AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಪವರ್‌ ಪ್ಲೇ? ಇಂದು ಸಿಎಂ ಮತ್ತೆ ದೆಹಲಿಗೆ

ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಆಗಲಿದೆ ಎಂದು ಕೆಲವು ನಾಯಕರು ಭವಿಷ್ಯ ಹೇಳುತ್ತಿದ್ದರು. ನವೆಂಬರ್ ಅರ್ಧ ತಿಂಗಳು ಮುಗಿದಿದೆ. ಬಿಹಾರ ಫಲಿತಾಂಶವೂ ಬಂದಿದೆ. ಇದೀಗ ದೆಹಲಿಯಲ್ಲಿ ಕ್ರಾಂತಿಗೆ ತಾಲೀಮು ಶುರುವಾದಂತೆ ಕಾಣಿಸುತ್ತಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪವರ್‌ ಪ್ಲೇ ಶುರುವಾಗಿದೆ.

ದೆಹಲಿಯಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಪವರ್‌ ಪ್ಲೇ? ಇಂದು ಸಿಎಂ ಮತ್ತೆ ದೆಹಲಿಗೆ
ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌
ಪ್ರಸನ್ನ ಗಾಂವ್ಕರ್​
| Edited By: |

Updated on: Nov 17, 2025 | 6:43 AM

Share

ಬೆಂಗಳೂರು/ ನವದೆಹಲಿ, ನವೆಂಬರ್ 17: ‘ನವೆಂಬರ್‌ ಕ್ರಾಂತಿ’ ಎಂದು ಕಾಂಗ್ರೆಸ್‌ನಲ್ಲಿ (Congress) ನಾಯಕರು ನುಡಿಯುತ್ತಿದ್ದ ಭವಿಷ್ಯ ನಿಜವಾಗುತ್ತದೆಯಾ ಎಂಬ ಅನುಮಾನಗಳು ಶುರುವಾಗಿವೆ. ಕ್ರಿಕೆಟ್​ನಲ್ಲಿ ಪವರ್‌ ಪ್ಲೇನಲ್ಲಿ ಹೊಡಿಬಡಿ ಆಟ ನಡೆಯುವಂತೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಪವರ್‌ ಪ್ಲೇ ಶುರುವಾದಂತೆ ಕಾಣಿಸುತ್ತಿದೆ. ಅದಕ್ಕೆ ಪುಷ್ಟಿ ನೀಡುವಂತೆ, ಇವತ್ತು ದೆಹಲಿಗೆ ಸಿಎಂ ಸಿದ್ದರಾಮಯ್ಯ ಪ್ರಯಾಣ ಬೆಳೆಸಲಿದ್ದಾರೆ. ಮೊನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ (Siddaramaiah) ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಯಾಗಿದ್ದರು. ಒಂದು ಮೂಲಗಳ ಪ್ರಕಾರ, ರಾಹುಲ್ ಭೇಟಿ ವೇಳೆಯೇ ಸಿದ್ದರಾಮಯ್ಯ ಸಂಪುಟ ಪುನಾರಚನೆ ಬಗ್ಗೆ ಪ್ರಸ್ತಾಪ ಮಾಡಿದ್ದಾರಂತೆ. ರಾಹುಲ್ ಗಾಂಧಿ ಸಹ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಚರ್ಚಿಸಿ ಎಂದು ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ, ಇವತ್ತು ಬೆಳಗ್ಗೆ 11ಗಂಟೆಗೆ ಸಿಎಂ ಪ್ರಯಾಣ ಆರಂಭಿಸಲಿದ್ದು, ಮಧ್ಯಾಹ್ನ 1.30ರ ವೇಳೆಗೆ ದೆಹಲಿ ತಲುಪಲಿದ್ದಾರೆ. ಮಧ್ಯಾಹ್ನ 3ಗಂಟೆಗೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಲಿದ್ದಾರೆ..

ಖರ್ಗೆ ಜೊತೆಗೆ 50 ನಿಮಿಷಗಳ ಕಾಲ ಡಿಕೆ ಸಹೋದರರ ಚರ್ಚೆ

ಡಿಸಿಎಂ ಡಿಕೆ ಶಿವಕುಮಾರ್ ಹೈದರಾಬಾದ್ ಪ್ರವಾಸವನ್ನೂ ರದ್ದು ಮಾಡಿ, ದೆಹಲಿಯಲ್ಲೇ ಬೀಡು ಬಿಟ್ಟಿದ್ದಾರೆ. ಸಿಎಂ ಭೇಟಿಗೂ ಮೊದಲೇ ಡಿ.ಕೆ.ಸುರೇಶ್‌ ಜೊತೆಗೆ ಡಿ.ಕೆ.ಶಿವಕುಮಾರ್‌ ಎಐಸಿಸಿ ಅಧ್ಯಕ್ಷ ಖರ್ಗೆ ಅವರನ್ನು ಶನಿವಾರ ಭೇಟಿಯಾಗಿದ್ದಾರೆ. ಸುಮಾರು 50 ನಿಮಿಷಗಳ ಕಾಲ ಚರ್ಚಿಸಿ ವಾಪಸಾಗಿದ್ದಾರೆ. ಭೇಟಿ ವೇಳೆ, ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ಅಥವಾ ಪುನಾರಚನೆ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ಮಾಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಪುಟ ಪುನಾರಚನೆಗೆ ವಿರೋಧಿಸಿದ್ರಾ ಡಿಕೆ ಶಿವಕುಮಾರ್?

ಮಲ್ಲಿಕಾರ್ಜುನ ಖರ್ಗೆ ಭೇಟಿ ವೇಳೆ ಸಚಿವ ಸಂಪುಟ ಪುನಾರಚನೆ ಪ್ರಸ್ತಾಪಕ್ಕೆ ಡಿ.ಕೆ.ಶಿವಕುಮಾರ್‌ ವಿರೋಧಿಸಿದ್ದಾರೆ ಎನ್ನಲಾಗುತ್ತಿದೆ. ಇದೇ ಹೊತ್ತಲ್ಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ನಾನೇಕೆ ರಾಜೀನಾಮೆ ಕೊಡ್ಲಿ? ನಾನು ಕಾಂಗ್ರೆಸ್‌ಗೆ ಬ್ಲ್ಯಾಕ್‌ಮೇಲ್‌ ಮಾಡಲ್ಲ ಅಂತಾ ಸೂಚ್ಯವಾಗಿ ಪ್ರತಿಕ್ರಿಯಿಸಿದ್ದಾರೆ.

ಹೀಗೆ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ ದಾಳ ಉರುಳಿಸುತ್ತಿದ್ದರೆ, ಇತ್ತ ರಾಜ್ಯ ನಾಯಕರಲ್ಲಿ ಸಂಪುಟ, ನಾಯಕತ್ವದ ಚರ್ಚೆ ಜೋರಾಗೇ ನಡೆಯುತ್ತಿದೆ. ಈ ಹಿಂದೆ ರಾಜಣ್ಣ ಹೇಳಿದ್ದ ಸಂಪುಟ ಪುನಾರಚನೆ ಮಾನದಂಡದ ವಿಚಾರವನ್ನು ಗೃಹ ಸಚಿವ ಪರಮೇಶ್ವರ್‌ ಕೂಡ ಹೇಳಿದ್ದಾರೆ. ಸಂಪುಟ ಪುನಾರಚನೆಗೆ ಒಪ್ಪಿಗೆ ಕೊಟ್ರೆ ನಾಯಕತ್ವ ಬದಲಾವಣೆ ಇಲ್ಲ ಎಂದಿದ್ದಾರೆ. ಸತೀಶ್‌ ಜಾರಕಿಹೊಳಿ ಸಚಿವ ಸಂಪುಟದ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟಪಡಿಸಿದರೆ ಫುಲ್‌ ಸ್ಟಾಪ್‌ ಬೀಳಲಿದೆ ಎಂದಿದ್ದಾರೆ.

ಇದನ್ನೂ ಓದಿ: ಸದ್ಯಕ್ಕೆ ಸಂಪುಟ ಪುನಾರಚನೆ ಇಲ್ಲ? ಸಂಕ್ರಾಂತಿ ನಂತರ ಇರುತ್ತಾ ಸರ್ಜರಿ?; ಟಿವಿ9ಗೆ ಎಕ್ಸ್​ಕ್ಲೂಸಿವ್ ಮಾಹಿತಿ

ಮತ್ತೊಂದೆಡೆ, ಕಾಂಗ್ರೆಸ್‌ ಬೆಳವಣಿಗೆಯನ್ನು ನೋಡಿ ಪ್ರತಿಪಕ್ಷ ಬಿಜೆಪಿ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ಮತ್ತು ಡಿಕೆ ನಡುವಿನ ಕಿತ್ತಾಟದಿಂದಲೇ ಸರ್ಕಾರ ಬೀಳಲಿದೆ ಎಂದಿದ್ದಾರೆ.

ಒಟ್ಟಿನಲ್ಲಿ, ಕಾಂಗ್ರೆಸ್‌ನ ಕ್ರಾಂತಿ ಬಗ್ಗೆ ಆ ಪಕ್ಷದಲ್ಲೇ ಯಾರೊಬ್ಬರಿಗೂ ಸರಿಯಾದ ಮಾಹಿತಿ ಇಲ್ಲ. ಅದರಲ್ಲೂ ಬಿಹಾರ ಸೋಲಿನ ಆಘಾತದಲ್ಲಿರುವ ಹೈಕಮಾಂಡ್​ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ