ಟ್ರಬಲ್ ಶೂಟರ್ ಡಿಕೆಶಿಗೆ ಜಾಮೀನು ಇಲ್ಲ, ಇನ್ನೂ ತಿಹಾರ್ ಜೈಲಿನಲ್ಲೇ ಇರಬೇಕು

ಮಾಜಿ ಸಚಿವ ಡಿ.ಕೆ.ಶಿವಕುಮಾರ್​ಗೆ ಜಾಮೀನು ನೀಡಲು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ನಿರಾಕರಿಸಿದೆ. ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ಜಡ್ಜ್ ಅಜಯ್ ಕುಮಾರ್ ಕುಹರ್ ವಜಾಗೊಳಿಸಿ, ಒಂದೇ ವಾಕ್ಯದ ಆದೇಶ ಓದಿ, ತೆರಳಿದ್ದಾರೆ. ಹೀಗಾಗಿ ಟ್ರಬಲ್ ಶೂಟರ್​ ಡಿ.ಕೆ.ಶಿವಕುಮಾರ್​ಗೆ ತಿಹಾರ್ ಜೈಲುವಾಸ ಮುಂದುವರಿದಿದೆ. ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಕಳೆದ 6 ದಿನಗಳಿಂದ ಡಿಕೆ ಶಿವಕುಮಾರ್ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ಅ.1ಕ್ಕೆ ಡಿ.ಕೆ.ಶಿವಕುಮಾರ್ ಅವರ ನ್ಯಾಯಾಂಗ ಬಂಧನದ ಅವಧಿ ಮುಗಿಯಲಿದೆ. ಪ್ರಕರಣದ ಹಿನ್ನೆಲೆ: ದೆಹಲಿಯಲ್ಲಿ ಡಿಕೆಶಿ ಮತ್ತು ಆಪ್ತರ […]

ಟ್ರಬಲ್ ಶೂಟರ್ ಡಿಕೆಶಿಗೆ ಜಾಮೀನು ಇಲ್ಲ, ಇನ್ನೂ ತಿಹಾರ್ ಜೈಲಿನಲ್ಲೇ ಇರಬೇಕು
ಸಾಧು ಶ್ರೀನಾಥ್​

Updated on: Sep 25, 2019 | 5:39 PM

ಮಾಜಿ ಸಚಿವ ಡಿ.ಕೆ.ಶಿವಕುಮಾರ್​ಗೆ ಜಾಮೀನು ನೀಡಲು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ನಿರಾಕರಿಸಿದೆ. ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ಜಡ್ಜ್ ಅಜಯ್ ಕುಮಾರ್ ಕುಹರ್ ವಜಾಗೊಳಿಸಿ, ಒಂದೇ ವಾಕ್ಯದ ಆದೇಶ ಓದಿ, ತೆರಳಿದ್ದಾರೆ. ಹೀಗಾಗಿ ಟ್ರಬಲ್ ಶೂಟರ್​ ಡಿ.ಕೆ.ಶಿವಕುಮಾರ್​ಗೆ ತಿಹಾರ್ ಜೈಲುವಾಸ ಮುಂದುವರಿದಿದೆ.

ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಕಳೆದ 6 ದಿನಗಳಿಂದ ಡಿಕೆ ಶಿವಕುಮಾರ್ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ಅ.1ಕ್ಕೆ ಡಿ.ಕೆ.ಶಿವಕುಮಾರ್ ಅವರ ನ್ಯಾಯಾಂಗ ಬಂಧನದ ಅವಧಿ ಮುಗಿಯಲಿದೆ.

ಪ್ರಕರಣದ ಹಿನ್ನೆಲೆ:
ದೆಹಲಿಯಲ್ಲಿ ಡಿಕೆಶಿ ಮತ್ತು ಆಪ್ತರ ನಿವಾಸಗಳ ಮೇಲೆ ಐಟಿ ಅಧಿಕಾರಿಳು ದಾಳಿ ನಡೆಸಿದ್ದರು. ಈ ವೇಳೆ ದಾಖಲೆಯಿಲ್ಲದ 8.59 ಕೋಟಿ ನಗದು ಪತ್ತೆಯಾಗಿತ್ತು. ಈ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ECIR​ ದಾಖಲಿಸಿದ್ದರು.

ಆ.30ರಿಂದ ಡಿ.ಕೆ.ಶಿವಕುಮಾರ್ ಸತತ 4 ದಿನ ಇಡಿ ಅಧಿಕಾರಿಗಳ ವಿಚಾರಣೆ ಎದುರಿಸಿದ್ರು. ಆದ್ರೆ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಡಿಕೆಶಿಯನ್ನು 10 ದಿನಗಳ ಕಾಲ ಇಡಿ ವಶಕ್ಕೆ ಪಡೆಯಿತು. ಅವಧಿ ಮುಗಿದ ಬಳಿಕ ಮತ್ತೆ 4 ದಿನಗಳ ಕಾಲ ಹೆಚ್ಚಿನ ವಿಚಾರಣೆಗೆ ಡಿಕೆಶಿಯನ್ನು ಇಡಿ ವಶಕ್ಕೆ ಪಡೆಯಿತು. ಈ ವೇಳೆ ಸೆ.12ರಂದು ಡಿಕೆಶಿ ಪುತ್ರಿ ಐಶ್ವರ್ಯಾಗೂ ಸಮನ್ಸ್​ ನೀಡಿ ಅಕ್ರಮ ಹಣ ವರ್ಗಾವಣೆ ಬಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸಿದರು. ಬಳಿಕ ಸೆ.17ರಂದು ಡಿಕೆಶಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ದೆಹಲಿ ಕೋರ್ಟ್​ ಆದೇಶಿಸಿತು.

Published On - 5:30 pm, Wed, 25 September 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us