Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಲಾ, ಊಬರ್​ ಆಟೋಗಳಿಗೆ ದರ ನಿಗದಿ ಪಡಿಸಿದ ಸಾರಿಗೆ ಇಲಾಖೆ, ಪ್ರಯಾಣಿಕರೇ ಗಮನಿಸಿ

ಓಲಾ(Ola), ಊಬರ್(Uber) ಆಟೋಗಳು ಪ್ರಯಾಣಿಕರ ಬಳಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿವೆ ಎಂಬ ವಿವಾದ ಸೃಷ್ಟಿಯಾಗಿತ್ತು, ಇದೀಗ ಸಾರಿಗೆ ಇಲಾಖೆ ಓಲಾ, ಉಬರ್​ ಆಟೋಗಳಿಗೆ ದರ ನಿಗದಿ ಪಡಿಸಿದೆ. ಕನಿಷ್ಠ ದರದ​ ಜತೆ ಶೇ.5ರಷ್ಟು ದರ ನಿಗದಿ ಮಾಡಿದೆ.

ಓಲಾ, ಊಬರ್​ ಆಟೋಗಳಿಗೆ ದರ ನಿಗದಿ ಪಡಿಸಿದ ಸಾರಿಗೆ ಇಲಾಖೆ, ಪ್ರಯಾಣಿಕರೇ ಗಮನಿಸಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Nov 25, 2022 | 2:29 PM

ಬೆಂಗಳೂರು; ಓಲಾ(Ola), ಊಬರ್(Uber) ಆಟೋಗಳು ಪ್ರಯಾಣಿಕರ ಬಳಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿವೆ ಎಂಬ ವಿವಾದ ಸೃಷ್ಟಿಯಾಗಿತ್ತು, ಇದೀಗ ಸಾರಿಗೆ ಇಲಾಖೆ ಓಲಾ, ಉಬರ್​ ಆಟೋಗಳಿಗೆ ದರ ನಿಗದಿ ಪಡಿಸಿದೆ. ಕನಿಷ್ಠ ದರ ​ ಜತೆಗೆ ಶೇ.5ರಷ್ಟು ದರ ನಿಗದಿ ಮಾಡಿದೆ. ಕನಿಷ್ಠ ದರ 30, 40, 60 ರೂ. ಇದ್ದರೆ ಇದೀಗ ಜತೆಗೆ ಶೇ.5ರಷ್ಟು ಹೆಚ್ಚಳ ಮಾಡಿದೆ.

ಶೇ. 5ರಷ್ಟು ಹೆಚ್ಚುವರಿ ದರದ ಜತೆ 5% ಜಿಎಸ್​ಟಿ ಸೇರಿಸಲು ಆದೇಶವನ್ನು ನೀಡಿದೆ. ಈ ಬಗ್ಗೆ ರಾಜ್ಯ ಸಾರಿಗೆ ಇಲಾಖೆ ಹೈಕೋರ್ಟ್​ಗೆ ವರದಿ ಸಲ್ಲಿಸಿದೆ. ಇಂದು ಈ ಬಗ್ಗೆ ಹೈಕೋರ್ಟ್​ನಿಂದ ಮಹತ್ವದ ಆದೇಶ ಪ್ರಕಟಿಸುವುದಷ್ಟೇ ಬಾಕಿ ಎಂದು ರಾಜ್ಯ ಸಾರಿಗೆ ಇಲಾಖೆ ಹೇಳಿದೆ.

ಇದನ್ನು ಓದಿ: ಹೆಚ್ಚುವರಿ ಶುಲ್ಕ ವಿಧಿಸಲು ಅವಕಾಶ ಕೋರಿ ಹೈಕೋರ್ಟ್​ಗೆ ಓಲಾ, ಉಬರ್ ಅರ್ಜಿ: 5 ದಿನದಲ್ಲಿ ಪ್ರತಿಕ್ರಿಯಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ

ಸರ್ಕಾರದ ನಿಯಮವನ್ನು ಉಲ್ಲಂಘಿಸಿ ಜನರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ ಓಲಾ ಹಾಗೂ ಉಬರ್​ ಪ್ರಯಾಣ ದರವನ್ನು ನಿಗದಿ ಮಾಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ 15 ದಿನಗಳ ಕಾಲಾವಕಾಶ ನೀಡಿತ್ತು. ಆದ್ರೆ ಕಾಟಾಚಾರಕ್ಕೆ ಸಭೆ ಮಾಡಿ ಸುಮ್ಮನಾಗಿದ್ದ ಸಾರಿಗೆ ಇಲಾಖೆ ಇದೀಗ ದರ ನಿಗದಿ ಮಾಡಿ. ಈ ಬಗ್ಗೆ ಹೈಕೋರ್ಟ್​ಗೂ ಸಾರಿಗೆ ಇಲಾಖೆ ವರದಿಯನ್ನು ನೀಡಿದೆ. ಇದೀಗ ಹೈಕೋರ್ಟ್ ತೀರ್ಪು ಬಾಕಿದೆ.

ಓಲಾ, ಉಬರ್, Rapido ಕಂಪನಿಗಳೊಂದಿಗೆ ಸಭೆ ನಡೆಸಿ ದರ ನಿಗದಿ ಬಗ್ಗೆ ಚರ್ಚಿಸಿ ಸಾರಿಗೆ ಇಲಾಖೆ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಆ್ಯಪ್ ಆಧಾರಿತ ಓಲಾ- ಉಬರ್ Rapido ಹಾಗೂ ಸರ್ಕಾರದ ನಡುವೆ ದರ ನಿಗದಿ ಹಗ್ಗಜಗ್ಗಾಟ ಒಂದು ರೀತಿಯ ಅಂತ್ಯವಾಗಿದೆ ಎಂದು ಹೇಳಬಹುದು. ಸಭೆಯಲ್ಲಿ ಕನಿಷ್ಠ 2 ಕಿ.ಮೀ.ಗೆ 100 ರೂ. ನಿಗದಿ ಮಾಡುವಂತೆ ಕಂಪನಿಗಳು ಡಿಮ್ಯಾಂಡ್ ಮಾಡಿತ್ತು. ಆದರೆ ಸಾರಿಗೆ ಇಲಾಖೆ ಕನಿಷ್ಠ ದರ 30, 40, 60 ರೂ. ಇದ್ದರೆ ಇದೀಗ ಜತೆಗೆ ಶೇ.5ರಷ್ಟು ಹೆಚ್ಚಳ ಮಾಡಿದೆ.

ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:08 pm, Fri, 25 November 22

ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ