AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಲಾ, ಊಬರ್​ ಆಟೋಗಳಿಗೆ ದರ ನಿಗದಿ ಪಡಿಸಿದ ಸಾರಿಗೆ ಇಲಾಖೆ, ಪ್ರಯಾಣಿಕರೇ ಗಮನಿಸಿ

ಓಲಾ(Ola), ಊಬರ್(Uber) ಆಟೋಗಳು ಪ್ರಯಾಣಿಕರ ಬಳಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿವೆ ಎಂಬ ವಿವಾದ ಸೃಷ್ಟಿಯಾಗಿತ್ತು, ಇದೀಗ ಸಾರಿಗೆ ಇಲಾಖೆ ಓಲಾ, ಉಬರ್​ ಆಟೋಗಳಿಗೆ ದರ ನಿಗದಿ ಪಡಿಸಿದೆ. ಕನಿಷ್ಠ ದರದ​ ಜತೆ ಶೇ.5ರಷ್ಟು ದರ ನಿಗದಿ ಮಾಡಿದೆ.

ಓಲಾ, ಊಬರ್​ ಆಟೋಗಳಿಗೆ ದರ ನಿಗದಿ ಪಡಿಸಿದ ಸಾರಿಗೆ ಇಲಾಖೆ, ಪ್ರಯಾಣಿಕರೇ ಗಮನಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 25, 2022 | 2:29 PM

Share

ಬೆಂಗಳೂರು; ಓಲಾ(Ola), ಊಬರ್(Uber) ಆಟೋಗಳು ಪ್ರಯಾಣಿಕರ ಬಳಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿವೆ ಎಂಬ ವಿವಾದ ಸೃಷ್ಟಿಯಾಗಿತ್ತು, ಇದೀಗ ಸಾರಿಗೆ ಇಲಾಖೆ ಓಲಾ, ಉಬರ್​ ಆಟೋಗಳಿಗೆ ದರ ನಿಗದಿ ಪಡಿಸಿದೆ. ಕನಿಷ್ಠ ದರ ​ ಜತೆಗೆ ಶೇ.5ರಷ್ಟು ದರ ನಿಗದಿ ಮಾಡಿದೆ. ಕನಿಷ್ಠ ದರ 30, 40, 60 ರೂ. ಇದ್ದರೆ ಇದೀಗ ಜತೆಗೆ ಶೇ.5ರಷ್ಟು ಹೆಚ್ಚಳ ಮಾಡಿದೆ.

ಶೇ. 5ರಷ್ಟು ಹೆಚ್ಚುವರಿ ದರದ ಜತೆ 5% ಜಿಎಸ್​ಟಿ ಸೇರಿಸಲು ಆದೇಶವನ್ನು ನೀಡಿದೆ. ಈ ಬಗ್ಗೆ ರಾಜ್ಯ ಸಾರಿಗೆ ಇಲಾಖೆ ಹೈಕೋರ್ಟ್​ಗೆ ವರದಿ ಸಲ್ಲಿಸಿದೆ. ಇಂದು ಈ ಬಗ್ಗೆ ಹೈಕೋರ್ಟ್​ನಿಂದ ಮಹತ್ವದ ಆದೇಶ ಪ್ರಕಟಿಸುವುದಷ್ಟೇ ಬಾಕಿ ಎಂದು ರಾಜ್ಯ ಸಾರಿಗೆ ಇಲಾಖೆ ಹೇಳಿದೆ.

ಇದನ್ನು ಓದಿ: ಹೆಚ್ಚುವರಿ ಶುಲ್ಕ ವಿಧಿಸಲು ಅವಕಾಶ ಕೋರಿ ಹೈಕೋರ್ಟ್​ಗೆ ಓಲಾ, ಉಬರ್ ಅರ್ಜಿ: 5 ದಿನದಲ್ಲಿ ಪ್ರತಿಕ್ರಿಯಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ

ಸರ್ಕಾರದ ನಿಯಮವನ್ನು ಉಲ್ಲಂಘಿಸಿ ಜನರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ ಓಲಾ ಹಾಗೂ ಉಬರ್​ ಪ್ರಯಾಣ ದರವನ್ನು ನಿಗದಿ ಮಾಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ 15 ದಿನಗಳ ಕಾಲಾವಕಾಶ ನೀಡಿತ್ತು. ಆದ್ರೆ ಕಾಟಾಚಾರಕ್ಕೆ ಸಭೆ ಮಾಡಿ ಸುಮ್ಮನಾಗಿದ್ದ ಸಾರಿಗೆ ಇಲಾಖೆ ಇದೀಗ ದರ ನಿಗದಿ ಮಾಡಿ. ಈ ಬಗ್ಗೆ ಹೈಕೋರ್ಟ್​ಗೂ ಸಾರಿಗೆ ಇಲಾಖೆ ವರದಿಯನ್ನು ನೀಡಿದೆ. ಇದೀಗ ಹೈಕೋರ್ಟ್ ತೀರ್ಪು ಬಾಕಿದೆ.

ಓಲಾ, ಉಬರ್, Rapido ಕಂಪನಿಗಳೊಂದಿಗೆ ಸಭೆ ನಡೆಸಿ ದರ ನಿಗದಿ ಬಗ್ಗೆ ಚರ್ಚಿಸಿ ಸಾರಿಗೆ ಇಲಾಖೆ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಆ್ಯಪ್ ಆಧಾರಿತ ಓಲಾ- ಉಬರ್ Rapido ಹಾಗೂ ಸರ್ಕಾರದ ನಡುವೆ ದರ ನಿಗದಿ ಹಗ್ಗಜಗ್ಗಾಟ ಒಂದು ರೀತಿಯ ಅಂತ್ಯವಾಗಿದೆ ಎಂದು ಹೇಳಬಹುದು. ಸಭೆಯಲ್ಲಿ ಕನಿಷ್ಠ 2 ಕಿ.ಮೀ.ಗೆ 100 ರೂ. ನಿಗದಿ ಮಾಡುವಂತೆ ಕಂಪನಿಗಳು ಡಿಮ್ಯಾಂಡ್ ಮಾಡಿತ್ತು. ಆದರೆ ಸಾರಿಗೆ ಇಲಾಖೆ ಕನಿಷ್ಠ ದರ 30, 40, 60 ರೂ. ಇದ್ದರೆ ಇದೀಗ ಜತೆಗೆ ಶೇ.5ರಷ್ಟು ಹೆಚ್ಚಳ ಮಾಡಿದೆ.

ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:08 pm, Fri, 25 November 22

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು