AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delta Plus: ಕರ್ನಾಟಕ ರಾಜ್ಯದ ಇಬ್ಬರಲ್ಲಿ ಡೆಲ್ಟಾ ಪ್ಲಸ್ ಪ್ರಬೇಧದ ಕೊರೊನಾ ವೈರಸ್ ಪತ್ತೆ

ಡೆಲ್ಟಾ ಪ್ಲಸ್ ವೈರಸ್, ಭಾರತದಲ್ಲಿ ಕಂಡುಬಂದ ಡೆಲ್ಟಾ ಮಾದರಿ ವೈರಾಣುವಿನ ರೂಪಾಂತರ ಎನ್ನಲಾಗುತ್ತಿದೆ. ಈ ಸ್ವರೂಪದ ವೈರಸ್ ಬಗ್ಗೆ ತಜ್ಞರು ಅಧ್ಯಯನ ನಡೆಸುತ್ತಿದ್ದಾರೆ. ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶದಲ್ಲಿ ಡೆಲ್ಟಾ ಪ್ಲಸ್ ಸ್ವರೂಪದ ತಲಾ 21 ಹಾಗೂ 25 ಕೇಸ್ ಪತ್ತೆಯಾಗಿದೆ.

Delta Plus: ಕರ್ನಾಟಕ ರಾಜ್ಯದ ಇಬ್ಬರಲ್ಲಿ ಡೆಲ್ಟಾ ಪ್ಲಸ್ ಪ್ರಬೇಧದ ಕೊರೊನಾ ವೈರಸ್ ಪತ್ತೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 22, 2021 | 4:00 PM

Share

ಬೆಂಗಳೂರು: ಕೊರೊನಾ ವೈರಾಣುವಿನ ಹೊಸ ರೂಪಾಂತರಿ ಡೆಲ್ಟಾ ಪ್ಲಸ್ ವೈರಸ್ ಕರ್ನಾಟಕ ರಾಜ್ಯದಲ್ಲೂ ಕಂಡುಬಂದಿದೆ. ಕರ್ನಾಟಕ ರಾಜ್ಯದ ಇಬ್ಬರು ಕೊರೊನಾ ಸೋಂಕಿತರಲ್ಲಿ ಡೆಲ್ಟಾ ಪ್ಲಸ್ ಪ್ರಬೇಧ ಪತ್ತೆಯಾಗಿದೆ. ಬೆಂಗಳೂರು, ಮೈಸೂರಿನ ತಲಾ ಒಬ್ಬರಲ್ಲಿ ಡೆಲ್ಟಾ ಪ್ಲಸ್ ಕೊವಿಡ್-19 ಇರುವುದು ಖಚಿತವಾಗಿದೆ. ಈ ಬಗ್ಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ಡೆಲ್ಟಾ ಪ್ಲಸ್ ವೈರಸ್, ಭಾರತದಲ್ಲಿ ಕಂಡುಬಂದ ಡೆಲ್ಟಾ ಮಾದರಿ ವೈರಾಣುವಿನ ರೂಪಾಂತರ ಎನ್ನಲಾಗುತ್ತಿದೆ. ಈ ಸ್ವರೂಪದ ವೈರಸ್ ಬಗ್ಗೆ ತಜ್ಞರು ಅಧ್ಯಯನ ನಡೆಸುತ್ತಿದ್ದಾರೆ. ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶದಲ್ಲಿ ಡೆಲ್ಟಾ ಪ್ಲಸ್ ಸ್ವರೂಪದ ತಲಾ 21 ಹಾಗೂ 25 ಕೇಸ್ ಪತ್ತೆಯಾಗಿದೆ.

ಡೆತ್ ಆಡಿಟ್ ವರದಿ ರಾಜ್ಯ ಸರ್ಕಾರಕ್ಕೆ ಡೆತ್ ಆಡಿಟ್ ವರದಿ ರಾಜ್ಯ ಸರ್ಕಾರದ ಕೈ ಸೇರಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ. ಅನ್‌ಲಾಕ್ ವೇಳೆ ಜನರ ಬೇಕಾಬಿಟ್ಟಿ ಓಡಾಟ ವಿಚಾರವಾಗಿ, ತಜ್ಞರ ವರದಿ ಆಧರಿಸಿ ಬಿಬಿಎಂಪಿ ಕ್ರಮಕೈಗೊಳ್ಳಲಿದೆ. ಅನ್‌ಲಾಕ್ ನಂತರ ಕೊವಿಡ್ ನಿಯಮ ಸರಿಯಾಗಿ ಪಾಲನೆ ಆಗ್ತಿಲ್ಲ. ಆ ಬಗ್ಗೆಯೂ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ನಿನ್ನೆ ಬೆಂಗಳೂರಲ್ಲಿ ಅತಿ ಹೆಚ್ಚು ವ್ಯಾಕ್ಸಿನ್ ನೀಡಿಕೆ‌ ಆಗಿರುವ ಬಗ್ಗೆ ಗೌರವ್ ಗುಪ್ತಾ ಪ್ರತಿಕ್ರಿಯೆ ನೀಡಿದ್ದಾರೆ. ಬರುವ ದಿನಗಳಲ್ಲಿ ಲಸಿಕೆ ನೀಡಿಕೆ ಇನ್ನಷ್ಟು ಹೆಚ್ಚಳ ಮಾಡಲು ತೀರ್ಮಾನ ಮಾಡಲಾಗಿದೆ. ಮೂರನೇ ಅಲೆ ತಡೆಯೋಕೆ ವ್ಯಾಕ್ಸಿನ್ ಒಂದೇ ಮಾರ್ಗ ಎಂದು ಗೌರವ್ ಗುಪ್ತಾ ಹೇಳಿದ್ದಾರೆ.

ಮೂರನೇ ಅಲೆಯಿಂದ ಮಕ್ಕಳಿಗೆ ತೊಂದರೆ ಎಂಬ ವಿಚಾರವಾಗಿ ಮಾತನಾಡಿದ ಅವರು, ಮಕ್ಕಳು, ವಯಸ್ಕರಲ್ಲಿ ಸೋಂಕಿನ ಪ್ರಮಾಣ ಒಂದೇ ಇದೆ. ಶಾಲೆ ಆರಂಭ ಕುರಿತು ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Delta Plus Variant: ಡೆಲ್ಟಾ ಪ್ಲಸ್ ಕೊರೊನಾ ವೈರಸ್ ಎಂದರೇನು? ರೂಪಾಂತರಿ ವೈರಾಣು ಎಷ್ಟು ಅಪಾಯಕಾರಿ, ಇದರಿಂದ ರಕ್ಷಣೆ ಹೇಗೆ?

Corona Vaccine: ಡೆಲ್ಟಾ ಮಾದರಿ ವಿರುದ್ಧ ಕೊವಿಶೀಲ್ಡ್​ ಮೊದಲ ಡೋಸ್​ ಶೇ.61ರಷ್ಟು ಪರಿಣಾಮಕಾರಿ: ಡಾ.ಎನ್​.ಕೆ ಅರೋರಾ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ