AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಕಾರು ಸ್ಫೋಟ: ಕರ್ನಾಟಕದಲ್ಲೂ ಹೈಅಲರ್ಟ್ ಘೋಷಣೆ, ಬಿಗಿ ಭದ್ರತೆಗೆ ಸೂಚನೆ

Delhi Red Fort Car Blast: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು ಸ್ಫೋಟಗೊಂಡಿರುವ ಘಟನೆ ನಡೆದಿದೆ. ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ ಆಗಿದೆ. ಸದ್ಯ ಎಲ್ಲೆಡೆ ಹೈಅಲರ್ಟ್​ ಘೋಷಿಸಲಾಗಿದ್ದು, ಇತ್ತ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಮಹತ್ವದ ಆದೇಶ ಹೊರಡಿಸಿದ್ದಾರೆ.

ದೆಹಲಿಯಲ್ಲಿ ಕಾರು ಸ್ಫೋಟ: ಕರ್ನಾಟಕದಲ್ಲೂ ಹೈಅಲರ್ಟ್ ಘೋಷಣೆ, ಬಿಗಿ ಭದ್ರತೆಗೆ ಸೂಚನೆ
ಕಾರು ಸ್ಫೋಟ
ಕಿರಣ ಹೆಚ್​. ವಿ.
| Edited By: |

Updated on:Nov 10, 2025 | 9:04 PM

Share

ಬೆಂಗಳೂರು, ನವೆಂಬರ್​ 10: ದೆಹಲಿಯ ಕೆಂಪುಕೋಟೆಯ (Red Fort) ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ಭಯಾನಕ ಕಾರು ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ ಆಗಿದ್ದು, 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಸದ್ಯ ಎಲ್ಲೆಡೆ ಹೈಅಲರ್ಟ್​ ಘೋಷಿಸಿದ್ದು, ಇತ್ತ ಕರ್ನಾಟಕದಲ್ಲೂ (Karnataka) ಕಟ್ಟೆಚ್ಚರ ವಹಿಸುವಂತೆ ಪೊಲೀಸರಿಗೆ ಡಿಜಿ&ಐಜಿಪಿ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲೂ ಕಟ್ಟೆಚ್ಚರ 

ದೆಹಲಿಯಲ್ಲಿ ಕಾರು ಸ್ಫೋಟ ಬೆನ್ನಲ್ಲೇ ಬೆಂಗಳೂರು ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ. ಏರ್​ಪೋರ್ಟ್, ಬಂದರು, ರೈಲು ನಿಲ್ದಾಣ, ಬಸ್ ನಿಲ್ದಾಣಗಳು, ಮಾರ್ಕೆಟ್ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ,  ಜಿಲ್ಲೆಗಳಲ್ಲಿ ನಿಗಾವಹಿಸುವಂತೆ ಎಸ್​ಪಿಗಳಿಗೆ ಡಿಜಿ&ಐಜಿಪಿ ಆದೇಶಿಸಿದ್ದಾರೆ.

ಇದನ್ನೂ ಓದಿ: Delhi Blast: ದಿಲ್ಲಿ ಕೆಂಪುಕೋಟೆ ಬಳಿ ಸ್ಫೋಟ: ಕನಿಷ್ಠ 9 ಜನ ಸಾವು, ಎಲ್ಲೆಡೆ ಹೈಅಲರ್ಟ್​

ಇನ್ನು ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಕಮಿಷನರ್​​​ ಸೂಚಿಸಿದ್ದಾರೆ. ಕೂಡಲೇ ಠಾಣಾ ವ್ಯಾಪ್ತಿಯಲ್ಲಿ ಗಸ್ತು ಮಾಡಬೇಕು. ಲಾಡ್ಜ್​ಗಳನ್ನು ತಪಾಸಣೆ ಮಾಡಿ, ಲಾಡ್ಜ್‌ನಲ್ಲಿ ತಂಗಿರುವ ಹೊರ ರಾಜ್ಯದವರ ವಿಚಾರಣೆ ಮಾಡಬೇಕು. ರಾತ್ರಿ ವೇಳೆ ಗಸ್ತು ಹೆಚ್ಚಳ ಮಾಡುವಂತೆ ಡಿಸಿಪಿ, ಎಸಿಪಿ, ಇನ್ಸ್​ಪೆಕ್ಟರ್​ಗಳಿಗೆ ಬೆಂಗಳೂರು ನಗರ ಪೊಲೀಸ್​ ಕಮಿಷನರ್​​ ಸೀಮಂತ್​ ಕುಮಾರ್ ಸಿಂಗ್​​ ಸೂಚನೆ ನೀಡಿದ್ದಾರೆ.

ನಡೆದದ್ದೇನು?

ಸೋಮವಾರ ಸಂಜೆ 6 ಗಂಟೆ 50 ನಿಮಿಷದ ಸುಮಾರಿಗೆ ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಗೇಟ್ ನಂಬರ್ 1 ರ ಬಳಿ ಪಾರ್ಕಿಂಗ್​ನಲ್ಲಿ ನಿಲ್ಲಿಸಿದ್ದ ಮಾರುತಿ ಇಕೋ ವ್ಯಾನ್​​ ಸ್ಫೋಟವಾಗಿದೆ. ಸ್ಫೋಟದ ತೀವ್ರತೆ ಅದೆಷ್ಟರ ಮಟ್ಟಿಗೆ ಇತ್ತೆಂದರೆ, ಸ್ಥಳದಲ್ಲಿ ಓಡಾಡುತ್ತಿದ್ದ ಹಲವರ ದೇಹಗಳು ಛಿದ್ರ ಛಿದ್ರವಾಗಿವೆ. ರಸ್ತೆಯಲ್ಲಿ, ಕಾರಿನ ಮೇಲೆ ಮೃತದೇಹಗಳು ಪೀಸ್ ಪೀಸ್ ಆಗಿ ರಕ್ತ ಸಿಕ್ತವಾಗಿ ಬಿದ್ದಿವೆ.

ಇದನ್ನೂ ಓದಿ: ಕೆಂಪು ಕೋಟೆ ಬಳಿ ಕಾರು ಸ್ಫೋಟವಾಗಿ 8 ಜನ ಸಾವು; ದೆಹಲಿಯಲ್ಲಿ ಹೈ ಅಲರ್ಟ್

ಇನ್ನು ಬೆಂಕಿ ಅದೆಷ್ಟರ ಮಟ್ಟಿಗೆ ವ್ಯಾಪಿಸಿತು ಅಂದರೆ ನೋಡ ನೋಡುತ್ತಲೇ ಅಲ್ಲೇ ನಿಂತಿದ್ದ ಹಲವು ವಾಹನಗಳಿಗೆ ಬೆಂಕಿಯ ಜ್ವಾಲೆ ವ್ಯಾಪಿಸಿದೆ. ಸ್ಫೋಟದಲ್ಲಿ ಒಟ್ಟು 9ಕ್ಕೂ ಹೆಚ್ಚು ವಾಹನಗಳೂ ಸಹ ಹೊತ್ತಿ ಉರಿದಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:00 pm, Mon, 10 November 25

Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!