AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಹೆಚ್ಚಿದ ಡೆಂಗ್ಯೂ ಪ್ರಕರಣಗಳು: ಮೈಸೂರು, ಉತ್ತರ ಕನ್ನಡದಲ್ಲಿ ಸೋಂಕಿಗೆ ಮೊದಲ ಬಲಿ

ಎಲ್ಲೆಲ್ಲೂ ಅನಾರೋಗ್ಯ, ಜ್ವರ, ಕೆಮ್ಮು, ಮೈಕೈ ನೋವು. ಆಸ್ಪತ್ರೆಗಳು ಹೌಸ್​ಫುಲ್ ಆಗುತ್ತಿವೆ. ಮಾರಕ ಡೆಂಗ್ಯೂ ಇಡೀ ರಾಜ್ಯವನ್ನೇ ನಡುಗುವಂತೆ ಮಾಡಿದೆ. ಜಿಲ್ಲೆ ಜಿಲ್ಲೆಯಲ್ಲೂ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲಿಯೂ ಪುಟ್ಟ ಮಕ್ಕಳನ್ನೇ ಹೆಚ್ಚು ಬಾಧಿಸುತ್ತಿದೆ. ಮೈಸೂರು, ಉತ್ತರ ಕನ್ನಡದಲ್ಲಿ ಕೂಡ ಡೆಂಗ್ಯೂವಿನಿಂದ ಸಾವು ಸಂಭವಿಸಿದೆ.

ಕರ್ನಾಟಕದಲ್ಲಿ ಹೆಚ್ಚಿದ ಡೆಂಗ್ಯೂ ಪ್ರಕರಣಗಳು: ಮೈಸೂರು, ಉತ್ತರ ಕನ್ನಡದಲ್ಲಿ ಸೋಂಕಿಗೆ ಮೊದಲ ಬಲಿ
ಕರ್ನಾಕಟದಲ್ಲಿ ಹೆಚ್ಚಿದ ಡೆಂಗ್ಯೂ ಪ್ರಕರಣಗಳು (ಸಾಂದರ್ಭಿಕ ಚಿತ್ರ)Image Credit source: Getty Images
ಗಣಪತಿ ಶರ್ಮಾ
|

Updated on: Jul 05, 2024 | 7:21 AM

Share

ಬೆಂಗಳೂರು, ಜುಲೈ 5: ಈಡಿಸ್ ಸೊಳ್ಳೆಗಳಿಂದ ಹರಡುತ್ತಿರುವ ಡೆಂಗ್ಯೂ ರಾಜ್ಯದ ಜನರನ್ನ ದಂಗು ಬಡಿಸಿದೆ. ಜನವರಿಯಿಂದ ಜುಲೈ 3ರವರೆಗೆ ರಾಜ್ಯದಲ್ಲಿ 6,300ಕ್ಕೂ ಹೆಚ್ಚು ಜನರಿಗೆ ಡೆಂಗ್ಯೂ ಸೋಂಕು ತಗುಲಿದೆ. ಮೈಸೂರಿನಲ್ಲಿ ಸಮುದಾಯ ಆರೋಗ್ಯಾಧಿಕಾರಿಯೇ ಸೋಂಕಿಗೆ ಬಲಿಯಾಗಿದ್ದಾರೆ. ಹುಣಸೂರು ಆರೋಗ್ಯಾಧಿಕಾರಿ ನಾಗೇಂದ್ರ ಮೃತಪಟ್ಟಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲೂ ಡೆಂಗ್ಯೂ ಮೊದಲ ಬಲಿ ಪಡೆದಿದೆ. ಅಂಕೋಲದ ಬಾವಿಕೇರಿ ನಿವಾಸಿ ಹರೇರಾಮ್ ಗೋಪಾಲ್ ಭಟ್, ವಾರದಿಂದ ಬೆಳಗಾವಿ ಆಸ್ಪತ್ರೆಯಲ್ಲಿ ಡೆಂಗ್ಯೂಗೆ ಚಿಕಿತ್ಸೆ ಪಡೆಯುತ್ತಿದ್ದವರು ಮೃತಪಟ್ಟಿದ್ದಾರೆ.

ಹಾಸನದಲ್ಲಿ ಪುಟ್ಟ ಮಕ್ಕಳಿಗೇ ಸೋಂಕು

ಹಾಸನ ಜಿಲ್ಲೆಯಲ್ಲಿ ಮಕ್ಕಳೇ ಹೆಚ್ಚಾಗಿ ಡೆಂಗ್ಯೂಗೆ ತುತ್ತಾಗ್ತಿದ್ದಾರೆ. ಕಳೆದೊಂದು ವಾರದಲ್ಲಿ, ಹೊಳೆನರಸೀಪುರದ ಇಬ್ಬರು ಮಕ್ಕಳು, ಅರಕಲಗೂಡಿನಲ್ಲಿ ಮಗುವೊಂದು ಡೆಂಗ್ಯೂವಿನಿಂದ ಪ್ರಾಣ ಕಳೆದುಕೊಂಡಿದೆ. ಹಿಮ್ಸ್​ನಲ್ಲಿ 37 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದು, 8 ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ.

ಡೆಂಗ್ಯೂ ಪ್ರಕರಣಗಳ ಏರಿಕೆ ಬೆನ್ನಲ್ಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಡಿಸಿ ಹಾಗೂ ಡಿಹೆಚ್​ಓಗಳ ಜೊತೆ ವಿಧಾನಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಜಿಲ್ಲಾಡಳಿತ, ತಾಲೂಕು, ಪಂಚಾಯ್ತಿ ಅಧಿಕಾರಿಗಳು ಡೆಂಗ್ಯೂ ನಿಯಂತ್ರಿಸಲು ಶ್ರಮ ವಹಿಸಬೇಕು ಎಂದು ಅವರು ಸೂಚಿಸಿದ್ದಾರೆ.

ಇದನ್ನೂ ಓದಿ: ಮಕ್ಕಳ‌ಲ್ಲಿ ಕಾಣಿಸಿಕೊಳ್ಳುತ್ತಿದೆ ಕಾಲುಬಾಯಿ ರೋಗ; ಲಕ್ಷಣಗಳು, ವಹಿಸಬೇಕಾದ ಮುನ್ನೆಚ್ಚರಿಕೆ ಬಗ್ಗೆ ಇಲ್ಲಿದೆ ಮಾಹಿತಿ

ಮಕ್ಕಳಲ್ಲಿ ಡೆಂಗ್ಯೂ ಪ್ರಕರಣಗಳು ಗಮನಾರ್ಹವಾಗಿ ಕಂಡುಬರುತ್ತಿವೆ. ಪ್ರತಿದಿನ ಸರಾಸರಿ 10 ಪ್ರಕರಣಗಳು ಮಕ್ಕಳಲ್ಲಿ ವರದಿಯಾಗುತ್ತಿದ್ದು ತಿಂಗಳಿಗೆ ಸರಿಸುಮಾರು 300- 400 ಮಕ್ಕಳಲ್ಲಿ ಇದು ಕಂಡುಬರುತ್ತಿದೆ ಎಂಬ ಆಘತಕಾರಿ ಮಾಹಿತಿಯನ್ನು ಬೆಂಗಳೂರಿನ ಮದರ್ ಹುಡ್ ಆಸ್ಪತ್ರೆಗಳ ವೈದ್ಯರು ಹಂಚಿಕೊಂಡಿದ್ದಾರೆ.

ಮಕ್ಕಳೇ ಹೆಚ್ಚಾಗಿ ಡೆಂಗ್ಯೂಗೆ ತುತ್ತಾಗುತ್ತಿರುವುದು ಕಳವಳ ಹೆಚ್ಚಿಸಿದೆ. ಪೋಷಕರು ಮಕ್ಕಳ ಆರೋಗ್ಯದ ಜೊತೆ ತಮ್ಮ ಸುತ್ತಮುತ್ತಲಿನ ಸ್ವಚ್ಛತೆ ಬಗ್ಗೆಯೂ ಗಮನಹರಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ