AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಮ್​ಡಿಸಿವಿರ್ ಇಂಜೆಕ್ಷನ್​ಗೆ ಏಕಾಏಕಿ ಕುಸಿದ ಬೇಡಿಕೆ

ಕೇವಲ 15 ದಿನಗಳಲ್ಲೇ ರೆಮ್​ಡಿಸಿವಿರ್ ಇಂಜಕ್ಷನ್​ಗೆ ಬೇಡಿಕೆ ಕುಸಿತವಾಗಿದೆ. ಆರೋಗ್ಯ ಇಲಾಖೆ ರೆಮ್​ಡಿಸಿವಿರ್​ಗೆ ಹೆಲ್ಪ್​ಲೈನ್​ ಮಾಡಿತ್ತು. ಒಂದೇ ಒಂದು ವಯಲ್ ಕೂಡ ಮಿಸ್ ಆಗದಂತೆ ಬಿಗಿ ಕ್ರಮ ಕೈಗೊಳ್ಳಲಾಗಿತ್ತು. ರೆಮ್​ಡಿಸಿವಿರ್ ಕೊರೊನಾಗೆ ಸೂಕ್ತ ಮದ್ದಲ್ಲ ಎಂದು ಸರ್ಕಾರ, ಐಸಿಎಂಆರ್ ಹೇಳಿದೆ.

ರೆಮ್​ಡಿಸಿವಿರ್ ಇಂಜೆಕ್ಷನ್​ಗೆ ಏಕಾಏಕಿ ಕುಸಿದ ಬೇಡಿಕೆ
ರೆಮ್​ಡಿಸಿವಿರ್ (ಸಂಗ್ರಹ ಚಿತ್ರ)
sandhya thejappa
sandhya thejappa|

Updated on: May 26, 2021 | 11:53 AM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದಂತೆ ನಾನಾ ಸಮಸ್ಯೆಗಳು ಹುಟ್ಟಿಕೊಂಡಿವೆ. ಈ ಸಾಲಿಗೆ ರೆಮ್​ಡಿಸಿವಿರ್ ಇಂಜೆಕ್ಷನ್ ಅಕ್ರಮ ಮಾರಾಟವೂ ಸೇರಿದೆ. ಹೆಚ್ಚು ಹಣಕ್ಕೆ ಬೇಡಿಕೆಯಿಟ್ಟು ರೆಮ್​ಡಿಸಿವಿರ್​ ಇಂಜೆಕ್ಷನ್​ನ ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು. ಈ ಕೃತ್ಯದಲ್ಲಿ ಕೆಲ ಕಡೆ ಆಸ್ಪತ್ರೆ ಸಿಬ್ಬಂದಿಯೂ ಕೈ ಜೋಡಿಸಿತ್ತು. ಅಕ್ರಮ ಮಾರಾಟದ ಬಗ್ಗೆ ಮಾಹಿತಿ ಬೆಳಕಿಗೆ ಬಂದಂತೆ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಆದರೆ ರೆಮ್​ಡಿಸಿವಿರ್ ಇಂಜೆಕ್ಷನ್​ಗೆ ಇದ್ದಕ್ಕಿದ್ದಂತೆ ಬೇಡಿಕೆ ಕುಸಿದಿದೆ.

ಕೇವಲ 15 ದಿನಗಳಲ್ಲೇ ರೆಮ್​ಡಿಸಿವಿರ್ ಇಂಜಕ್ಷನ್​ಗೆ ಬೇಡಿಕೆ ಕುಸಿತವಾಗಿದೆ. ಆರೋಗ್ಯ ಇಲಾಖೆ ರೆಮ್​ಡಿಸಿವಿರ್​ಗೆ ಹೆಲ್ಪ್​ಲೈನ್​ ಮಾಡಿತ್ತು. ಒಂದೇ ಒಂದು ವಯಲ್ ಕೂಡ ಮಿಸ್ ಆಗದಂತೆ ಬಿಗಿ ಕ್ರಮ ಕೈಗೊಳ್ಳಲಾಗಿತ್ತು. ರೆಮ್​ಡಿಸಿವಿರ್ ಕೊರೊನಾಗೆ ಸೂಕ್ತ ಮದ್ದಲ್ಲ ಎಂದು ಸರ್ಕಾರ, ಐಸಿಎಂಆರ್ ಹೇಳಿದೆ. ಹೀಗಾಗಿ ರೆಮ್​ಡಿಸಿವಿರ್ ಇಂಜೆಕ್ಷನ್​ಗೆ ಬೇಡಿಕೆ ಕಡಿಮೆಯಾಗಿದೆ.

ಸದ್ಯ ರಾಜ್ಯದಲ್ಲಿ 77,059 ರೆಮ್​ಡಿಸಿವಿರ್​ ವಯಲ್ಸ್ ಇವೆ. ಇಂಜೆಕ್ಷನ್ ಸರಬರಾಜು ಮಾಡಲು ಕಂಪನಿಗಳು ಸಿದ್ಧವಾಗಿವೆ. ಉತ್ಪಾದನೆ ಹೆಚ್ಚಿಸಿ ಸರಬರಾಜಿಗೆ ಸರ್ಕಾರ ಸೂಚನೆ ನೀಡಿತ್ತು. ಆದರೆ ಈಗ ಏಕಾಏಕಿ ರೆಮ್​ಡಿಸಿವಿರ್​ಗೆ ಬೇಡಿಕೆ ಕುಸಿತವಾಗಿದೆ. ರೆಮ್ಡಿಸಿವಿರ್ ಬಳಕೆ ಅವಧಿ 6 ತಿಂಗಳಿಗೆ ಮುಗಿಯಲಿದೆ. ಹೀಗಾಗಿ ಸ್ಟಾಕ್ ಇದ್ದರೂ ಡಿಮ್ಯಾಂಡ್ ಇಲ್ಲ ಅಂತ ಆರೋಗ್ಯಧಿಕಾರಿಗಳು ಹೇಳುತ್ತಿದ್ದಾರೆ.

ಇದನ್ನೂ ಓದಿ

ಕೊರೊನಾ ವಾರಿಯರ್​ ಆಗಿ ಕಾರ್ಯನಿರ್ವಹಿಸುತ್ತಿರುವ ಏಳು ತಿಂಗಳ ಗರ್ಭಿಣಿ; ಪಿಎಸ್​ಐ ಕರ್ತವ್ಯ ನಿಷ್ಠೆಗೆ ಜನರ ಮೆಚ್ಚುಗೆ

ಕೊರೊನಾ ಓಡಿಸಲು ನೂರಾರು ಕೆಜಿ ಅನ್ನ ಚೆಲ್ಲಿ ಮೌಢ್ಯಾಚರಣೆ, ಯುವಕರ ದೂರಿನ ಪ್ರತಿ ವೈರಲ್!

(demand for Remdesivir injection has fallen)

Follow Us
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ