AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಮ್​ಡಿಸಿವಿರ್ ಇಂಜೆಕ್ಷನ್​ಗೆ ಏಕಾಏಕಿ ಕುಸಿದ ಬೇಡಿಕೆ

ಕೇವಲ 15 ದಿನಗಳಲ್ಲೇ ರೆಮ್​ಡಿಸಿವಿರ್ ಇಂಜಕ್ಷನ್​ಗೆ ಬೇಡಿಕೆ ಕುಸಿತವಾಗಿದೆ. ಆರೋಗ್ಯ ಇಲಾಖೆ ರೆಮ್​ಡಿಸಿವಿರ್​ಗೆ ಹೆಲ್ಪ್​ಲೈನ್​ ಮಾಡಿತ್ತು. ಒಂದೇ ಒಂದು ವಯಲ್ ಕೂಡ ಮಿಸ್ ಆಗದಂತೆ ಬಿಗಿ ಕ್ರಮ ಕೈಗೊಳ್ಳಲಾಗಿತ್ತು. ರೆಮ್​ಡಿಸಿವಿರ್ ಕೊರೊನಾಗೆ ಸೂಕ್ತ ಮದ್ದಲ್ಲ ಎಂದು ಸರ್ಕಾರ, ಐಸಿಎಂಆರ್ ಹೇಳಿದೆ.

ರೆಮ್​ಡಿಸಿವಿರ್ ಇಂಜೆಕ್ಷನ್​ಗೆ ಏಕಾಏಕಿ ಕುಸಿದ ಬೇಡಿಕೆ
ರೆಮ್​ಡಿಸಿವಿರ್ (ಸಂಗ್ರಹ ಚಿತ್ರ)
sandhya thejappa
|

Updated on: May 26, 2021 | 11:53 AM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದಂತೆ ನಾನಾ ಸಮಸ್ಯೆಗಳು ಹುಟ್ಟಿಕೊಂಡಿವೆ. ಈ ಸಾಲಿಗೆ ರೆಮ್​ಡಿಸಿವಿರ್ ಇಂಜೆಕ್ಷನ್ ಅಕ್ರಮ ಮಾರಾಟವೂ ಸೇರಿದೆ. ಹೆಚ್ಚು ಹಣಕ್ಕೆ ಬೇಡಿಕೆಯಿಟ್ಟು ರೆಮ್​ಡಿಸಿವಿರ್​ ಇಂಜೆಕ್ಷನ್​ನ ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು. ಈ ಕೃತ್ಯದಲ್ಲಿ ಕೆಲ ಕಡೆ ಆಸ್ಪತ್ರೆ ಸಿಬ್ಬಂದಿಯೂ ಕೈ ಜೋಡಿಸಿತ್ತು. ಅಕ್ರಮ ಮಾರಾಟದ ಬಗ್ಗೆ ಮಾಹಿತಿ ಬೆಳಕಿಗೆ ಬಂದಂತೆ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಆದರೆ ರೆಮ್​ಡಿಸಿವಿರ್ ಇಂಜೆಕ್ಷನ್​ಗೆ ಇದ್ದಕ್ಕಿದ್ದಂತೆ ಬೇಡಿಕೆ ಕುಸಿದಿದೆ.

ಕೇವಲ 15 ದಿನಗಳಲ್ಲೇ ರೆಮ್​ಡಿಸಿವಿರ್ ಇಂಜಕ್ಷನ್​ಗೆ ಬೇಡಿಕೆ ಕುಸಿತವಾಗಿದೆ. ಆರೋಗ್ಯ ಇಲಾಖೆ ರೆಮ್​ಡಿಸಿವಿರ್​ಗೆ ಹೆಲ್ಪ್​ಲೈನ್​ ಮಾಡಿತ್ತು. ಒಂದೇ ಒಂದು ವಯಲ್ ಕೂಡ ಮಿಸ್ ಆಗದಂತೆ ಬಿಗಿ ಕ್ರಮ ಕೈಗೊಳ್ಳಲಾಗಿತ್ತು. ರೆಮ್​ಡಿಸಿವಿರ್ ಕೊರೊನಾಗೆ ಸೂಕ್ತ ಮದ್ದಲ್ಲ ಎಂದು ಸರ್ಕಾರ, ಐಸಿಎಂಆರ್ ಹೇಳಿದೆ. ಹೀಗಾಗಿ ರೆಮ್​ಡಿಸಿವಿರ್ ಇಂಜೆಕ್ಷನ್​ಗೆ ಬೇಡಿಕೆ ಕಡಿಮೆಯಾಗಿದೆ.

ಸದ್ಯ ರಾಜ್ಯದಲ್ಲಿ 77,059 ರೆಮ್​ಡಿಸಿವಿರ್​ ವಯಲ್ಸ್ ಇವೆ. ಇಂಜೆಕ್ಷನ್ ಸರಬರಾಜು ಮಾಡಲು ಕಂಪನಿಗಳು ಸಿದ್ಧವಾಗಿವೆ. ಉತ್ಪಾದನೆ ಹೆಚ್ಚಿಸಿ ಸರಬರಾಜಿಗೆ ಸರ್ಕಾರ ಸೂಚನೆ ನೀಡಿತ್ತು. ಆದರೆ ಈಗ ಏಕಾಏಕಿ ರೆಮ್​ಡಿಸಿವಿರ್​ಗೆ ಬೇಡಿಕೆ ಕುಸಿತವಾಗಿದೆ. ರೆಮ್ಡಿಸಿವಿರ್ ಬಳಕೆ ಅವಧಿ 6 ತಿಂಗಳಿಗೆ ಮುಗಿಯಲಿದೆ. ಹೀಗಾಗಿ ಸ್ಟಾಕ್ ಇದ್ದರೂ ಡಿಮ್ಯಾಂಡ್ ಇಲ್ಲ ಅಂತ ಆರೋಗ್ಯಧಿಕಾರಿಗಳು ಹೇಳುತ್ತಿದ್ದಾರೆ.

ಇದನ್ನೂ ಓದಿ

ಕೊರೊನಾ ವಾರಿಯರ್​ ಆಗಿ ಕಾರ್ಯನಿರ್ವಹಿಸುತ್ತಿರುವ ಏಳು ತಿಂಗಳ ಗರ್ಭಿಣಿ; ಪಿಎಸ್​ಐ ಕರ್ತವ್ಯ ನಿಷ್ಠೆಗೆ ಜನರ ಮೆಚ್ಚುಗೆ

ಕೊರೊನಾ ಓಡಿಸಲು ನೂರಾರು ಕೆಜಿ ಅನ್ನ ಚೆಲ್ಲಿ ಮೌಢ್ಯಾಚರಣೆ, ಯುವಕರ ದೂರಿನ ಪ್ರತಿ ವೈರಲ್!

(demand for Remdesivir injection has fallen)

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?