AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delta Plus: ಕರ್ನಾಟಕ ರಾಜ್ಯದ ಇಬ್ಬರಲ್ಲಿ ಡೆಲ್ಟಾ ಪ್ಲಸ್ ಪ್ರಬೇಧದ ಕೊರೊನಾ ವೈರಸ್ ಪತ್ತೆ

ಡೆಲ್ಟಾ ಪ್ಲಸ್ ವೈರಸ್, ಭಾರತದಲ್ಲಿ ಕಂಡುಬಂದ ಡೆಲ್ಟಾ ಮಾದರಿ ವೈರಾಣುವಿನ ರೂಪಾಂತರ ಎನ್ನಲಾಗುತ್ತಿದೆ. ಈ ಸ್ವರೂಪದ ವೈರಸ್ ಬಗ್ಗೆ ತಜ್ಞರು ಅಧ್ಯಯನ ನಡೆಸುತ್ತಿದ್ದಾರೆ. ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶದಲ್ಲಿ ಡೆಲ್ಟಾ ಪ್ಲಸ್ ಸ್ವರೂಪದ ತಲಾ 21 ಹಾಗೂ 25 ಕೇಸ್ ಪತ್ತೆಯಾಗಿದೆ.

Delta Plus: ಕರ್ನಾಟಕ ರಾಜ್ಯದ ಇಬ್ಬರಲ್ಲಿ ಡೆಲ್ಟಾ ಪ್ಲಸ್ ಪ್ರಬೇಧದ ಕೊರೊನಾ ವೈರಸ್ ಪತ್ತೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 22, 2021 | 4:00 PM

Share

ಬೆಂಗಳೂರು: ಕೊರೊನಾ ವೈರಾಣುವಿನ ಹೊಸ ರೂಪಾಂತರಿ ಡೆಲ್ಟಾ ಪ್ಲಸ್ ವೈರಸ್ ಕರ್ನಾಟಕ ರಾಜ್ಯದಲ್ಲೂ ಕಂಡುಬಂದಿದೆ. ಕರ್ನಾಟಕ ರಾಜ್ಯದ ಇಬ್ಬರು ಕೊರೊನಾ ಸೋಂಕಿತರಲ್ಲಿ ಡೆಲ್ಟಾ ಪ್ಲಸ್ ಪ್ರಬೇಧ ಪತ್ತೆಯಾಗಿದೆ. ಬೆಂಗಳೂರು, ಮೈಸೂರಿನ ತಲಾ ಒಬ್ಬರಲ್ಲಿ ಡೆಲ್ಟಾ ಪ್ಲಸ್ ಕೊವಿಡ್-19 ಇರುವುದು ಖಚಿತವಾಗಿದೆ. ಈ ಬಗ್ಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ಡೆಲ್ಟಾ ಪ್ಲಸ್ ವೈರಸ್, ಭಾರತದಲ್ಲಿ ಕಂಡುಬಂದ ಡೆಲ್ಟಾ ಮಾದರಿ ವೈರಾಣುವಿನ ರೂಪಾಂತರ ಎನ್ನಲಾಗುತ್ತಿದೆ. ಈ ಸ್ವರೂಪದ ವೈರಸ್ ಬಗ್ಗೆ ತಜ್ಞರು ಅಧ್ಯಯನ ನಡೆಸುತ್ತಿದ್ದಾರೆ. ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶದಲ್ಲಿ ಡೆಲ್ಟಾ ಪ್ಲಸ್ ಸ್ವರೂಪದ ತಲಾ 21 ಹಾಗೂ 25 ಕೇಸ್ ಪತ್ತೆಯಾಗಿದೆ.

ಡೆತ್ ಆಡಿಟ್ ವರದಿ ರಾಜ್ಯ ಸರ್ಕಾರಕ್ಕೆ ಡೆತ್ ಆಡಿಟ್ ವರದಿ ರಾಜ್ಯ ಸರ್ಕಾರದ ಕೈ ಸೇರಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ. ಅನ್‌ಲಾಕ್ ವೇಳೆ ಜನರ ಬೇಕಾಬಿಟ್ಟಿ ಓಡಾಟ ವಿಚಾರವಾಗಿ, ತಜ್ಞರ ವರದಿ ಆಧರಿಸಿ ಬಿಬಿಎಂಪಿ ಕ್ರಮಕೈಗೊಳ್ಳಲಿದೆ. ಅನ್‌ಲಾಕ್ ನಂತರ ಕೊವಿಡ್ ನಿಯಮ ಸರಿಯಾಗಿ ಪಾಲನೆ ಆಗ್ತಿಲ್ಲ. ಆ ಬಗ್ಗೆಯೂ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ನಿನ್ನೆ ಬೆಂಗಳೂರಲ್ಲಿ ಅತಿ ಹೆಚ್ಚು ವ್ಯಾಕ್ಸಿನ್ ನೀಡಿಕೆ‌ ಆಗಿರುವ ಬಗ್ಗೆ ಗೌರವ್ ಗುಪ್ತಾ ಪ್ರತಿಕ್ರಿಯೆ ನೀಡಿದ್ದಾರೆ. ಬರುವ ದಿನಗಳಲ್ಲಿ ಲಸಿಕೆ ನೀಡಿಕೆ ಇನ್ನಷ್ಟು ಹೆಚ್ಚಳ ಮಾಡಲು ತೀರ್ಮಾನ ಮಾಡಲಾಗಿದೆ. ಮೂರನೇ ಅಲೆ ತಡೆಯೋಕೆ ವ್ಯಾಕ್ಸಿನ್ ಒಂದೇ ಮಾರ್ಗ ಎಂದು ಗೌರವ್ ಗುಪ್ತಾ ಹೇಳಿದ್ದಾರೆ.

ಮೂರನೇ ಅಲೆಯಿಂದ ಮಕ್ಕಳಿಗೆ ತೊಂದರೆ ಎಂಬ ವಿಚಾರವಾಗಿ ಮಾತನಾಡಿದ ಅವರು, ಮಕ್ಕಳು, ವಯಸ್ಕರಲ್ಲಿ ಸೋಂಕಿನ ಪ್ರಮಾಣ ಒಂದೇ ಇದೆ. ಶಾಲೆ ಆರಂಭ ಕುರಿತು ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Delta Plus Variant: ಡೆಲ್ಟಾ ಪ್ಲಸ್ ಕೊರೊನಾ ವೈರಸ್ ಎಂದರೇನು? ರೂಪಾಂತರಿ ವೈರಾಣು ಎಷ್ಟು ಅಪಾಯಕಾರಿ, ಇದರಿಂದ ರಕ್ಷಣೆ ಹೇಗೆ?

Corona Vaccine: ಡೆಲ್ಟಾ ಮಾದರಿ ವಿರುದ್ಧ ಕೊವಿಶೀಲ್ಡ್​ ಮೊದಲ ಡೋಸ್​ ಶೇ.61ರಷ್ಟು ಪರಿಣಾಮಕಾರಿ: ಡಾ.ಎನ್​.ಕೆ ಅರೋರಾ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ