ಜಪಾನ್‌, ದಕ್ಷಿಣ ಕೊರಿಯಾಗೆ ತೆರಳಿದ ಸಚಿವ ಎಂಬಿ ಪಾಟೀಲ್​ ನೇತೃತ್ವದ ನಿಯೋಗ: ಬಂಡವಾಳ ಹೂಡಿಕೆಗೆ ಆಹ್ವಾನ

ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್​, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ, ಇತರೆ ಉನ್ನತ ಅಧಿಕಾರಿಗಳು ಸಹ ಸಚಿವರು ಸೇರಿದಂತೆ ಸಚಿವ ಸಚಿವ ಎಂ.ಬಿ.ಪಾಟೀಲ್​ ನೇತೃತ್ವದ ನಿಯೋಗವು ಇಂದಿನಿಂದ 10 ದಿನ ವಿದೇಶ ಪ್ರವಾಸ ಕೈಗೊಂಡಿದೆ. ಆ ಮೂಲಕ ಜಪಾನ್‌ ಮತ್ತು ದಕ್ಷಿಣ ಕೊರಿಯಾಗೆ ಭೇಟಿ ನೀಡಿ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗಿಯಾಗುವಂತೆ ಆಹ್ವಾನ ನೀಡಲಿದೆ.

ಜಪಾನ್‌, ದಕ್ಷಿಣ ಕೊರಿಯಾಗೆ ತೆರಳಿದ ಸಚಿವ ಎಂಬಿ ಪಾಟೀಲ್​ ನೇತೃತ್ವದ ನಿಯೋಗ: ಬಂಡವಾಳ ಹೂಡಿಕೆಗೆ ಆಹ್ವಾನ
ಜಪಾನ್‌, ದಕ್ಷಿಣ ಕೊರಿಯಾಗೆ ತೆರಳಿದ ಸಚಿವ ಎಂಬಿ ಪಾಟೀಲ್​ ನೇತೃತ್ವದ ನಿಯೋಗ: ಬಂಡವಾಳ ಹೂಡಿಕೆಗೆ ಆಹ್ವಾನ
Edited By:

Updated on: Jun 22, 2024 | 10:41 PM

ಬೆಂಗಳೂರು, ಜೂನ್​ 22: ಬೃಹತ್​ ಹಾಗೂ ಮಧ್ಯಮ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಸಚಿವ ಎಂ.ಬಿ.ಪಾಟೀಲ್ (MB Patil) ನೇತೃತ್ವದ ನಿಯೋಗವು ಇಂದಿನಿಂದ 10 ದಿನ ವಿದೇಶ ಪ್ರವಾಸ ಕೈಗೊಂಡಿದೆ.  ಇಂದು ರಾತ್ರಿ ಕೆಂಪೇಗೌಡ ಏರ್​​ಪೋರ್ಟ್​ನಿಂದ ತೆರಳುವ ನಿಯೋಗ ಜಪಾನ್‌ ಮತ್ತು ದಕ್ಷಿಣ ಕೊರಿಯಾಗೆ ಭೇಟಿ ನೀಡಿ ಜಾಗತಿಕ ಹೂಡಿಕೆದಾರರ (investment) ಸಮಾವೇಶದಲ್ಲಿ ಭಾಗಿಯಾಗುವಂತೆ ಆಹ್ವಾನ ನೀಡಲಿದೆ.

ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್​, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ, ಇತರೆ ಉನ್ನತ ಅಧಿಕಾರಿಗಳು ಸಹ ಸಚಿವರ ನಿಯೋಗದಲ್ಲಿ ಇರಲಿದ್ದಾರೆ.

ಇದನ್ನೂ ಓದಿ: ಆದಾಯ ಹೆಚ್ಚಳಕ್ಕೆ ಸಲಹೆ ನೀಡಲು ವಿದೇಶಿ ಕಂಪನಿಗಳಿಗೆ ಹಣವನ್ನೇಕೆ ವ್ಯರ್ಥ ಮಾಡುತ್ತೀರಿ: ಲಹರ್ ಸಿಂಗ್

2 ದೇಶಗಳ ಪ್ರಮುಖ ಉದ್ಯಮಿಗಳಿಗೆ ಆಹ್ವಾನ ನೀಡಲಿರುವ ನಿಯೋಗ, 2 ದೇಶಗಳ ಪ್ರಮುಖ ಕಂಪನಿಗಳಿಗೆ ರಾಜ್ಯದಲ್ಲಿನ ಉದ್ಯಮ ಸ್ನೇಹಿ ವಾತಾವರಣ ಮನದಟ್ಟು ಮಾಡುವ ಪ್ರಯತ್ನ ಮಾಡಲಿದೆ. 27ಕ್ಕೂ ಹೆಚ್ಚು ಕಂಪನಿಗಳ ಜೊತೆ ನಿಯೋಗ ಸಮಾಲೋಚನೆ ನಡೆಸಲಿದೆ. ಜೊತೆಗೆ ಟೋಕಿಯೋ ಮತ್ತು ಸೋಲ್‌ನಲ್ಲಿ ನಿಯೋಗ ರೋಡ್​ಶೋ ನಡೆಸಲಿದೆ.

ರಾಜ್ಯದಲ್ಲಿ ವರಮಾನ ಸಂಗ್ರಹ ಹೆಚ್ಚಳಕ್ಕೆ ಇರುವ ಅವಕಾಶಗಳ ಕುರಿತು ಹಣಕಾಸು ಇಲಾಖೆಗೆ ಸಲಹೆ ನೀಡಲು ಬಾಸ್ಟನ್‌ ಕನ್ಸಲ್ಟಿಂಗ್‌ ಗ್ರೂ‍ಪ್‌ ಕಂಪನಿಯನ್ನು‌ ಸರ್ಕಾರ ನೇಮಿಸಿದೆ. ಈ ಕಂಪನಿ ಇತ್ತೀಚೆಗೆ ಪ್ರಾಥಮಿಕ ವರದಿಯೊಂದನ್ನು ಸಲ್ಲಿಸಿದ್ದು, ಜಮೀನುಗಳ ನಗರೀಕರಣ ಅಥವಾ ರಾಜ್ಯ ನಿರ್ದೇಶಿತ ನಗರೀಕರಣ ಮಾದರಿಗಳ ಮೂಲಕ ವರಮಾನ ಸಂಗ್ರಹ ಹೆಚ್ಚಿಸಿಕೊಳ್ಳಬಹುದು ಎಂದು ಸಲಹೆ ಕೂಡ ನೀಡಿದೆ.

ಇದನ್ನೂ ಓದಿ: ರಾಜ್ಯದ ವರಮಾನ ಹೆಚ್ಚಿಸಲು ವಿದೇಶಿ ಕಂಪನಿಗಳಿಂದ ಸಲಹೆ: ಬಿಜೆಪಿಗೆ ಅಸ್ತ್ರವಾದ ಕಾಂಗ್ರೆಸ್​ ನಡೆ

ಇದಕ್ಕೆ ವಿಪಕ್ಷ ಬಿಜೆಪಿ ಟೀಕೆ ಮಾಡುತ್ತಿದ್ದು, ಇದು ಆಶ್ಚರ್ಯ ಮತ್ತು ಶಾಕಿಂಗ್, ಸಿಎಂ ಸುತ್ತ ತಜ್ಞ ಅಧಿಕಾರಿಗಳು ಇದ್ರೂ ವಿದೇಶಿ ಕನ್ಸಲ್ಟೆನ್ಸಿ ನೇಮಕ ಮಾಡಿದ್ದಾರೆ ಅಂತಾ ಬಿಜೆಪಿ‌ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಕ್ರೋಶ ಹೊರಹಾಕಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:31 pm, Sat, 22 June 24

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us