AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಲಾ, ಊಬರ್​ ಆಟೋಗಳಿಗೆ ದರ ನಿಗದಿ ಪಡಿಸಿದ ಸಾರಿಗೆ ಇಲಾಖೆ, ಪ್ರಯಾಣಿಕರೇ ಗಮನಿಸಿ

ಓಲಾ(Ola), ಊಬರ್(Uber) ಆಟೋಗಳು ಪ್ರಯಾಣಿಕರ ಬಳಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿವೆ ಎಂಬ ವಿವಾದ ಸೃಷ್ಟಿಯಾಗಿತ್ತು, ಇದೀಗ ಸಾರಿಗೆ ಇಲಾಖೆ ಓಲಾ, ಉಬರ್​ ಆಟೋಗಳಿಗೆ ದರ ನಿಗದಿ ಪಡಿಸಿದೆ. ಕನಿಷ್ಠ ದರದ​ ಜತೆ ಶೇ.5ರಷ್ಟು ದರ ನಿಗದಿ ಮಾಡಿದೆ.

ಓಲಾ, ಊಬರ್​ ಆಟೋಗಳಿಗೆ ದರ ನಿಗದಿ ಪಡಿಸಿದ ಸಾರಿಗೆ ಇಲಾಖೆ, ಪ್ರಯಾಣಿಕರೇ ಗಮನಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 25, 2022 | 2:29 PM

Share

ಬೆಂಗಳೂರು; ಓಲಾ(Ola), ಊಬರ್(Uber) ಆಟೋಗಳು ಪ್ರಯಾಣಿಕರ ಬಳಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿವೆ ಎಂಬ ವಿವಾದ ಸೃಷ್ಟಿಯಾಗಿತ್ತು, ಇದೀಗ ಸಾರಿಗೆ ಇಲಾಖೆ ಓಲಾ, ಉಬರ್​ ಆಟೋಗಳಿಗೆ ದರ ನಿಗದಿ ಪಡಿಸಿದೆ. ಕನಿಷ್ಠ ದರ ​ ಜತೆಗೆ ಶೇ.5ರಷ್ಟು ದರ ನಿಗದಿ ಮಾಡಿದೆ. ಕನಿಷ್ಠ ದರ 30, 40, 60 ರೂ. ಇದ್ದರೆ ಇದೀಗ ಜತೆಗೆ ಶೇ.5ರಷ್ಟು ಹೆಚ್ಚಳ ಮಾಡಿದೆ.

ಶೇ. 5ರಷ್ಟು ಹೆಚ್ಚುವರಿ ದರದ ಜತೆ 5% ಜಿಎಸ್​ಟಿ ಸೇರಿಸಲು ಆದೇಶವನ್ನು ನೀಡಿದೆ. ಈ ಬಗ್ಗೆ ರಾಜ್ಯ ಸಾರಿಗೆ ಇಲಾಖೆ ಹೈಕೋರ್ಟ್​ಗೆ ವರದಿ ಸಲ್ಲಿಸಿದೆ. ಇಂದು ಈ ಬಗ್ಗೆ ಹೈಕೋರ್ಟ್​ನಿಂದ ಮಹತ್ವದ ಆದೇಶ ಪ್ರಕಟಿಸುವುದಷ್ಟೇ ಬಾಕಿ ಎಂದು ರಾಜ್ಯ ಸಾರಿಗೆ ಇಲಾಖೆ ಹೇಳಿದೆ.

ಇದನ್ನು ಓದಿ: ಹೆಚ್ಚುವರಿ ಶುಲ್ಕ ವಿಧಿಸಲು ಅವಕಾಶ ಕೋರಿ ಹೈಕೋರ್ಟ್​ಗೆ ಓಲಾ, ಉಬರ್ ಅರ್ಜಿ: 5 ದಿನದಲ್ಲಿ ಪ್ರತಿಕ್ರಿಯಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ

ಸರ್ಕಾರದ ನಿಯಮವನ್ನು ಉಲ್ಲಂಘಿಸಿ ಜನರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ ಓಲಾ ಹಾಗೂ ಉಬರ್​ ಪ್ರಯಾಣ ದರವನ್ನು ನಿಗದಿ ಮಾಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ 15 ದಿನಗಳ ಕಾಲಾವಕಾಶ ನೀಡಿತ್ತು. ಆದ್ರೆ ಕಾಟಾಚಾರಕ್ಕೆ ಸಭೆ ಮಾಡಿ ಸುಮ್ಮನಾಗಿದ್ದ ಸಾರಿಗೆ ಇಲಾಖೆ ಇದೀಗ ದರ ನಿಗದಿ ಮಾಡಿ. ಈ ಬಗ್ಗೆ ಹೈಕೋರ್ಟ್​ಗೂ ಸಾರಿಗೆ ಇಲಾಖೆ ವರದಿಯನ್ನು ನೀಡಿದೆ. ಇದೀಗ ಹೈಕೋರ್ಟ್ ತೀರ್ಪು ಬಾಕಿದೆ.

ಓಲಾ, ಉಬರ್, Rapido ಕಂಪನಿಗಳೊಂದಿಗೆ ಸಭೆ ನಡೆಸಿ ದರ ನಿಗದಿ ಬಗ್ಗೆ ಚರ್ಚಿಸಿ ಸಾರಿಗೆ ಇಲಾಖೆ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಆ್ಯಪ್ ಆಧಾರಿತ ಓಲಾ- ಉಬರ್ Rapido ಹಾಗೂ ಸರ್ಕಾರದ ನಡುವೆ ದರ ನಿಗದಿ ಹಗ್ಗಜಗ್ಗಾಟ ಒಂದು ರೀತಿಯ ಅಂತ್ಯವಾಗಿದೆ ಎಂದು ಹೇಳಬಹುದು. ಸಭೆಯಲ್ಲಿ ಕನಿಷ್ಠ 2 ಕಿ.ಮೀ.ಗೆ 100 ರೂ. ನಿಗದಿ ಮಾಡುವಂತೆ ಕಂಪನಿಗಳು ಡಿಮ್ಯಾಂಡ್ ಮಾಡಿತ್ತು. ಆದರೆ ಸಾರಿಗೆ ಇಲಾಖೆ ಕನಿಷ್ಠ ದರ 30, 40, 60 ರೂ. ಇದ್ದರೆ ಇದೀಗ ಜತೆಗೆ ಶೇ.5ರಷ್ಟು ಹೆಚ್ಚಳ ಮಾಡಿದೆ.

ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:08 pm, Fri, 25 November 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ