋಪದಿಂದ ವರ್ಚಸ್ಸಿಗೆ ಧಕ್ಕೆಯಾಗಿದೆ. ಹೀಗಾಗಿ ಮಾನನಷ್ಟ ಪ್ರಕರಣ ದಾಖಲಿಸುವಂತೆ ಖಾಸಗಿ ದೂರು ನೀಡಿದ್ದರು. ಹೀಗಾಗಿ ಇದೀಗ ನೋಟಿಸ್​ ನೀಡಲಾಗಿದೆ.

ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಜು. 18ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಜೆಡಿಎಸ್ ಎಂಎಲ್​ಸಿ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಕೇಸ್​ಗೆ ಸಂಬಂಧಿಸಿದಂತೆ 2ನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದ ಸೂರಜ್​ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಲ್ಲಿ ವಿಚಾರಣೆ ಮಾಡಿದ್ದು, ಜುಲೈ 18ಕ್ಕೆ ಆದೇಶ ಕಾಯ್ದಿರಿಸಿದೆ.

ಇದನ್ನೂ ಓದಿ: ಯತ್ನಾಳ್​ ವಿರುದ್ದ ನಕಲಿ ಮತದಾನ ಆರೋಪ ಮಾಡಿದ್ದ ಅಬ್ದುಲ್​ಗೆ 1 ಲಕ್ಷ ದಂಡ ವಿಧಿಸಿದ ಕೋರ್ಟ್

ಸೂರಜ್ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಕೇಸ್​ನ ತನಿಖೆ ಚುರುಕುಗೊಂಡಿದೆ. ಜೂನ್ 22ರಂದು ಅರಕಲಗೂಡು ಮೂಲದ ಯುವಕ ಹಾಗೂ ಜೂನ್ 25ರಂದು ಹೊಳೆನರಸೀಪುರ ಮೂಲದ ಯುವಕ ಸೂರಜ್ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯದ ಕೇಸ್ ದಾಖಲಿಸಿದ್ದಾರೆ. ಎರಡೂ ಕೇಸ್​ನ ತನಿಖೆ ನಡೆಸುತ್ತಿರುವ ಸಿಐಡಿ ಹಾಸನದ ಗನ್ನಿಕಡ ತೋಟದ ಮನೆಯಲ್ಲಿ ಸ್ಥಳ ಮಹಜರು ಮಾಡಿತ್ತು. ಸಂತ್ರಸ್ತನನ್ನು ಕರೆ ತಂದು ಸ್ಥಳ ಮಹಜರು ಪೂರ್ಣಗೊಳಿಸಿತ್ತು.

ಇದನ್ನೂ ಓದಿ: ಉಚಿತ ಭಾಗ್ಯಗಳಿಂದ ಕರ್ನಾಟಕದ ಹಣಕಾಸು ಸ್ಥಿತಿ ಗಂಭೀರ: ಕ್ರಮಕ್ಕೆ ಆಗ್ರಹಿಸಿ ನಿರ್ಮಲಾ ಸೀತಾರಾಮನ್​ಗೆ ಯತ್ನಾಳ್ ಪತ್ರ

ಸೂರಜ್​ಗೆ ಬ್ಲ್ಯಾಕ್​ಮೇಲ್ ಮಾಡಲಾಗುತ್ತಿದೆ ಎಂದು ದೂರು ಕೊಟ್ಟಿದ್ದವನೇ ಸಂತ್ರಸ್ತನಾಗಿದ್ದಾನೆ. ಯುವಕನಿಗೆ ಲೈಂಗಿಕ ದೌರ್ಜನ್ಯ ಕೊಟ್ಟ ಆರೋಪದಲ್ಲಿ ಸದ್ಯ ಸೂರಜ್ ರೇವಣ್ಣ, ಸಿಐಡಿ ವಶದಲ್ಲಿ ವಿಚಾರಣೆ ಎದುರಿಸ್ತಿದ್ದಾರೆ. ಈ ಬೆನ್ನಲ್ಲೇ, ಮೊದಲ ಕೇಸ್ ದಾಖಲಾಗುವ ಮುನ್ನ, ಜೊತೆಗೆ ನಿಂತಿದ್ದವನೇ ಉಲ್ಟಾ ಹೊಡೆದಿದ್ದ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:38 pm, Mon, 15 July 24

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ