AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಕೆ.ಶಿವಕುಮಾರ್​ಗೆ ಈ ಬಾರಿ ಆಯುಧಪೂಜೆ, ನವರಾತ್ರಿ ತಿಹಾರ್​​ ಜೈಲಿನಲ್ಲೇ

ದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಈಗಾಗಲೇ ತಿಹಾರ್ ಜೈಲಿನಲ್ಲಿರುವ ಡಿ.ಕೆ.ಶಿವಕುಮಾರ್​ಗೆ ಮತ್ತೆ ಹಿನ್ನಡೆಯಾಗಿದೆ. ಡಿಕೆಶಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 14ಕ್ಕೆ ದೆಹಲಿ ಹೈಕೋರ್ಟ್​ ಮುಂದೂಡಿದೆ. ಅಲ್ಲದೆ ಅ.14ರೊಳಗೆ ಆಕ್ಷೇಪಣೆ ಅರ್ಜಿ ಸಲ್ಲಿಸಲು ಹೈಕೋರ್ಟ್​ನ ನ್ಯಾ.ಸುರೇಶ್​ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಇ.ಡಿಗೆ ನೋಟಿಸ್ ನೀಡಿದೆ. ಗೌರಿ, ಗಣೇಶ ಹಬ್ಬಕ್ಕೂ ಇ.ಡಿಯಿಂದ ರಿಲೀಫ್ ಸಿಗದ ಡಿಕೆಶಿಗೆ ಈಗ ದಸರಾಗೂ ಜಾಮೀನು ಸಿಕ್ಕಿಲ್ಲ. ಹೀಗಾಗಿ ನವರಾತ್ರಿ ಮುಗಿಯುವವರೆಗೂ ಕಾಂಗ್ರೆಸ್​ನ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ತಿಹಾರ್ ಜೈಲಿನಲ್ಲೇ […]

ಡಿ.ಕೆ.ಶಿವಕುಮಾರ್​ಗೆ ಈ ಬಾರಿ ಆಯುಧಪೂಜೆ, ನವರಾತ್ರಿ ತಿಹಾರ್​​ ಜೈಲಿನಲ್ಲೇ
Follow us
ಸಾಧು ಶ್ರೀನಾಥ್​
|

Updated on:Sep 30, 2019 | 1:25 PM

ದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಈಗಾಗಲೇ ತಿಹಾರ್ ಜೈಲಿನಲ್ಲಿರುವ ಡಿ.ಕೆ.ಶಿವಕುಮಾರ್​ಗೆ ಮತ್ತೆ ಹಿನ್ನಡೆಯಾಗಿದೆ. ಡಿಕೆಶಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 14ಕ್ಕೆ ದೆಹಲಿ ಹೈಕೋರ್ಟ್​ ಮುಂದೂಡಿದೆ. ಅಲ್ಲದೆ ಅ.14ರೊಳಗೆ ಆಕ್ಷೇಪಣೆ ಅರ್ಜಿ ಸಲ್ಲಿಸಲು ಹೈಕೋರ್ಟ್​ನ ನ್ಯಾ.ಸುರೇಶ್​ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಇ.ಡಿಗೆ ನೋಟಿಸ್ ನೀಡಿದೆ. ಗೌರಿ, ಗಣೇಶ ಹಬ್ಬಕ್ಕೂ ಇ.ಡಿಯಿಂದ ರಿಲೀಫ್ ಸಿಗದ ಡಿಕೆಶಿಗೆ ಈಗ ದಸರಾಗೂ ಜಾಮೀನು ಸಿಕ್ಕಿಲ್ಲ. ಹೀಗಾಗಿ ನವರಾತ್ರಿ ಮುಗಿಯುವವರೆಗೂ ಕಾಂಗ್ರೆಸ್​ನ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ತಿಹಾರ್ ಜೈಲಿನಲ್ಲೇ ದಿನ ಕಳೆಯಬೇಕಾಗಿದೆ.

ಡಿ.ಕೆ.ಶಿವಕುಮಾರ್ ಕರ್ನಾಟಕ ಬಿಟ್ಟು ದೆಹಲಿಯಲ್ಲಿ ಇ.ಡಿ ಅಂಗಳ ತಲುಪಿ ಸರಿಯಾಗಿ ಒಂದು ತಿಂಗಳಾಗಿದೆ. ಈ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯವು ಡಿ.ಕೆ.ಶಿವಕುಮಾರ್ ಅವರ ಸೋದರ ಡಿ.ಕೆ.ಸುರೇಶ್​ಗೂ ವಿಚಾರಣೆಗೆ ಹಾಜರಾಗುವಂತೆ ಬುಲಾವ್ ನೀಡಿದೆ. ಕಳೆದೊಂದು ತಿಂಗಳಿಂದ ದಿಲ್ಲಿಯಲ್ಲಿ ಅಣ್ಣನಿಗೆ ನೆರಳಾಗಿ ನಿಂತಿರುವ ಸುರೇಶ್​ಗೂ ಈಗ ಇ.ಡಿ ಕಾಟ ಶುರುವಾಗಿದೆ. ಈ ಸಂಬಂಧ ದೆಹಲಿಯಲ್ಲಿ ವಕೀಲರನ್ನ ಭೇಟಿ ಮಾಡಿದ ಡಿ.ಕೆ.ಸುರೇಶ್, ಅಣ್ಣನ ಜಾಮೀನು ಅರ್ಜಿ ಮತ್ತು ತಮಗೆ ನೀಡಿರುವ ಸಮನ್ಸ್​ ಬಗ್ಗೆ ವಕೀಲರೊಂದಿಗೆ ಡಿ.ಕೆ.ಸುರೇಶ್​ ಚರ್ಚೆ ನಡೆಸಿದ್ದಾರೆ.

ಈಗ ತಾನೇ ಡಿ.ಕೆ.ಶಿವಕುಮಾರ್ ಅವರನ್ನ​ ಭೇಟಿಯಾಗಿದ್ದೆ, ಅವರು ಆರೋಗ್ಯವಾಗಿದ್ದಾರೆ. ಹಬ್ಬದ ಪ್ರಯುಕ್ತ ಅ.10ರವರೆಗೂ ನ್ಯಾಯಾಲಯ ರಜೆ ಇದೆ. ಹಾಗಾಗಿ ವಕೀಲರು ಮತ್ತು ಅಧಿಕಾರಿಗಳು ಇನ್ನೂ 4 ದಿನ ಬೇಕೆಂದು ಕೇಳಿದ್ರು. ಹೀಗಾಗಿ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ಅ.14ಕ್ಕೆ ಕೋರ್ಟ್​ ಮುಂದೂಡಿದೆ ಎಂದು ದೆಹಲಿಯಲ್ಲಿ ಡಿ.ಕೆ.ಸುರೇಶ್​ ಮಾಹಿತಿ ನೀಡಿದ್ರು. ಈ ಮಧ್ಯೆ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ನನಗೆ ಯಾವುದೇ ಸಮನ್ಸ್​ ಬಂದಿಲ್ಲ. ಒಂದು ವೇಳೆ ಸಮನ್ಸ್​ ಬಂದ್ರೆ ಒಂದು ನಿಮಿಷವೂ ತಡ ಮಾಡದೆ ಸಂಬಂಧಪಟ್ಟ ಅಧಿಕಾರಿಗಳ ಮುಂದೆ ಹಾಜರಾಗುತ್ತೇನೆ ಎಂದು ತಿಳಿಸಿದ್ರು.

Published On - 12:22 pm, Mon, 30 September 19

ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ವಿವಾಹ ವಾರ್ಷಿಕೋತ್ಸವ: ಪತ್ನಿ ವಿಜಯಲಕ್ಷ್ಮಿ ಜೊತೆ ನಟ ದರ್ಶನ್ ಡ್ಯಾನ್ಸ್
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್