ಅಮುಲ್‌, ಮದರ್‌ ಡೈರಿಗೆ ಪೈಪೋಟಿ ನೀಡಲು ದೆಹಲಿ ಮಾರುಕಟ್ಟೆಗೂ ಲಗ್ಗೆಯಿಡಲಿದೆ ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನ

ತನ್ನ ಉತ್ಕೃಷ್ಟ ಗುಣಮಟ್ಟ ಮತ್ತು ಹೊಸತನದೊಂದಿಗೆ ವಿಶೇಷ ಛಾಪು ಮೂಡಿಸಿರುವ ನಮ್ಮ ಕರ್ನಾಟಕದ ಹೆಮ್ಮೆಯ ಕೆ.ಎಂ.ಎಫ್‌ನ ನಂದಿನಿ ಬ್ರ್ಯಾಂಡ್‌ ಉತ್ಪನ್ನಗಳು ಇನ್ನು ಮುಂದೆ ರಾಷ್ಟ್ರ ರಾಜಧಾನಿಯಲ್ಲಿಯೂ ಸಿಗಲಿದೆ. ಹೌದು ನವೆಂಬರ್‌ 21 ರಿಂದ ಅಂದರೆ ನಾಳೆಯಿಂದ ದೆಹಲಿಯಲ್ಲೂ ನಂದಿನಿ ಬ್ರ್ಯಾಂಡ್‌ ಉತ್ಪನ್ನಗಳು ಲಭ್ಯವಿರಲಿದ್ದು, ಈ ಮೂಲಕ ಅಮುಲ್‌ ಮತ್ತು ಮದರ್‌ ಡೈರಿಯಂತಹ ಬ್ರ್ಯಾಂಡ್‌ಗೆ ನಂದಿನಿ ಪ್ರಬಲ ಪೈಪೋಟಿ ನೀಡಲು ಸಜ್ಜಾಗಿದೆ.

ಅಮುಲ್‌, ಮದರ್‌ ಡೈರಿಗೆ ಪೈಪೋಟಿ ನೀಡಲು ದೆಹಲಿ ಮಾರುಕಟ್ಟೆಗೂ ಲಗ್ಗೆಯಿಡಲಿದೆ ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನ
ನಂದಿನಿ
Edited By:

Updated on: Nov 21, 2024 | 11:09 AM

ಕೆ.ಎಂ.ಎಫ್‌ನ ನಂದಿನಿ ಉತ್ಪನ್ನಗಳು ಕರ್ನಾಟಕದ ಹೆಮ್ಮೆ ಅಂತಾನೇ ಹೇಳಬಹುದು. ನಂದಿನಿ ಬ್ರ್ಯಾಂಡ್‌ನ ಹಾಲು, ಮೊಸರು, ತುಪ್ಪ, ಬೆಣ್ಣೆ, ಸಿಹಿ ತಿನಿಸುಗಳೆಂದರೆ ಬಹುತೇಕ ಎಲ್ಲರಿಗೂ ಅಚ್ಚುಮೆಚ್ಚು. ಒಂದು ಲೆಕ್ಕದಲ್ಲಿ ನಂದಿನಿ ನಮ್ಮ ರಾಜ್ಯದ ಜನರ ನಂಬಿಕೆ ಮತ್ತು ವಿಶ್ವಾಸ ಪಡೆದ ಬ್ರ್ಯಾಂಡ್‌ ಅಂದ್ರೂ ತಪ್ಪಾಗಲಾರದು. ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನವನ್ನು ನೀಡುತ್ತಿದ್ದ ಕೆ.ಎಂ.ಎಫ್‌ ಕೆಲ ದಿನಗಳ ಹಿಂದೆಯಷ್ಟೆ ರೆಡಿ ಟು ಕುಕ್‌ ಪರಿಕಲ್ಪನೆಯಡಿ ದೋಸೆ ಹಿಟ್ಟನ್ನು ಬಿಡುಗಡೆ ಮಾಡುವುದಾಗಿ ಹೇಳಿತ್ತು. ಇದೀಗ ಕೆಎಂಎಫ್‌ ಮತ್ತೊಮ್ಮೆ ಸುದ್ದಿಯಲ್ಲಿದ್ದು, ದೆಹಲಿಯಲ್ಲಿ ತನ್ನ ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವ ಮೂಲಕ ರಾಷ್ಟ್ರ ರಾಜಧಾನಿಯಲ್ಲೂ ತನ್ನ ವ್ಯಾಪ್ತಿಯನ್ನು ಮುಂದುವರೆಸುದಾಗಿ ಹೇಳಿದೆ.

ನವೆಂಬರ್‌ 21 ಅಂದರೆ ನಾಳೆ ಕರ್ನಾಟಕ ಹಾಲು ಒಕ್ಕೂಟ (KMF) ಹಾಲು, ಮೊಸರಿನಂತಹ ತಾಜಾ ಡೈರಿ ಉತ್ಪನ್ನಗಳೊಂದಿಗೆ ರಾಷ್ಟ್ರ ರಾಜಧಾನಿಗೂ ತನ್ನ ವ್ಯಾಪ್ತಿಯನ್ನು ವಿಸ್ತರಿಸಲು ಸಜ್ಜಾಗಿದೆ. ಈ ಮೂಲಕ ದೆಹಲಿಯ ಡೈರಿ ಮಾರುಕಟ್ಟೆಯಲ್ಲಿ ಪ್ರಾಬಲ್ಯ ಹೊಂದಿರುವ ಮದರ್‌ ಡೈರಿ, ಅಮುಲ್‌, ಮಧುಸೂದನ್‌ ಮತ್ತು ಸಮಸ್ತೆ ಇಂಡಿಯಾದಂತಹ ಬ್ರ್ಯಾಂಡ್‌ಗಳಿಗೆ ಪ್ರಬಲ ಪೈಪೋಟಿ ನೀಡಲಿದೆ.

ಇದನ್ನೂ ಓದಿ: ಬರೀ ಟವೆಲ್‌ ಸುತ್ತಿಕೊಂಡು ಇಂಡಿಯಾ ಗೇಟ್‌ ಬಳಿ ಯುವತಿಯ ಬೋಲ್ಡ್‌ ಡಾನ್ಸ್‌; ವಿಡಿಯೋ ವೈರಲ್‌

ನಾಳೆ ಅಂದರೆ ನವೆಂಬರ್‌ 21 ರಂದು ಸಿಎಂ ಸಿದ್ದರಾಮಯ್ಯ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಂದಿನಿ ಹಾಲು ಮತ್ತು ಮೊಸರು ಉತ್ಪನ್ನಗಳನ್ನು ಬಿಡುಗಡೆ ಮಾಡಲಿದ್ದಾರೆ. ಆರಂಭಿಕ ಹಂತದಲ್ಲಿ ನಿತ್ಯ 1 ಲಕ್ಷ ಲೀಟರ್‌ ಹಾಲನ್ನು ದೆಹಲಿಗೆ ಪೂರೈಸಲು ನಿರ್ಧರಿಸಿದ್ದು, ಮುಂದಿನ ದಿನಗಳಲ್ಲಿ ಕೆ.ಎಂ.ಎಫ್‌ ಐದು ಲಕ್ಷ ಲೀಟರ್‌ ಹಾಲು ಮಾರಾಟ ಮಾಡುವ ಗುರಿಯನ್ನು ಹೊಂದಿದೆ, ಅಷ್ಟೇ ಅಲ್ಲದೆ ಮಂಡ್ಯದಿಂದ ದೆಹಲಿ, ಹರಿಯಾಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಹಾಲು ಸಾಗಿಲು 2,190 ಟ್ಯಾಂಕರ್‌ಗಳನ್ನು ಬಳಸಲು ಕೆಎಂಎಫ್‌ ಯೋಜಿಸಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published On - 1:47 pm, Wed, 20 November 24

ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us