AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ‌ನೋಟಿಫಿಕೇಷನ್ ಪ್ರಕರಣ: ಮುಂದಿನ ವಿಚಾರಣೆ ವೇಳೆ ತಪ್ಪದೇ ಹೆಚ್‌ಡಿಕೆ ಹಾಜರಿಗೆ ಕೋರ್ಟ್ ಖಡಕ್ ಸೂಚನೆ

ಡಿ‌ನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಕೋರ್ಟ್ ಲಾಸ್ಟ್ ಖಡಕ್ ಸೂಚನೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಮುಂದಿನ ವಿಚಾರಣೆ ವೇಳೆ ಹಾಜರಾಗುವ ಅನಿರ್ವಾತೆಯಲ್ಲಿ ಸಿಲುಕಿದ್ದಾರೆ.

ಡಿ‌ನೋಟಿಫಿಕೇಷನ್ ಪ್ರಕರಣ: ಮುಂದಿನ ವಿಚಾರಣೆ ವೇಳೆ ತಪ್ಪದೇ ಹೆಚ್‌ಡಿಕೆ ಹಾಜರಿಗೆ ಕೋರ್ಟ್ ಖಡಕ್ ಸೂಚನೆ
HD Kumaraswamy
TV9 Web
| Edited By: |

Updated on:Feb 16, 2023 | 8:05 PM

Share

ಬೆಂಗಳೂರು: ಹಲಗೇವಡೇರಹಳ್ಳಿ ಡಿ‌ನೋಟಿಫಿಕೇಷನ್ ಪ್ರಕರಣಕ್ಕೆ(denotification case )ಸಂಬಂಧಿಸಿದಂತೆ ಹೆಚ್.ಡಿ.ಕುಮಾರಸ್ವಾಮಿ(HD Kumaraswamy) ಅವರು ಪದೇಪದೇ ಗೈರಾಗುತ್ತಿರುವುದಕ್ಕೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್(special Court) ಅಸಮಾಧಾನ ವ್ಯಕ್ತಪಡಿಸಿದೆ. ಹೆಚ್.ಡಿ.ಕುಮಾರಸ್ವಾಮಿಗೆ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ಹಿನ್ನೆಲೆಯಲ್ಲಿ ಹಾಜರಾತಿಯಿಂದ ವಿನಾಯಿತಿ ಕೋರಿ ಹೆಚ್.ಡಿ.ಕುಮಾರಸ್ವಾಮಿ ಪರ ಅರ್ಜಿ ಸಲ್ಲಿಸಿದರು. ಇದರಿಂದ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿ, ಮುಂದಿನ ವಿಚಾರಣೆ ವೇಳೆ ತಪ್ಪದೇ ಕುಮಾರಸ್ವಾಮಿ ಹಾಜರಾಗಬೇಕೆಂದು ಸೂಚನೆ ನೀಡಿದೆ.

ಇದನ್ನೂ ಓದಿ: ಟ್ಯಾಬ್ ಪೂರೈಕೆ ಮಾಡಿದ ಕಂಪನಿಗೆ ಹಣ‌ ಪಾವತಿಸದಕ್ಕೆ ಕರ್ನಾಟಕದ ಇಬ್ಬರು IAS ಅಧಿಕಾರಿಗಳಿಗೆ ಬಂಧನ ವಾರಂಟ್

ಮುಂದಿನ ವಿಚಾರಣೆ ವೇಳೆ ತಪ್ಪದೇ ಕುಮಾರಸ್ವಾಮಿ ಹಾಜರಿಗೆ ಕೋರ್ಟ್ ಸೂಚಿಸಿದೆ. ಇದಕ್ಕೆ ಕುಮಾರಸ್ವಾಮಿ ಪರ ವಕೀಲ ಪ್ರತಿಕ್ರಿಯಿಸಿ, ಹೆಚ್.ಡಿ.ಕುಮಾರಸ್ವಾಮಿ ಹಾಜರಿ ಇರಿಸುವುದಾಗಿ ಭರವಸೆ ನೀಡಿದರು. ಬಳಿಕ ನ್ಯಾಯಾಲಯ ಮಂದಿನ ವಿಚಾರಣೆಯನ್ನು ಮಾರ್ಚ್‌ 21ಕ್ಕೆ ಮುಂದೂಡಿದೆ. ಚುನಾವಣೆಯಲ್ಲಿ ಬ್ಯುಸಿಯಾಗಿರುವ ಕುಮಾರಸ್ವಾಮಿಗೆ ಇದೀಗ ಕೋರ್ಟ್​ಗೆ ಹಾಜರಾಗುವ ಅನಿವಾರ್ಯತೆ ಎದುರಾಗಿದೆ.

ಚಾಮರಾಜನಗರದ ಎಂ.ಎಸ್.ಮಹಾದೇವಸ್ವಾಮಿ ದೂರು ದಾಖಲಿಸಿದ್ದರು. ಈ ಹಿಂದೆ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಆದ್ರೆ, ಜನಪ್ರತಿನಿಧಿಗಳ ನ್ಯಾಯಾಲಯ, ಬಿ ರಿಪೋರ್ಟ್ ತಿರಸ್ಕರಿಸಿ ವಿಚಾರಣೆಗೆ ಹಾಜರಾಗಬೇಕೆಂದು ಕುಮಾರಸ್ವಾಮಿಗೆ ಸಮನ್ಸ್ ಜಾರಿಗೊಳಿಸಿತ್ತು. ಸದ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಮಾಜಿ ಮುಖ್ಯಮಂತ್ರಿ ಹೆಚ್​ಡಿಎ ಕುಮಾರಸ್ವಾಮಿ ಕಾಲಿಗೆ ಚಕ್ರಕಟ್ಟಿಕೊಂಡವರಂತೆ ಹಗಲಿರುಳು ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ. ಮತದಾರರ ಮನಗೆಲ್ಲಲು ಪಂಚರತ್ನ ಯಾತ್ರೆ ಮೂಲಕ ಪ್ರತಿ ವಿಧಾಸನಭಾ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದಾರೆ.

ಬಿಜೆಪಿ ಸಂಸದ ಸಂಗಣ್ಣ ಕರಡಿ ಬೆಂಬಲಿಗರು ಖುಲಾಸೆ

ಬೆಂಗಳೂರು: ರೈತರ ಸಾಲ‌ಮನ್ನಾಗೆ ಆಗ್ರಹಿಸಿ ಪ್ರತಿಭಟನೆ ವೇಳೆ ಗಲಾಟೆ ಪ್ರಕರಣದಲ್ಲಿ ಕೊಪ್ಪಳ ಬಿಜೆಪಿ ಸಂಸದ ಸಂಗಣ್ಣ ಕರಡಿ ಹಾಗೂ ಅವರ ಬೆಂಬಲಿಗರ ವಿರುದ್ಧ ದೂರು ದಾಖಲಾಗಿತ್ತು. ಆದ್ರೆ, ಆರೋಪ ಸಾಬೀತಾಗದ ಹಿನ್ನೆಲೆ‌ಯಲ್ಲಿ ಖುಲಾಸೆಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌‌ ಆದೇಶ ಹೊರಡಿಸಿದೆ. 2018ರ ಮೇ 28ರಂದು ಕೊಪ್ಪಳದಲ್ಲಿ ಪ್ರತಿಭಟನೆ ವೇಳೆ ಗಲಾಟೆ ಆಗಿತ್ತು. ಆ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ‌ ಆರೋಪದಲ್ಲಿ ಕೇಸ್ ದಾಖಲಾಗಿತ್ತು. ಆದ್ರೆ, ಆರೋಪ ಸಾಬೀತಾಗದ ಹಿನ್ನೆಲೆ‌ಯಲ್ಲಿ ಖುಲಾಸೆಗೊಳಿಸಿ‌ ಕೋರ್ಟ್ ಆದೇಶಿಸಿದೆ.

Published On - 7:59 pm, Thu, 16 February 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್