AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಕೆ.ಶಿವಕುಮಾರ್​ಗೆ ಈ ಬಾರಿ ಆಯುಧಪೂಜೆ, ನವರಾತ್ರಿ ತಿಹಾರ್​​ ಜೈಲಿನಲ್ಲೇ

ದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಈಗಾಗಲೇ ತಿಹಾರ್ ಜೈಲಿನಲ್ಲಿರುವ ಡಿ.ಕೆ.ಶಿವಕುಮಾರ್​ಗೆ ಮತ್ತೆ ಹಿನ್ನಡೆಯಾಗಿದೆ. ಡಿಕೆಶಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 14ಕ್ಕೆ ದೆಹಲಿ ಹೈಕೋರ್ಟ್​ ಮುಂದೂಡಿದೆ. ಅಲ್ಲದೆ ಅ.14ರೊಳಗೆ ಆಕ್ಷೇಪಣೆ ಅರ್ಜಿ ಸಲ್ಲಿಸಲು ಹೈಕೋರ್ಟ್​ನ ನ್ಯಾ.ಸುರೇಶ್​ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಇ.ಡಿಗೆ ನೋಟಿಸ್ ನೀಡಿದೆ. ಗೌರಿ, ಗಣೇಶ ಹಬ್ಬಕ್ಕೂ ಇ.ಡಿಯಿಂದ ರಿಲೀಫ್ ಸಿಗದ ಡಿಕೆಶಿಗೆ ಈಗ ದಸರಾಗೂ ಜಾಮೀನು ಸಿಕ್ಕಿಲ್ಲ. ಹೀಗಾಗಿ ನವರಾತ್ರಿ ಮುಗಿಯುವವರೆಗೂ ಕಾಂಗ್ರೆಸ್​ನ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ತಿಹಾರ್ ಜೈಲಿನಲ್ಲೇ […]

ಡಿ.ಕೆ.ಶಿವಕುಮಾರ್​ಗೆ ಈ ಬಾರಿ ಆಯುಧಪೂಜೆ, ನವರಾತ್ರಿ ತಿಹಾರ್​​ ಜೈಲಿನಲ್ಲೇ
ಸಾಧು ಶ್ರೀನಾಥ್​
|

Updated on:Sep 30, 2019 | 1:25 PM

Share

ದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಈಗಾಗಲೇ ತಿಹಾರ್ ಜೈಲಿನಲ್ಲಿರುವ ಡಿ.ಕೆ.ಶಿವಕುಮಾರ್​ಗೆ ಮತ್ತೆ ಹಿನ್ನಡೆಯಾಗಿದೆ. ಡಿಕೆಶಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 14ಕ್ಕೆ ದೆಹಲಿ ಹೈಕೋರ್ಟ್​ ಮುಂದೂಡಿದೆ. ಅಲ್ಲದೆ ಅ.14ರೊಳಗೆ ಆಕ್ಷೇಪಣೆ ಅರ್ಜಿ ಸಲ್ಲಿಸಲು ಹೈಕೋರ್ಟ್​ನ ನ್ಯಾ.ಸುರೇಶ್​ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಇ.ಡಿಗೆ ನೋಟಿಸ್ ನೀಡಿದೆ. ಗೌರಿ, ಗಣೇಶ ಹಬ್ಬಕ್ಕೂ ಇ.ಡಿಯಿಂದ ರಿಲೀಫ್ ಸಿಗದ ಡಿಕೆಶಿಗೆ ಈಗ ದಸರಾಗೂ ಜಾಮೀನು ಸಿಕ್ಕಿಲ್ಲ. ಹೀಗಾಗಿ ನವರಾತ್ರಿ ಮುಗಿಯುವವರೆಗೂ ಕಾಂಗ್ರೆಸ್​ನ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ತಿಹಾರ್ ಜೈಲಿನಲ್ಲೇ ದಿನ ಕಳೆಯಬೇಕಾಗಿದೆ.

ಡಿ.ಕೆ.ಶಿವಕುಮಾರ್ ಕರ್ನಾಟಕ ಬಿಟ್ಟು ದೆಹಲಿಯಲ್ಲಿ ಇ.ಡಿ ಅಂಗಳ ತಲುಪಿ ಸರಿಯಾಗಿ ಒಂದು ತಿಂಗಳಾಗಿದೆ. ಈ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯವು ಡಿ.ಕೆ.ಶಿವಕುಮಾರ್ ಅವರ ಸೋದರ ಡಿ.ಕೆ.ಸುರೇಶ್​ಗೂ ವಿಚಾರಣೆಗೆ ಹಾಜರಾಗುವಂತೆ ಬುಲಾವ್ ನೀಡಿದೆ. ಕಳೆದೊಂದು ತಿಂಗಳಿಂದ ದಿಲ್ಲಿಯಲ್ಲಿ ಅಣ್ಣನಿಗೆ ನೆರಳಾಗಿ ನಿಂತಿರುವ ಸುರೇಶ್​ಗೂ ಈಗ ಇ.ಡಿ ಕಾಟ ಶುರುವಾಗಿದೆ. ಈ ಸಂಬಂಧ ದೆಹಲಿಯಲ್ಲಿ ವಕೀಲರನ್ನ ಭೇಟಿ ಮಾಡಿದ ಡಿ.ಕೆ.ಸುರೇಶ್, ಅಣ್ಣನ ಜಾಮೀನು ಅರ್ಜಿ ಮತ್ತು ತಮಗೆ ನೀಡಿರುವ ಸಮನ್ಸ್​ ಬಗ್ಗೆ ವಕೀಲರೊಂದಿಗೆ ಡಿ.ಕೆ.ಸುರೇಶ್​ ಚರ್ಚೆ ನಡೆಸಿದ್ದಾರೆ.

ಈಗ ತಾನೇ ಡಿ.ಕೆ.ಶಿವಕುಮಾರ್ ಅವರನ್ನ​ ಭೇಟಿಯಾಗಿದ್ದೆ, ಅವರು ಆರೋಗ್ಯವಾಗಿದ್ದಾರೆ. ಹಬ್ಬದ ಪ್ರಯುಕ್ತ ಅ.10ರವರೆಗೂ ನ್ಯಾಯಾಲಯ ರಜೆ ಇದೆ. ಹಾಗಾಗಿ ವಕೀಲರು ಮತ್ತು ಅಧಿಕಾರಿಗಳು ಇನ್ನೂ 4 ದಿನ ಬೇಕೆಂದು ಕೇಳಿದ್ರು. ಹೀಗಾಗಿ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ಅ.14ಕ್ಕೆ ಕೋರ್ಟ್​ ಮುಂದೂಡಿದೆ ಎಂದು ದೆಹಲಿಯಲ್ಲಿ ಡಿ.ಕೆ.ಸುರೇಶ್​ ಮಾಹಿತಿ ನೀಡಿದ್ರು. ಈ ಮಧ್ಯೆ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ನನಗೆ ಯಾವುದೇ ಸಮನ್ಸ್​ ಬಂದಿಲ್ಲ. ಒಂದು ವೇಳೆ ಸಮನ್ಸ್​ ಬಂದ್ರೆ ಒಂದು ನಿಮಿಷವೂ ತಡ ಮಾಡದೆ ಸಂಬಂಧಪಟ್ಟ ಅಧಿಕಾರಿಗಳ ಮುಂದೆ ಹಾಜರಾಗುತ್ತೇನೆ ಎಂದು ತಿಳಿಸಿದ್ರು.

Published On - 12:22 pm, Mon, 30 September 19

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ