AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಮಿತಿಮೀರಿದ ಡೆಂಗ್ಯೂ ಹಾವಳಿ: ಹತ್ತೇ ದಿನಗಳಲ್ಲಿ 1,026 ಪ್ರಕರಣ ಪತ್ತೆ, ಧಾರವಾಡದಲ್ಲಿ ಬಾಲಕಿ ಸಾವು

Dengue Cases in Karnataka; ಮಳೆಗಾಲ ಆರಂಭವಾದ ಬೆನ್ನಲ್ಲೇ ಕರ್ನಾಟಕದಾದ್ಯಂತ ಸಾಂಕ್ರಾಮಿಕ ರೋಗಗಳ ಹರಡುವಿಕೆಯೂ ಹೆಚ್ಚಾಗಿದೆ. ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಮಿತಿ ಮೀರಿದ್ದು, ಧಾರವಾಡದಲ್ಲಿ ಡೆಂಗ್ಯೂವಿನಿಂದ ಈ ವರ್ಷದ ಮೊದಲ ಸಾವು ಸಂಭವಿಸಿದೆ. ಅತ್ತ ಶಿವಮೊಗ್ಗದಲ್ಲಿಯೂ ಶಂಕಿತ ಡೆಂಗ್ಯೂವಿನಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ ಎಂಬ ವಿವರ ಇಲ್ಲಿದೆ.

ರಾಜ್ಯದಲ್ಲಿ ಮಿತಿಮೀರಿದ ಡೆಂಗ್ಯೂ ಹಾವಳಿ: ಹತ್ತೇ ದಿನಗಳಲ್ಲಿ 1,026 ಪ್ರಕರಣ ಪತ್ತೆ, ಧಾರವಾಡದಲ್ಲಿ ಬಾಲಕಿ ಸಾವು
ಡೆಂಗ್ಯೂ
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: Ganapathi Sharma

Updated on: Jun 14, 2024 | 9:23 AM

ಧಾರವಾಡ, ಜೂನ್ 14: ಮುಂಗಾರು ಮಳೆಯ (Monsoon Rain) ಆರ್ಭಟದ ಜೊತೆಗೆ ರಾಜ್ಯದಲ್ಲಿ ಸಾಂಕ್ರಾಮಿಕ ರೋಗಗಳೂ ತೀವ್ರವಾಗಿ ಉಲ್ಬಣಗೊಳ್ಳುತ್ತಿವೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಡೆಂಗ್ಯೂ (Dengue), ಚಿಕುನ್‌ಗುನ್ಯಾ ಕಾಯಿಲೆ ರಣಕೇಕೆ ಹಾಕುತ್ತಿವೆ. ಜನ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆ ಸೇರುತ್ತಿದ್ದಾರೆ. ಇದೀಗ ಧಾರವಾಡ (Dharawad) ಜಿಲ್ಲೆಯಲ್ಲಿ ಡೆಂಗ್ಯೂವಿನಿಂದ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ. ಇದರಿಂದಾಗಿ ಜಿಲ್ಲೆಯಲ್ಲಿ ಆತಂಕ ಹೆಚ್ಚಾಗಿದೆ. ಮತ್ತೊಂದೆಡೆ, ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಗರಾಜ್ ಎಂಬವರು ಗುರುವಾರ ಮೃತಪಟ್ಟಿದ್ದರು. ಇದೂ ಸಹ ಡೆಂಗ್ಯೂವಿನಿಂದಲೇ ಎಂಬ ಅನುಮಾನ ವ್ಯಕ್ತವಾಗಿದೆ.

ರಾಜ್ಯದಲ್ಲಿ ಪ್ರಸಕ್ತ ವರ್ಷ 4,414 ಡೆಂಗ್ಯೂ, 778 ಚಿಕುನ್​ಗುನ್ಯಾ ಪ್ರಕರಣಗಳು ಪತ್ತೆ ಆಗಿವೆ. ಈ ನಡುವೆ ಕಳೆದ 10 ದಿನಗಳಲ್ಲಿ ಬರೋಬ್ಬರಿ 1,026 ಡೆಂಗ್ಯೂ, 137 ಚಿಕೂನ್ ಗುನ್ಯಾ ಪಾಸಿಟಿವ್ ಬಂದಿದ್ದು ಆತಂಕ ಮೂಡಿಸಿದೆ. ಚಿಕೂನ್​ಗುನ್ಯಾಕ್ಕಿಂತ ಡೆಂಗ್ಯೂ ಹಾವಳಿಯೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಇನ್ನು ಧಾರವಾಡ ಜಿಲ್ಲೆಯ ವಿಚಾರಕ್ಕೆ ಬಂದರೆ, ಇದೀಗ ಜಿಲ್ಲೆಯ 81 ಪ್ರದೇಶಗಳಲ್ಲಿ ಡೆಂಗ್ಯೂ ತೀವ್ರವಾಗಿ ಕಾಣಿಸಿಕೊಂಡಿದೆ. ಇದರಲ್ಲಿ ಜನವರಿಯಿಂದ ಜೂನ್​ವರೆಗೆ 437 ಶಂಕಿತ ಡೆಂಗ್ಯೂ ಪ್ರಕರಣಗಳು ಕಂಡು ಬಂದಿವೆ. ಇನ್ನು ಹತ್ತು ದಿನಗಳ ಅಂಕಿ-ಅಂಶ ನೋಡಿದರೆ 41 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಗ್ರಾಮದ ನಾಲ್ಕು ವರ್ಷದ ಸಮೃದ್ಧಿ ದೇಸಾಯಿ ಅನ್ನೋ ಬಾಲಕಿ ಮೃತಪಟ್ಟಿದ್ದಾಳೆ. ಈ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಡಿಎಚ್​ಒ ಡಾ. ಶಶಿ ಪಾಟೀಲ್ ಮತ್ತು ಅಧಿಕಾರಿಗಳು ಭೇಟಿ ನೀಡಿದಾಗ ಬಾಲಕಿಯ ತಂದೆ ಬಸವರಾಜ ದೇಸಾಯಿ ಅಧಿಕಾರಿಗಳ ಮೇಲೆ ಕೂಗಾಡಿದರು. ಬಾಲಕಿ ಸಾವಿಗೆ ಅಧಿಕಾರಿಗಳ ನಿರ್ಲಕ್ಷವೇ ಕಾರಣ ಅಂತಾ ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಚಿಕಿತ್ಸೆ ಫಲಿಸದೆ ಆರೋಗ್ಯ ಇಲಾಖೆ ಸಿಬ್ಬಂದಿ ಸಾವು, ಡೆಂಗ್ಯೂ ಶಂಕೆ

ಬಾಲಕಿ ಸಾವಿನ ಬಳಿಕ ಎಚ್ಚೆತ್ತುಕೊಂಡಿರೋ ಆರೋಗ್ಯ ಇಲಾಖೆ ಇದೀಗ ಗ್ರಾಮಗಳಲ್ಲಿ ಫಾಗಿಂಗ್ ಮಾಡುತ್ತಿದೆ. ಇನ್ನು ಮಳೆ ಬಂದಾಗ ಸಂಗ್ರಹವಾಗುವ ನೀರಿನಲ್ಲಿ ಈ ಸಾಂಕ್ರಾಮಿಕ ರೋಗಗಳನ್ನು ಹರಡುವ ಸೊಳ್ಳೆಗಳು ಹುಟ್ಟುತ್ತವೆ. ಹೀಗಾಗಿ ಹೂವಿನಕುಂಡಗಳು, ಏರ್‌ಕೂಲರ್, ತೆಂಗಿನ ಚಿಪ್ಪು, ಒಡೆದ ಟೈಯರ್, ನೀರು ಸಂಗ್ರಹ ತೊಟ್ಟಿಗಳಲ್ಲಿ ನೀರು ನಿಲ್ಲದಂತೆ ನೋಡಿಕೊಂಡರೆ ರೋಗ ಬರದಂತೆ ತಡೆಯಬಹುದು. ಇದರ ಜತೆಗೆ ಕೊಳಚೆ ಪ್ರದೇಶಗಳಲ್ಲಿ ಕೀಟನಾಶಕ ಸಿಂಪರಣೆ ಜತೆಗೆ ಸೊಳ್ಳೆಗಳ ಸಂತತಿ ಜಾಸ್ತಿ ಆಗದಂತೆ ಫಾಗಿಂಗ್ ಮಾಡುವ ಕೆಲಸ ಆಗಬೇಕು. ಜನರು ತೆರೆದ ಪಾತ್ರೆ, ವಸ್ತುಗಳಲ್ಲಿ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಜನರು ಕೂಡ ಈ ಬಗ್ಗೆ ಜಾಗೃತಿ ವಹಿಸಬೇಕಿದೆ. ಅದರಲ್ಲೂ ಮಕ್ಕಳು ಹಾಗೂ ವೃದ್ಧರು ಹೆಚ್ಚಾಗಿರೋ ಮನೆಗಳಲ್ಲಿ ಹೆಚ್ಚಿನ ಕಾಳಜಿ ವಹಿಸಿದರೆ ಡೆಂಘಿಯಿಂದ ಬಚಾವ್ ಆಗಬಹುದು. ಒಟ್ಟಿನಲ್ಲಿ ಈ ರೋಗಗಳಿಂದ ಆತಂಕಗೊಂಡಿರೋ ಜನರಿಗೆ ಜಿಲ್ಲಾಡಳಿತ ಅಭಯ ನೀಡಿ, ಆದಷ್ಟು ಬೇಗನೇ ಎಲ್ಲ ಕಡೆಗಳಲ್ಲಿ ಕ್ರಮ ತೆಗೆದುಕೊಳ್ಳಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್