AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗಾಲ ಶುರುವಾಗುತ್ತಿದ್ದಂತೆ ರಾಜ್ಯದಲ್ಲಿ ಡೆಂಗ್ಯೂ ಹಾವಳಿ: 5 ಸಾವಿರ ಗಡಿ ದಾಟಿದ ಕೇಸ್

ಬರದಿಂದ ಕಂಗೆಟ್ಟಿದ್ದ ಜನ್ರ ಮೊಗದಲ್ಲಿ ಮಳೆ ಮಂದಹಾಸ ಮೂಡಿದೆ. ಮಳೆ ಖುಷಿ ತಂದ ಹೊತ್ತಲ್ಲೇ ಜನರ ಆರೋಗ್ಯವೂ ಕೈಕೊಡುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂ ಡಂಗುರ ಸಾರಿದೆ. ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ 6 ತಿಂಗಳಲ್ಲಿ 1,230 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ 5 ಸಾವಿರ ಡೆಂಗ್ಯೂ ಕೇಸ್ ಗಡಿ ದಾಟಿದೆ.

ಮಳೆಗಾಲ ಶುರುವಾಗುತ್ತಿದ್ದಂತೆ ರಾಜ್ಯದಲ್ಲಿ ಡೆಂಗ್ಯೂ ಹಾವಳಿ: 5 ಸಾವಿರ ಗಡಿ ದಾಟಿದ ಕೇಸ್
ಮಳೆಗಾಲ ಶುರುವಾಗುತ್ತಿದ್ದಂತೆ ರಾಜ್ಯದಲ್ಲಿ ಡೆಂಗ್ಯೂ ಹಾವಳಿ: 5 ಸಾವಿರ ಗಡಿ ದಾಟಿದ ಕೇಸ್
Follow us
Vinay Kashappanavar
| Updated By: ಗಂಗಾಧರ​ ಬ. ಸಾಬೋಜಿ

Updated on:Jun 22, 2024 | 6:41 PM

ಬೆಂಗಳೂರು, ಜೂನ್​ 22: ಕ್ಷಣ ಕ್ಷಣಕ್ಕೂ ರಾಜ್ಯದ ಹವಮಾನ ಬದಲಾವಣೆ ಆಗುತ್ತಿದೆ. ಹೀಗಾಗಿ ಜನರು ಪುಲ್ ಹೈರಾಣಾಗಿದ್ದಾರೆ. ಇನ್ನು ಮಳೆಗಾಲ ಶುರುವಾಗುತ್ತಿದ್ದಂತೆ ಡೆಂಘೀ/ಡೆಂಗ್ಯೂ ಹಾವಳಿ ಕೂಡ ಶುರುವಾಗಿದ್ದು, ರಾಜ್ಯದಲ್ಲಿ ಡೆಂಗ್ಯೂ (Dengue) ಕೇಸ್​ 5 ಸಾವಿರ ಗಡಿ ದಾಟಿದೆ. ಈ ಕುರಿತಾಗಿ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ಮಾಹಿತಿ ನೀಡಿದೆ. ರಾಜ್ಯದಲ್ಲಿ ಈ ವರ್ಷ ಜನವರಿಯಿಂದ ಇಲ್ಲಿಯವರೆಗೆ ಒಟ್ಟು 5187 ಡೆಂಗ್ಯೂ ಕೇಸ್ ಪತ್ತೆ ಆಗಿವೆ.

ಸದ್ಯ ಡೆಂಗ್ಯೂ ಹಾವಳಿಗೆ ಜನರು ಹೈರಾಣಾಗಿದ್ದು, ರಾಜಧಾನಿಯಲ್ಲಿ ಜ್ವರ, ನೆಗಡಿ ಹೆಚ್ಚಾಗುತ್ತಿದೆ. ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ 6 ತಿಂಗಳಲ್ಲಿ 1,230 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಜನವರಿಯಿಂದ 3975 ಕೇಸ್ ಪತ್ತೆ ಆಗಿದ್ದು, ಜೂನ್ ತಿಂಗಳಿನಿಂದ ಕೇಸ್​ಗಳ ಸಂಖ್ಯೆ ಏರಿಕೆ ಕಂಡಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಡೆಂಘೀ, ಚಿಕನ್ ಗುನ್ಯಾ ಹಾವಳಿ; ವಾರಕ್ಕೆ 80 ಕೇಸ್ ಪತ್ತೆ

ರಾಜ್ಯದಲ್ಲಿ 37144 ಜನರ ರಕ್ತ ಮಾದರಿ ಪಡೆಯಲಾಗಿದೆ. ಇದರಲ್ಲಿ 3957 ಜನರಿಗೆ ಪಾಸಿಟಿವ್ ಪತ್ತೆ ಆಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 4063 ಜನರ ಸ್ಯಾಂಪಲ್ಸ್ ಸಂಗ್ರಹ ಮಾಡಲಾಗಿದ್ದು, ಈ ಪೈಕಿ 1230 ಜನರಲ್ಲಿ ಡೆಂಗ್ಯೂ ಪಾಸಿಟಿವ್​ ಕಾಣಿಸಿಕೊಂಡಿವೆ. ಇಲ್ಲಿಯವರೆಗೆ ಒಟ್ಟು 5187 ಡೆಂಘಿ ಕೇಸ್ ಪತ್ತೆ ಆಗಿವೆ.

ಡೆಂಗ್ಯೂ ಕೇಸ್​​ಗಳಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. 2ನೇ ಸ್ಥಾನದಲ್ಲಿ ಹಾವೇರಿ ಇದ್ದು, 389 ಪ್ರಕರಣ ಪತ್ತೆಯಾಗಿದೆ. 12 ಜನ್ರಿಗೆ ಚಿಕಿತ್ಸೆ ಮುಂದುವರೆದಿದೆ. ಮೈಸೂರಿನಲ್ಲಿ 358, ಚಿಕ್ಕಮಗಳೂರಲ್ಲಿ 346, ಕಲಬುರಗಿಯಲ್ಲಿ 153 ಡೆಂಗ್ಯೂ ಪ್ರಕರಣಗಳು ದೃಢಪಟ್ಟಿವೆ. ರಾಜ್ಯದಲ್ಲಿ ಅತೀ ಕಡಿಮೆ ಅಂದ್ರೆ, ಯಾದಗಿರಿಯಲ್ಲಿ ಕೇವಲ 4 ಪ್ರಕರಣಗಳು ಮಾತ್ರ ಕಂಡು ಬಂದಿವೆ.

ಡೆಂಗ್ಯೂ ಕಂಟ್ರೋಲ್​ಗೆ ಆರೋಗ್ಯ ಇಲಾಖೆ ಕ್ರಮ

ಇನ್ನು, ಡೆಂಗ್ಯೂ ಕಂಟ್ರೋಲ್​ಗೆ ಆರೋಗ್ಯ ಇಲಾಖೆ ಹಲವು ಕ್ರಮ ಕೈಗೊಂಡಿದೆ. ಮನೆಗಳ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸೊಳ್ಳೆಗಳ ಸಂತಾನೋತ್ಪತ್ತಿಗೆ ಅವಕಾಶ ನೀಡದಂತೆ ಸ್ವಚ್ಛತೆ ಕಾಪಾಡಿಕೊಳ್ಳಿ. ಸಂಜೆ, ರಾತ್ರಿ ವೇಳೆ ಸೊಳ್ಳೆ ಕಚ್ಚದಂತೆ ನೋಡಿಕೊಳ್ಳಬೇಕು ಅಂತ ಜನರಲ್ಲಿ ಮನವಿ ಮಾಡಿದೆ.

ಇದನ್ನೂ ಓದಿ: ಸಿಲಿಕಾನ್ ಸಿಟಿ ಜನರಲ್ಲಿ ಹೆಚ್ಚಾಗಿದೆ ಸಾಂಕ್ರಾಮಿಕ ರೋಗಗಳು; ಜ್ವರ, ನೆಗಡಿ, ಡೆಂಗ್ಯೂ ಹಾವಳಿ

ಹಾಗೆ ಇಲಾಖೆಯಿಂದ ಸೊಳ್ಳೆಗಳ ಕಂಟ್ರೋಲ್​ಗೆ ಫಾಗಿಂಗ್, ಆಶಾ ಕಾರ್ಯಕರ್ತೆಯರಿಂದ ಜಾಗೃತಿ ಮೂಡಿಸೋ ಕೆಲಸ ನಡೀತಿದೆ. ಜೊತೆಗೆ ನೀರು ಸಂಗ್ರಹಣ ತೊಟ್ಟಿಗಳಲ್ಲಿ ಗಪ್ಪಿ ಅಥವಾ ಲಾರ್ವಾಹಾರಿ ಮೀನುಗಳನ್ನ ಬಿಟ್ಟು ಸೊಳ್ಳೆಗಳ ಉತ್ಪತ್ತಿ ತಡೆಗೆ ಮುಂದಾಗಿದೆ. ಆರೋಗ್ಯ ಕೇಂದ್ರಗಳಲ್ಲಿ ಡೆಂಗ್ಯೂ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:24 pm, Sat, 22 June 24

ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಉಗ್ರರ ದಾಳಿ ಬಳಿಕ ಪಹಲ್ಗಾಮ್​ನ ಬೇತಾಬ್ ಕಣಿವೆ ಪ್ರವಾಸಿಗರಿಗೆ ಓಪನ್
ಉಗ್ರರ ದಾಳಿ ಬಳಿಕ ಪಹಲ್ಗಾಮ್​ನ ಬೇತಾಬ್ ಕಣಿವೆ ಪ್ರವಾಸಿಗರಿಗೆ ಓಪನ್
ಶಿವಣ್ಣ ಬಗ್ಗೆ ಅವಹೇಳನಕಾರಿ ಮಾತು: ಮಡೆನೂರು ಮನು ವಿರುದ್ಧ ಚೇಂಬರ್ ಕ್ರಮ
ಶಿವಣ್ಣ ಬಗ್ಗೆ ಅವಹೇಳನಕಾರಿ ಮಾತು: ಮಡೆನೂರು ಮನು ವಿರುದ್ಧ ಚೇಂಬರ್ ಕ್ರಮ