AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೋನಾಗಿಂತ ಡೆಂಗ್ಯೂ ಆತಂಕವೇ ಹೆಚ್ಚು; ಅವಿಭಜಿತ ಜಿಲ್ಲೆಗಳಲ್ಲಿ 800ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆ

ರಾಜ್ಯದಲ್ಲಿ ಮಳೆ ಆರ್ಭಟ ಕಡಿಮೆಯಾದರೂ ಮಹಮಾರಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿಲ್ಲ. ಅಕಾಲಿಕವಾಗಿ ಮಳೆ ಬಂದು ಹೋಗುತ್ತಿರುವುದರಿಂದ ಕೊರೋನಾಗಿಂತ ಹೆಚ್ಚು ಮಾರಕವಾಗಿ ಡೆಂಗ್ಯೂ ಜ್ವರ ಕಾಡುತ್ತಿದೆ.

ಕೊರೋನಾಗಿಂತ ಡೆಂಗ್ಯೂ ಆತಂಕವೇ ಹೆಚ್ಚು; ಅವಿಭಜಿತ ಜಿಲ್ಲೆಗಳಲ್ಲಿ 800ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆ
ಕರ್ನಾಟಕದಲ್ಲಿ ಹೆಚ್ಚಿದ ಡೆಂಗ್ಯೂ
TV9 Web
| Edited By: |

Updated on:Nov 06, 2022 | 4:44 PM

Share

ಮಂಗಳೂರು: ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರದ ಆತಂಕ ಹೆಚ್ಚುತ್ತಿದೆ. ಆಸ್ಪತ್ರೆಗಳಲ್ಲಿ ಜ್ವರ, ಮೈ ಕೈ ನೋವು, ತಲೆನೋವು ಸೇರಿದಂತೆ ಡೆಂಗ್ಯೂ ರೋಗ ಲಕ್ಷಣವುಳ್ಳ ಪ್ರಕರಣಗಳು ಹೆಚ್ಚು ದಾಖಲಾಗುತ್ತಿದೆ. ಕಳೆದೆರಡು ವರ್ಷಕ್ಕಿಂತ ಈ ಬಾರಿ ಶೇಕಡಾ 25 ರಷ್ಟು ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿದೆ. ದಕ್ಷಿಣ ಕನ್ನಡದಲ್ಲಿ ಪ್ರಕರಣಗಳ ಸಂಖ್ಯೆ 352ಕ್ಕೆ ಏರಿದರೆ ಪಕ್ಕದ ಜಿಲ್ಲೆ ಉಡುಪಿಯಲ್ಲಿ 500ರ ಗಡಿ ದಾಟಿದೆ. ಗ್ರಾಮೀಣ ಭಾಗದಲ್ಲಿ ರಬ್ಬರ್, ಅಡಿಕೆ ತೋಟಗಳೇ ಡೆಂಗ್ಯೂ ಜ್ವರಕ್ಕೆ ಕಾರಣವಾಗುವ ಲಾರ್ವಾ ಉತ್ಪತ್ತಿ ತಾಣಗಳಾಗುತ್ತಿದ್ದರೆ ನಗರದಲ್ಲಿ ನೀರು ನಿಲ್ಲುವ ಹೂವಿನ ಕುಂಡ, ಟೈರ್, ತೆರೆದಿಡುವ ನೀರಿನ ಟ್ಯಾಂಕ್, ಟೆರೇಸ್ ಮೇಲಿರುವ ಒವರ್ ಹೆಡ್ ಟ್ಯಾಂಕ್ ಕಾರಣವಾಗುತ್ತಿದೆ.

ನಿಮಗೆ ತಿಳಿದಿರಬೇಕಾದ ಅಂಶಗಳು

  • ತಿಳಿನೀರಿನಲ್ಲಿ ಉತ್ಪತ್ತಿಯಾಗುವ ಈಡಿಸ್ ಈಜಿಪ್ಟ್ ಎಂಬ ಸೊಳ್ಳೆಯೇ ಡೆಂಗೆ ಹರಡಲು ಕಾರಣವಾಗುತ್ತದೆ.
  • ಹಗಲೊತ್ತಿನಲ್ಲಿ ಕಚ್ಚುವ ಈ ಸೊಳ್ಳೆ ನೀರಿನಲ್ಲಿ ಮೊಟ್ಟೆಯಿಟ್ಟು ಸಂತಾನೋತ್ಪತ್ತಿ ಮಾಡುತ್ತದೆ.
  • ರೋಗನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳು, ಗರ್ಭಿಣಿಯರು, ವೃದ್ಧರು, ರೋಗಿಗಳು ಎಚ್ಚರಿಕೆ ಇರಬೇಕು.
  • ಡೆಂಗ್ಯೂ ಶಾಕ್ ಸಿಂಕ್ರೋಮ್‌ನಿಂದ ರೋಗಿಗಳು ಸಾವಿಗೀಡಾಗುವ ಸಾಧ್ಯತೆಗೆಳು ಹೆಚ್ಚು.

ಸದ್ಯ ಆರೋಗ್ಯ ಇಲಾಖೆ ಸೊಳ್ಳೆ ನಿಯಂತ್ರಣದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ರ್ಯಾಪಿಡ್ ಟೆಸ್ಟಿಂಗ್ ಟೀಮ್‌ಗಳನ್ನು ರಚಿಸಿ ತೊಟ್ಟಿಗಳು, ಕೆರೆಗಳು, ನೀರು ನಿಲ್ಲುವ ಜಾಗಗಳಲ್ಲಿ ಲಾರ್ವಗಳನ್ನು ನಾಶಪಡಿಸಲು ಗಪ್ಪಿ ಮೀನುಗಳನ್ನು ಬಿಡಲಾಗುತ್ತಿದೆ. ಒಟ್ಟಿನಲ್ಲಿ ಡೆಂಗೆ ಮಹಾಮಾರಿ ನಿಯಂತ್ರಣದ ಬಗ್ಗೆ ಜನ ಇನ್ನಷ್ಟು ಜಾಗೃತರಾಗಬೇಕಿದೆ.

ವರದಿ: ಅಶೋಕ್ ಟಿವಿ9 ಮಂಗಳೂರು

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:44 pm, Sun, 6 November 22

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ