AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಕೆ.ಶಿವಕುಮಾರ್​ಗೆ ಈ ಬಾರಿ ಆಯುಧಪೂಜೆ, ನವರಾತ್ರಿ ತಿಹಾರ್​​ ಜೈಲಿನಲ್ಲೇ

ದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಈಗಾಗಲೇ ತಿಹಾರ್ ಜೈಲಿನಲ್ಲಿರುವ ಡಿ.ಕೆ.ಶಿವಕುಮಾರ್​ಗೆ ಮತ್ತೆ ಹಿನ್ನಡೆಯಾಗಿದೆ. ಡಿಕೆಶಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 14ಕ್ಕೆ ದೆಹಲಿ ಹೈಕೋರ್ಟ್​ ಮುಂದೂಡಿದೆ. ಅಲ್ಲದೆ ಅ.14ರೊಳಗೆ ಆಕ್ಷೇಪಣೆ ಅರ್ಜಿ ಸಲ್ಲಿಸಲು ಹೈಕೋರ್ಟ್​ನ ನ್ಯಾ.ಸುರೇಶ್​ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಇ.ಡಿಗೆ ನೋಟಿಸ್ ನೀಡಿದೆ. ಗೌರಿ, ಗಣೇಶ ಹಬ್ಬಕ್ಕೂ ಇ.ಡಿಯಿಂದ ರಿಲೀಫ್ ಸಿಗದ ಡಿಕೆಶಿಗೆ ಈಗ ದಸರಾಗೂ ಜಾಮೀನು ಸಿಕ್ಕಿಲ್ಲ. ಹೀಗಾಗಿ ನವರಾತ್ರಿ ಮುಗಿಯುವವರೆಗೂ ಕಾಂಗ್ರೆಸ್​ನ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ತಿಹಾರ್ ಜೈಲಿನಲ್ಲೇ […]

ಡಿ.ಕೆ.ಶಿವಕುಮಾರ್​ಗೆ ಈ ಬಾರಿ ಆಯುಧಪೂಜೆ, ನವರಾತ್ರಿ ತಿಹಾರ್​​ ಜೈಲಿನಲ್ಲೇ
ಸಾಧು ಶ್ರೀನಾಥ್​
|

Updated on:Sep 30, 2019 | 1:25 PM

Share

ದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಈಗಾಗಲೇ ತಿಹಾರ್ ಜೈಲಿನಲ್ಲಿರುವ ಡಿ.ಕೆ.ಶಿವಕುಮಾರ್​ಗೆ ಮತ್ತೆ ಹಿನ್ನಡೆಯಾಗಿದೆ. ಡಿಕೆಶಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 14ಕ್ಕೆ ದೆಹಲಿ ಹೈಕೋರ್ಟ್​ ಮುಂದೂಡಿದೆ. ಅಲ್ಲದೆ ಅ.14ರೊಳಗೆ ಆಕ್ಷೇಪಣೆ ಅರ್ಜಿ ಸಲ್ಲಿಸಲು ಹೈಕೋರ್ಟ್​ನ ನ್ಯಾ.ಸುರೇಶ್​ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಇ.ಡಿಗೆ ನೋಟಿಸ್ ನೀಡಿದೆ. ಗೌರಿ, ಗಣೇಶ ಹಬ್ಬಕ್ಕೂ ಇ.ಡಿಯಿಂದ ರಿಲೀಫ್ ಸಿಗದ ಡಿಕೆಶಿಗೆ ಈಗ ದಸರಾಗೂ ಜಾಮೀನು ಸಿಕ್ಕಿಲ್ಲ. ಹೀಗಾಗಿ ನವರಾತ್ರಿ ಮುಗಿಯುವವರೆಗೂ ಕಾಂಗ್ರೆಸ್​ನ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ತಿಹಾರ್ ಜೈಲಿನಲ್ಲೇ ದಿನ ಕಳೆಯಬೇಕಾಗಿದೆ.

ಡಿ.ಕೆ.ಶಿವಕುಮಾರ್ ಕರ್ನಾಟಕ ಬಿಟ್ಟು ದೆಹಲಿಯಲ್ಲಿ ಇ.ಡಿ ಅಂಗಳ ತಲುಪಿ ಸರಿಯಾಗಿ ಒಂದು ತಿಂಗಳಾಗಿದೆ. ಈ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯವು ಡಿ.ಕೆ.ಶಿವಕುಮಾರ್ ಅವರ ಸೋದರ ಡಿ.ಕೆ.ಸುರೇಶ್​ಗೂ ವಿಚಾರಣೆಗೆ ಹಾಜರಾಗುವಂತೆ ಬುಲಾವ್ ನೀಡಿದೆ. ಕಳೆದೊಂದು ತಿಂಗಳಿಂದ ದಿಲ್ಲಿಯಲ್ಲಿ ಅಣ್ಣನಿಗೆ ನೆರಳಾಗಿ ನಿಂತಿರುವ ಸುರೇಶ್​ಗೂ ಈಗ ಇ.ಡಿ ಕಾಟ ಶುರುವಾಗಿದೆ. ಈ ಸಂಬಂಧ ದೆಹಲಿಯಲ್ಲಿ ವಕೀಲರನ್ನ ಭೇಟಿ ಮಾಡಿದ ಡಿ.ಕೆ.ಸುರೇಶ್, ಅಣ್ಣನ ಜಾಮೀನು ಅರ್ಜಿ ಮತ್ತು ತಮಗೆ ನೀಡಿರುವ ಸಮನ್ಸ್​ ಬಗ್ಗೆ ವಕೀಲರೊಂದಿಗೆ ಡಿ.ಕೆ.ಸುರೇಶ್​ ಚರ್ಚೆ ನಡೆಸಿದ್ದಾರೆ.

ಈಗ ತಾನೇ ಡಿ.ಕೆ.ಶಿವಕುಮಾರ್ ಅವರನ್ನ​ ಭೇಟಿಯಾಗಿದ್ದೆ, ಅವರು ಆರೋಗ್ಯವಾಗಿದ್ದಾರೆ. ಹಬ್ಬದ ಪ್ರಯುಕ್ತ ಅ.10ರವರೆಗೂ ನ್ಯಾಯಾಲಯ ರಜೆ ಇದೆ. ಹಾಗಾಗಿ ವಕೀಲರು ಮತ್ತು ಅಧಿಕಾರಿಗಳು ಇನ್ನೂ 4 ದಿನ ಬೇಕೆಂದು ಕೇಳಿದ್ರು. ಹೀಗಾಗಿ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ಅ.14ಕ್ಕೆ ಕೋರ್ಟ್​ ಮುಂದೂಡಿದೆ ಎಂದು ದೆಹಲಿಯಲ್ಲಿ ಡಿ.ಕೆ.ಸುರೇಶ್​ ಮಾಹಿತಿ ನೀಡಿದ್ರು. ಈ ಮಧ್ಯೆ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ನನಗೆ ಯಾವುದೇ ಸಮನ್ಸ್​ ಬಂದಿಲ್ಲ. ಒಂದು ವೇಳೆ ಸಮನ್ಸ್​ ಬಂದ್ರೆ ಒಂದು ನಿಮಿಷವೂ ತಡ ಮಾಡದೆ ಸಂಬಂಧಪಟ್ಟ ಅಧಿಕಾರಿಗಳ ಮುಂದೆ ಹಾಜರಾಗುತ್ತೇನೆ ಎಂದು ತಿಳಿಸಿದ್ರು.

Published On - 12:22 pm, Mon, 30 September 19

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ