AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮುಲ್‌, ಮದರ್‌ ಡೈರಿಗೆ ಪೈಪೋಟಿ ನೀಡಲು ದೆಹಲಿ ಮಾರುಕಟ್ಟೆಗೂ ಲಗ್ಗೆಯಿಡಲಿದೆ ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನ

ತನ್ನ ಉತ್ಕೃಷ್ಟ ಗುಣಮಟ್ಟ ಮತ್ತು ಹೊಸತನದೊಂದಿಗೆ ವಿಶೇಷ ಛಾಪು ಮೂಡಿಸಿರುವ ನಮ್ಮ ಕರ್ನಾಟಕದ ಹೆಮ್ಮೆಯ ಕೆ.ಎಂ.ಎಫ್‌ನ ನಂದಿನಿ ಬ್ರ್ಯಾಂಡ್‌ ಉತ್ಪನ್ನಗಳು ಇನ್ನು ಮುಂದೆ ರಾಷ್ಟ್ರ ರಾಜಧಾನಿಯಲ್ಲಿಯೂ ಸಿಗಲಿದೆ. ಹೌದು ನವೆಂಬರ್‌ 21 ರಿಂದ ಅಂದರೆ ನಾಳೆಯಿಂದ ದೆಹಲಿಯಲ್ಲೂ ನಂದಿನಿ ಬ್ರ್ಯಾಂಡ್‌ ಉತ್ಪನ್ನಗಳು ಲಭ್ಯವಿರಲಿದ್ದು, ಈ ಮೂಲಕ ಅಮುಲ್‌ ಮತ್ತು ಮದರ್‌ ಡೈರಿಯಂತಹ ಬ್ರ್ಯಾಂಡ್‌ಗೆ ನಂದಿನಿ ಪ್ರಬಲ ಪೈಪೋಟಿ ನೀಡಲು ಸಜ್ಜಾಗಿದೆ.

ಅಮುಲ್‌, ಮದರ್‌ ಡೈರಿಗೆ ಪೈಪೋಟಿ ನೀಡಲು ದೆಹಲಿ ಮಾರುಕಟ್ಟೆಗೂ ಲಗ್ಗೆಯಿಡಲಿದೆ ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನ
ನಂದಿನಿ
ಮಾಲಾಶ್ರೀ ಅಂಚನ್​
| Edited By: |

Updated on:Nov 21, 2024 | 11:09 AM

Share

ಕೆ.ಎಂ.ಎಫ್‌ನ ನಂದಿನಿ ಉತ್ಪನ್ನಗಳು ಕರ್ನಾಟಕದ ಹೆಮ್ಮೆ ಅಂತಾನೇ ಹೇಳಬಹುದು. ನಂದಿನಿ ಬ್ರ್ಯಾಂಡ್‌ನ ಹಾಲು, ಮೊಸರು, ತುಪ್ಪ, ಬೆಣ್ಣೆ, ಸಿಹಿ ತಿನಿಸುಗಳೆಂದರೆ ಬಹುತೇಕ ಎಲ್ಲರಿಗೂ ಅಚ್ಚುಮೆಚ್ಚು. ಒಂದು ಲೆಕ್ಕದಲ್ಲಿ ನಂದಿನಿ ನಮ್ಮ ರಾಜ್ಯದ ಜನರ ನಂಬಿಕೆ ಮತ್ತು ವಿಶ್ವಾಸ ಪಡೆದ ಬ್ರ್ಯಾಂಡ್‌ ಅಂದ್ರೂ ತಪ್ಪಾಗಲಾರದು. ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನವನ್ನು ನೀಡುತ್ತಿದ್ದ ಕೆ.ಎಂ.ಎಫ್‌ ಕೆಲ ದಿನಗಳ ಹಿಂದೆಯಷ್ಟೆ ರೆಡಿ ಟು ಕುಕ್‌ ಪರಿಕಲ್ಪನೆಯಡಿ ದೋಸೆ ಹಿಟ್ಟನ್ನು ಬಿಡುಗಡೆ ಮಾಡುವುದಾಗಿ ಹೇಳಿತ್ತು. ಇದೀಗ ಕೆಎಂಎಫ್‌ ಮತ್ತೊಮ್ಮೆ ಸುದ್ದಿಯಲ್ಲಿದ್ದು, ದೆಹಲಿಯಲ್ಲಿ ತನ್ನ ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವ ಮೂಲಕ ರಾಷ್ಟ್ರ ರಾಜಧಾನಿಯಲ್ಲೂ ತನ್ನ ವ್ಯಾಪ್ತಿಯನ್ನು ಮುಂದುವರೆಸುದಾಗಿ ಹೇಳಿದೆ.

ನವೆಂಬರ್‌ 21 ಅಂದರೆ ನಾಳೆ ಕರ್ನಾಟಕ ಹಾಲು ಒಕ್ಕೂಟ (KMF) ಹಾಲು, ಮೊಸರಿನಂತಹ ತಾಜಾ ಡೈರಿ ಉತ್ಪನ್ನಗಳೊಂದಿಗೆ ರಾಷ್ಟ್ರ ರಾಜಧಾನಿಗೂ ತನ್ನ ವ್ಯಾಪ್ತಿಯನ್ನು ವಿಸ್ತರಿಸಲು ಸಜ್ಜಾಗಿದೆ. ಈ ಮೂಲಕ ದೆಹಲಿಯ ಡೈರಿ ಮಾರುಕಟ್ಟೆಯಲ್ಲಿ ಪ್ರಾಬಲ್ಯ ಹೊಂದಿರುವ ಮದರ್‌ ಡೈರಿ, ಅಮುಲ್‌, ಮಧುಸೂದನ್‌ ಮತ್ತು ಸಮಸ್ತೆ ಇಂಡಿಯಾದಂತಹ ಬ್ರ್ಯಾಂಡ್‌ಗಳಿಗೆ ಪ್ರಬಲ ಪೈಪೋಟಿ ನೀಡಲಿದೆ.

ಇದನ್ನೂ ಓದಿ: ಬರೀ ಟವೆಲ್‌ ಸುತ್ತಿಕೊಂಡು ಇಂಡಿಯಾ ಗೇಟ್‌ ಬಳಿ ಯುವತಿಯ ಬೋಲ್ಡ್‌ ಡಾನ್ಸ್‌; ವಿಡಿಯೋ ವೈರಲ್‌

ನಾಳೆ ಅಂದರೆ ನವೆಂಬರ್‌ 21 ರಂದು ಸಿಎಂ ಸಿದ್ದರಾಮಯ್ಯ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಂದಿನಿ ಹಾಲು ಮತ್ತು ಮೊಸರು ಉತ್ಪನ್ನಗಳನ್ನು ಬಿಡುಗಡೆ ಮಾಡಲಿದ್ದಾರೆ. ಆರಂಭಿಕ ಹಂತದಲ್ಲಿ ನಿತ್ಯ 1 ಲಕ್ಷ ಲೀಟರ್‌ ಹಾಲನ್ನು ದೆಹಲಿಗೆ ಪೂರೈಸಲು ನಿರ್ಧರಿಸಿದ್ದು, ಮುಂದಿನ ದಿನಗಳಲ್ಲಿ ಕೆ.ಎಂ.ಎಫ್‌ ಐದು ಲಕ್ಷ ಲೀಟರ್‌ ಹಾಲು ಮಾರಾಟ ಮಾಡುವ ಗುರಿಯನ್ನು ಹೊಂದಿದೆ, ಅಷ್ಟೇ ಅಲ್ಲದೆ ಮಂಡ್ಯದಿಂದ ದೆಹಲಿ, ಹರಿಯಾಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಹಾಲು ಸಾಗಿಲು 2,190 ಟ್ಯಾಂಕರ್‌ಗಳನ್ನು ಬಳಸಲು ಕೆಎಂಎಫ್‌ ಯೋಜಿಸಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:47 pm, Wed, 20 November 24

Follow Us
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ವ್ಯಾಪಾರ, ವ್ಯವಹಾರಗಳಲ್ಲಿ ಜಾಗೃತರಾಗಿರಿ
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
'ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವವರು ಹಿಂದೂಗಳೇ ಅಲ್ಲ'; ಮೋಹನ್ ಭಾಗವತ್
ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು
ನೇಪಾಳದ ಪ್ರವಾಹ ಸಂತ್ರಸ್ತರಿಗಾಗಿ ಅಡುಗೆ ಮಾಡಿಕೊಟ್ಟ ಸೈನಿಕರು
ನಟ ಚಿಕ್ಕಣ್ಣ ಮದುವೆ ಆರತಕ್ಷತೆ ಸಂಭ್ರಮ: ವಿಡಿಯೋ ನೋಡಿ
ನಟ ಚಿಕ್ಕಣ್ಣ ಮದುವೆ ಆರತಕ್ಷತೆ ಸಂಭ್ರಮ: ವಿಡಿಯೋ ನೋಡಿ