AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಇಎಸ್ ಬ್ಯಾನ್​ಗೆ ಆಗ್ರಹ​: ಬಂದ್​ ಕೈಬಿಟ್ಟು, ಪ್ರತಿಭಟನೆ ನಡೆಸುತ್ತಿದ್ದ ವಾಟಾಳ್ ನಾಗರಾಜ್‌ ಬೆಂಗಳೂರು ಪೊಲೀಸರ ವಶಕ್ಕೆ

ವಾಟಾಳ್ ಸೇರಿದಂತೆ ಕನ್ನಡ ಪರ ಸಂಘಟನೆಗಳ ಇತರೆ ಕಾರ್ಯಕರ್ತರನ್ನೂ ವಶಕ್ಕೆ ಪಡೆಯಲಾಗಿದೆ. ಎಂಇಎಸ್ ಬ್ಯಾನ್ ಮಾಡುವಂತೆ ಒತ್ತಾಯಿಸಿ ಟೌನ್‌ಹಾಲ್‌ನಿಂದ ಫ್ರೀಡಂಪಾರ್ಕ್‌ವರೆಗೆ ಪ್ರತಿಭಟನಾಕಾರರು ತೆರಳುತ್ತಿದ್ದರು.

ಎಂಇಎಸ್ ಬ್ಯಾನ್​ಗೆ ಆಗ್ರಹ​: ಬಂದ್​ ಕೈಬಿಟ್ಟು, ಪ್ರತಿಭಟನೆ ನಡೆಸುತ್ತಿದ್ದ ವಾಟಾಳ್ ನಾಗರಾಜ್‌ ಬೆಂಗಳೂರು ಪೊಲೀಸರ ವಶಕ್ಕೆ
ವಾಟಾಳ್ ನಾಗರಾಜ್
TV9 Web
| Updated By: ಸಾಧು ಶ್ರೀನಾಥ್​|

Updated on:Dec 31, 2021 | 1:30 PM

Share

ಬೆಂಗಳೂರು: ಬೆಂಗಳೂರಿನ ಕಾರ್ಪೊರೇಷನ್ ಸರ್ಕಲ್ ಬಳಿಯೇ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಾಟಾಳ್ ಸೇರಿದಂತೆ ಕನ್ನಡ ಪರ ಸಂಘಟನೆಗಳ ಇತರೆ ಕಾರ್ಯಕರ್ತರನ್ನೂ ವಶಕ್ಕೆ ಪಡೆಯಲಾಗಿದೆ. ಎಂಇಎಸ್ ಬ್ಯಾನ್ ಮಾಡುವಂತೆ ಒತ್ತಾಯಿಸಿ ಟೌನ್‌ಹಾಲ್‌ನಿಂದ ಫ್ರೀಡಂಪಾರ್ಕ್‌ವರೆಗೆ ಪ್ರತಿಭಟನಾಕಾರರು ತೆರಳುತ್ತಿದ್ದರು. ಪ್ರತಿಭಟನಾನಿರತ  ವಾಟಾಳ್ ನಾಗರಾಜ್‌ ಮತ್ತಿತರರನ್ನು ಬಿಎಂಟಿಸಿ ಬಸ್ ನಲ್ಲಿ ಪೊಲೀಸರು ಕರೆದೊಯ್ದಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ಹಾಜರಿದ್ದರು.

MES ನಿಷೇಧ ಮಾಡದಿದ್ದರೆ ಮತ್ತೆ ಹೋರಾಟ, ಆಗ ಸಿಎಂ ಬೊಮ್ಮಾಯಿ ಕರೆದರೂ ಹೋಗುವುದಿಲ್ಲ -ವಾಟಾಳ್​ ಅದಕ್ಕೂ ಮುನ್ನ ಟೌನ್​ಹಾಲ್​ ಬಳಿ ಮಾತನಾಡಿದ ವಾಟಾಳ್​ ನಾಗರಾಜ್​ ರಾಜ್ಯದಲ್ಲಿ ಎಂಇಎಸ್ ಬ್ಯಾನ್ ಮಾಡಲೇಬೇಕು ಎಂದು ಸಿಎಂ ಬೊಮ್ಮಾಯಿಗೆ ಒತ್ತಾಯ ಮಾಡುತ್ತೇವೆ. ಸಿಎಂ ಮಾತಿಗೆ ಬೆಲೆ ಕೊಟ್ಟು ಬಂದ್ ಮುಂದೂಡಿದ್ದೇವೆ. ಸಿಎಂ ಬೊಮ್ಮಾಯಿ ಮೇಲೆ ನಮಗೆ ಭರವಸೆ ಇದೆ. MES ನಿಷೇಧ ಮಾಡದಿದ್ದರೆ ಮತ್ತೆ ಹೋರಾಟ ಮಾಡುತ್ತೇವೆ. ಆಗ ಸಿಎಂ ಬೊಮ್ಮಾಯಿ ಕರೆದರೂ ನಾವು ಹೋಗುವುದಿಲ್ಲ. ಜನವರಿ 22ರವರೆಗೆ ರಾಜ್ಯ ಸರ್ಕಾರಕ್ಕೆ ಡೆಡ್‌ಲೈನ್. ಅಷ್ಟರೊಳಗೆ ಎಂಇಎಸ್ ಬ್ಯಾನ್ ಮಾಡಲೇಬೇಕು ಎಂದು ಹೇಳಿದರು.

ಜನವರಿ 5 ರಂದು ಕನ್ನಡ ಸಂಘಟನೆಗಳ ಸಭೆ: ಬೆಳಗಾವಿಯಲ್ಲಿ ಬೃಹತ್ ಮೇಳವನ್ನು ಆಯೋಜಿಸುತ್ತೇವೆ. ಮೇಳದ ಬಗ್ಗೆ ಸದ್ಯದಲ್ಲಿಯೇ ಮಾಹಿತಿ ನೀಡುತ್ತೇವೆ. ಕೇಂದ್ರದ ಮೇಲೆ ಬಿಜೆಪಿ ಸಂಸದರು ಒತ್ತಡ ಹಾಕಬೇಕು. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎಂಇಎಸ್ ಏಜೆಂಟರು ಎಂದು ರಾಜಕೀಯ ಪಕ್ಷಗಳ ವಿರುದ್ಧ ವಾಟಾಳ್ ನಾಗರಾಜ್ ಕಿಡಿ ಕಾರಿದರು. ಜನವರಿ 5 ರಂದು ಕನ್ನಡ ಸಂಘಟನೆಗಳ ಸಭೆ ಇದೆ. ಸಭೆ ಬಳಿಕ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು.

ಯಾರ ಒತ್ತಡಕ್ಕೂ ಮಣಿದು ಬಂದ್ ವಾಪಸ್ ಪಡೆದಿಲ್ಲ.ನಾವು ರಾಜ್ಯ ಬಂದ್‌ ಕೈಬಿಟ್ಟಿಲ್ಲ, ಬಂದ್‌ ಮುಂದೂಡಿದ್ದೇವೆ. ನನಗೆ ಸಾಕಷ್ಟು ಒತ್ತಡಗಳು ಬಂದಿತ್ತು, ಯಾವುದಕ್ಕೂ ಬಗ್ಗಿಲ್ಲ. ನನ್ನ ಜೀವನದಲ್ಲಿ ಯಾವತ್ತೂ ಇಷ್ಟು ಒತ್ತಡ ಬಂದಿರಲಿಲ್ಲ. ಕೊರೊನಾಗೂ ಬಂದ್ ಗೂ ಯಾವುದೇ ಸಂಬಂಧವಿಲ್ಲ. ಬಂದ್ ಮಾಡಿದ್ರೆ ಇನ್ನೂ ಒಳ್ಳೆಯದು ‌ಅಲ್ವಾ!? ಜನರು ಮನೆಯಲ್ಲಿ ಇರ್ತಾರೆ ಸುರಕ್ಷಿತವಾಗಿ. ಎಂಇಎಸ್ ನಿಷೇಧ ಮಾಡಲೇಬೇಕು, ಇದರಲ್ಲಿ ರಾಜಿ ಇಲ್ಲ. ಸಿಎಂ ಬೊಮ್ಮಾಯಿ ಮಾತು ಉಳಿಸಿಕೊಳ್ತಾರೆಂಬ ವಿಶ್ವಾಸವಿದೆ. ಮಾತು ಉಳಿಸಿಕೊಳ್ಳದಿದ್ದರೆ ರಸ್ತೆಗಿಳಿದು ಬಂದ್ ಘೋಷಿಸ್ತೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್‌ ಎಚ್ಚರಿಸಿದರು.

ಇದನ್ನೂ ಓದಿ: ಅಂತೂ ಇಂತೂ ಇಂದಿನ ಬಂದ್​ ಕ್ಯಾನ್ಸಲ್, ಮುಂದಿನ ಬಂದ್ ಯಾವಾಗ ಎಂದು ಘೋಷಿಸಿದ ವಾಟಾಳ್​ ನಾಗರಾಜ್!

ರಾಜ್ಯದಲ್ಲಿ MES ನಿಷೇಧಕ್ಕೆ ಒತ್ತಾಯಿಸಿ ವಾಟಾಳ್​ ನಾಗರಾಜ್​ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳ Rally | TV9Kannada

Published On - 1:10 pm, Fri, 31 December 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ