AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೋನಾಗಿಂತ ಡೆಂಗ್ಯೂ ಆತಂಕವೇ ಹೆಚ್ಚು; ಅವಿಭಜಿತ ಜಿಲ್ಲೆಗಳಲ್ಲಿ 800ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆ

ರಾಜ್ಯದಲ್ಲಿ ಮಳೆ ಆರ್ಭಟ ಕಡಿಮೆಯಾದರೂ ಮಹಮಾರಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿಲ್ಲ. ಅಕಾಲಿಕವಾಗಿ ಮಳೆ ಬಂದು ಹೋಗುತ್ತಿರುವುದರಿಂದ ಕೊರೋನಾಗಿಂತ ಹೆಚ್ಚು ಮಾರಕವಾಗಿ ಡೆಂಗ್ಯೂ ಜ್ವರ ಕಾಡುತ್ತಿದೆ.

ಕೊರೋನಾಗಿಂತ ಡೆಂಗ್ಯೂ ಆತಂಕವೇ ಹೆಚ್ಚು; ಅವಿಭಜಿತ ಜಿಲ್ಲೆಗಳಲ್ಲಿ 800ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆ
ಕರ್ನಾಟಕದಲ್ಲಿ ಹೆಚ್ಚಿದ ಡೆಂಗ್ಯೂ
TV9 Web
| Edited By: |

Updated on:Nov 06, 2022 | 4:44 PM

Share

ಮಂಗಳೂರು: ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದ ಆತಂಕ ಹೆಚ್ಚುತ್ತಿದೆ. ಆಸ್ಪತ್ರೆಗಳಲ್ಲಿ ಜ್ವರ, ಮೈ ಕೈ ನೋವು, ತಲೆನೋವು ಸೇರಿದಂತೆ ಡೆಂಗ್ಯೂ ರೋಗ ಲಕ್ಷಣವುಳ್ಳ ಪ್ರಕರಣಗಳು ಹೆಚ್ಚು ದಾಖಲಾಗುತ್ತಿದೆ. ಕಳೆದೆರಡು ವರ್ಷಕ್ಕಿಂತ ಈ ಬಾರಿ ಶೇಕಡಾ 25 ರಷ್ಟು ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿದೆ. ದಕ್ಷಿಣ ಕನ್ನಡದಲ್ಲಿ ಪ್ರಕರಣಗಳ ಸಂಖ್ಯೆ 352ಕ್ಕೆ ಏರಿದರೆ ಪಕ್ಕದ ಜಿಲ್ಲೆ ಉಡುಪಿಯಲ್ಲಿ 500ರ ಗಡಿ ದಾಟಿದೆ. ಗ್ರಾಮೀಣ ಭಾಗದಲ್ಲಿ ರಬ್ಬರ್, ಅಡಿಕೆ ತೋಟಗಳೇ ಡೆಂಗ್ಯೂ ಜ್ವರಕ್ಕೆ ಕಾರಣವಾಗುವ ಲಾರ್ವಾ ಉತ್ಪತ್ತಿ ತಾಣಗಳಾಗುತ್ತಿದ್ದರೆ ನಗರದಲ್ಲಿ ನೀರು ನಿಲ್ಲುವ ಹೂವಿನ ಕುಂಡ, ಟೈರ್, ತೆರೆದಿಡುವ ನೀರಿನ ಟ್ಯಾಂಕ್, ಟೆರೇಸ್ ಮೇಲಿರುವ ಒವರ್ ಹೆಡ್ ಟ್ಯಾಂಕ್ ಕಾರಣವಾಗುತ್ತಿದೆ.

ನಿಮಗೆ ತಿಳಿದಿರಬೇಕಾದ ಅಂಶಗಳು

  • ತಿಳಿನೀರಿನಲ್ಲಿ ಉತ್ಪತ್ತಿಯಾಗುವ ಈಡಿಸ್ ಈಜಿಪ್ಟ್ ಎಂಬ ಸೊಳ್ಳೆಯೇ ಡೆಂಗೆ ಹರಡಲು ಕಾರಣವಾಗುತ್ತದೆ.
  • ಹಗಲೊತ್ತಿನಲ್ಲಿ ಕಚ್ಚುವ ಈ ಸೊಳ್ಳೆ ನೀರಿನಲ್ಲಿ ಮೊಟ್ಟೆಯಿಟ್ಟು ಸಂತಾನೋತ್ಪತ್ತಿ ಮಾಡುತ್ತದೆ.
  • ರೋಗನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳು, ಗರ್ಭಿಣಿಯರು, ವೃದ್ಧರು, ರೋಗಿಗಳು ಎಚ್ಚರಿಕೆ ಇರಬೇಕು.
  • ಡೆಂಗ್ಯೂ ಶಾಕ್ ಸಿಂಕ್ರೋಮ್‌ನಿಂದ ರೋಗಿಗಳು ಸಾವಿಗೀಡಾಗುವ ಸಾಧ್ಯತೆಗೆಳು ಹೆಚ್ಚು.

ಸದ್ಯ ಆರೋಗ್ಯ ಇಲಾಖೆ ಸೊಳ್ಳೆ ನಿಯಂತ್ರಣದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ರ್ಯಾಪಿಡ್ ಟೆಸ್ಟಿಂಗ್ ಟೀಮ್‌ಗಳನ್ನು ರಚಿಸಿ ತೊಟ್ಟಿಗಳು, ಕೆರೆಗಳು, ನೀರು ನಿಲ್ಲುವ ಜಾಗಗಳಲ್ಲಿ ಲಾರ್ವಗಳನ್ನು ನಾಶಪಡಿಸಲು ಗಪ್ಪಿ ಮೀನುಗಳನ್ನು ಬಿಡಲಾಗುತ್ತಿದೆ. ಒಟ್ಟಿನಲ್ಲಿ ಡೆಂಗೆ ಮಹಾಮಾರಿ ನಿಯಂತ್ರಣದ ಬಗ್ಗೆ ಜನ ಇನ್ನಷ್ಟು ಜಾಗೃತರಾಗಬೇಕಿದೆ.

ವರದಿ: ಅಶೋಕ್ ಟಿವಿ9 ಮಂಗಳೂರು

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:44 pm, Sun, 6 November 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ