AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಕೆ.ಶಿವಕುಮಾರ್​ಗೆ ಈ ಬಾರಿ ಆಯುಧಪೂಜೆ, ನವರಾತ್ರಿ ತಿಹಾರ್​​ ಜೈಲಿನಲ್ಲೇ

ದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಈಗಾಗಲೇ ತಿಹಾರ್ ಜೈಲಿನಲ್ಲಿರುವ ಡಿ.ಕೆ.ಶಿವಕುಮಾರ್​ಗೆ ಮತ್ತೆ ಹಿನ್ನಡೆಯಾಗಿದೆ. ಡಿಕೆಶಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 14ಕ್ಕೆ ದೆಹಲಿ ಹೈಕೋರ್ಟ್​ ಮುಂದೂಡಿದೆ. ಅಲ್ಲದೆ ಅ.14ರೊಳಗೆ ಆಕ್ಷೇಪಣೆ ಅರ್ಜಿ ಸಲ್ಲಿಸಲು ಹೈಕೋರ್ಟ್​ನ ನ್ಯಾ.ಸುರೇಶ್​ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಇ.ಡಿಗೆ ನೋಟಿಸ್ ನೀಡಿದೆ. ಗೌರಿ, ಗಣೇಶ ಹಬ್ಬಕ್ಕೂ ಇ.ಡಿಯಿಂದ ರಿಲೀಫ್ ಸಿಗದ ಡಿಕೆಶಿಗೆ ಈಗ ದಸರಾಗೂ ಜಾಮೀನು ಸಿಕ್ಕಿಲ್ಲ. ಹೀಗಾಗಿ ನವರಾತ್ರಿ ಮುಗಿಯುವವರೆಗೂ ಕಾಂಗ್ರೆಸ್​ನ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ತಿಹಾರ್ ಜೈಲಿನಲ್ಲೇ […]

ಡಿ.ಕೆ.ಶಿವಕುಮಾರ್​ಗೆ ಈ ಬಾರಿ ಆಯುಧಪೂಜೆ, ನವರಾತ್ರಿ ತಿಹಾರ್​​ ಜೈಲಿನಲ್ಲೇ
ಸಾಧು ಶ್ರೀನಾಥ್​
|

Updated on:Sep 30, 2019 | 1:25 PM

Share

ದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಈಗಾಗಲೇ ತಿಹಾರ್ ಜೈಲಿನಲ್ಲಿರುವ ಡಿ.ಕೆ.ಶಿವಕುಮಾರ್​ಗೆ ಮತ್ತೆ ಹಿನ್ನಡೆಯಾಗಿದೆ. ಡಿಕೆಶಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 14ಕ್ಕೆ ದೆಹಲಿ ಹೈಕೋರ್ಟ್​ ಮುಂದೂಡಿದೆ. ಅಲ್ಲದೆ ಅ.14ರೊಳಗೆ ಆಕ್ಷೇಪಣೆ ಅರ್ಜಿ ಸಲ್ಲಿಸಲು ಹೈಕೋರ್ಟ್​ನ ನ್ಯಾ.ಸುರೇಶ್​ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಇ.ಡಿಗೆ ನೋಟಿಸ್ ನೀಡಿದೆ. ಗೌರಿ, ಗಣೇಶ ಹಬ್ಬಕ್ಕೂ ಇ.ಡಿಯಿಂದ ರಿಲೀಫ್ ಸಿಗದ ಡಿಕೆಶಿಗೆ ಈಗ ದಸರಾಗೂ ಜಾಮೀನು ಸಿಕ್ಕಿಲ್ಲ. ಹೀಗಾಗಿ ನವರಾತ್ರಿ ಮುಗಿಯುವವರೆಗೂ ಕಾಂಗ್ರೆಸ್​ನ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ತಿಹಾರ್ ಜೈಲಿನಲ್ಲೇ ದಿನ ಕಳೆಯಬೇಕಾಗಿದೆ.

ಡಿ.ಕೆ.ಶಿವಕುಮಾರ್ ಕರ್ನಾಟಕ ಬಿಟ್ಟು ದೆಹಲಿಯಲ್ಲಿ ಇ.ಡಿ ಅಂಗಳ ತಲುಪಿ ಸರಿಯಾಗಿ ಒಂದು ತಿಂಗಳಾಗಿದೆ. ಈ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯವು ಡಿ.ಕೆ.ಶಿವಕುಮಾರ್ ಅವರ ಸೋದರ ಡಿ.ಕೆ.ಸುರೇಶ್​ಗೂ ವಿಚಾರಣೆಗೆ ಹಾಜರಾಗುವಂತೆ ಬುಲಾವ್ ನೀಡಿದೆ. ಕಳೆದೊಂದು ತಿಂಗಳಿಂದ ದಿಲ್ಲಿಯಲ್ಲಿ ಅಣ್ಣನಿಗೆ ನೆರಳಾಗಿ ನಿಂತಿರುವ ಸುರೇಶ್​ಗೂ ಈಗ ಇ.ಡಿ ಕಾಟ ಶುರುವಾಗಿದೆ. ಈ ಸಂಬಂಧ ದೆಹಲಿಯಲ್ಲಿ ವಕೀಲರನ್ನ ಭೇಟಿ ಮಾಡಿದ ಡಿ.ಕೆ.ಸುರೇಶ್, ಅಣ್ಣನ ಜಾಮೀನು ಅರ್ಜಿ ಮತ್ತು ತಮಗೆ ನೀಡಿರುವ ಸಮನ್ಸ್​ ಬಗ್ಗೆ ವಕೀಲರೊಂದಿಗೆ ಡಿ.ಕೆ.ಸುರೇಶ್​ ಚರ್ಚೆ ನಡೆಸಿದ್ದಾರೆ.

ಈಗ ತಾನೇ ಡಿ.ಕೆ.ಶಿವಕುಮಾರ್ ಅವರನ್ನ​ ಭೇಟಿಯಾಗಿದ್ದೆ, ಅವರು ಆರೋಗ್ಯವಾಗಿದ್ದಾರೆ. ಹಬ್ಬದ ಪ್ರಯುಕ್ತ ಅ.10ರವರೆಗೂ ನ್ಯಾಯಾಲಯ ರಜೆ ಇದೆ. ಹಾಗಾಗಿ ವಕೀಲರು ಮತ್ತು ಅಧಿಕಾರಿಗಳು ಇನ್ನೂ 4 ದಿನ ಬೇಕೆಂದು ಕೇಳಿದ್ರು. ಹೀಗಾಗಿ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ಅ.14ಕ್ಕೆ ಕೋರ್ಟ್​ ಮುಂದೂಡಿದೆ ಎಂದು ದೆಹಲಿಯಲ್ಲಿ ಡಿ.ಕೆ.ಸುರೇಶ್​ ಮಾಹಿತಿ ನೀಡಿದ್ರು. ಈ ಮಧ್ಯೆ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ನನಗೆ ಯಾವುದೇ ಸಮನ್ಸ್​ ಬಂದಿಲ್ಲ. ಒಂದು ವೇಳೆ ಸಮನ್ಸ್​ ಬಂದ್ರೆ ಒಂದು ನಿಮಿಷವೂ ತಡ ಮಾಡದೆ ಸಂಬಂಧಪಟ್ಟ ಅಧಿಕಾರಿಗಳ ಮುಂದೆ ಹಾಜರಾಗುತ್ತೇನೆ ಎಂದು ತಿಳಿಸಿದ್ರು.

Published On - 12:22 pm, Mon, 30 September 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ