AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಲಾ, ಊಬರ್​ ಆಟೋಗಳಿಗೆ ದರ ನಿಗದಿ ಪಡಿಸಿದ ಸಾರಿಗೆ ಇಲಾಖೆ, ಪ್ರಯಾಣಿಕರೇ ಗಮನಿಸಿ

ಓಲಾ(Ola), ಊಬರ್(Uber) ಆಟೋಗಳು ಪ್ರಯಾಣಿಕರ ಬಳಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿವೆ ಎಂಬ ವಿವಾದ ಸೃಷ್ಟಿಯಾಗಿತ್ತು, ಇದೀಗ ಸಾರಿಗೆ ಇಲಾಖೆ ಓಲಾ, ಉಬರ್​ ಆಟೋಗಳಿಗೆ ದರ ನಿಗದಿ ಪಡಿಸಿದೆ. ಕನಿಷ್ಠ ದರದ​ ಜತೆ ಶೇ.5ರಷ್ಟು ದರ ನಿಗದಿ ಮಾಡಿದೆ.

ಓಲಾ, ಊಬರ್​ ಆಟೋಗಳಿಗೆ ದರ ನಿಗದಿ ಪಡಿಸಿದ ಸಾರಿಗೆ ಇಲಾಖೆ, ಪ್ರಯಾಣಿಕರೇ ಗಮನಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 25, 2022 | 2:29 PM

Share

ಬೆಂಗಳೂರು; ಓಲಾ(Ola), ಊಬರ್(Uber) ಆಟೋಗಳು ಪ್ರಯಾಣಿಕರ ಬಳಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿವೆ ಎಂಬ ವಿವಾದ ಸೃಷ್ಟಿಯಾಗಿತ್ತು, ಇದೀಗ ಸಾರಿಗೆ ಇಲಾಖೆ ಓಲಾ, ಉಬರ್​ ಆಟೋಗಳಿಗೆ ದರ ನಿಗದಿ ಪಡಿಸಿದೆ. ಕನಿಷ್ಠ ದರ ​ ಜತೆಗೆ ಶೇ.5ರಷ್ಟು ದರ ನಿಗದಿ ಮಾಡಿದೆ. ಕನಿಷ್ಠ ದರ 30, 40, 60 ರೂ. ಇದ್ದರೆ ಇದೀಗ ಜತೆಗೆ ಶೇ.5ರಷ್ಟು ಹೆಚ್ಚಳ ಮಾಡಿದೆ.

ಶೇ. 5ರಷ್ಟು ಹೆಚ್ಚುವರಿ ದರದ ಜತೆ 5% ಜಿಎಸ್​ಟಿ ಸೇರಿಸಲು ಆದೇಶವನ್ನು ನೀಡಿದೆ. ಈ ಬಗ್ಗೆ ರಾಜ್ಯ ಸಾರಿಗೆ ಇಲಾಖೆ ಹೈಕೋರ್ಟ್​ಗೆ ವರದಿ ಸಲ್ಲಿಸಿದೆ. ಇಂದು ಈ ಬಗ್ಗೆ ಹೈಕೋರ್ಟ್​ನಿಂದ ಮಹತ್ವದ ಆದೇಶ ಪ್ರಕಟಿಸುವುದಷ್ಟೇ ಬಾಕಿ ಎಂದು ರಾಜ್ಯ ಸಾರಿಗೆ ಇಲಾಖೆ ಹೇಳಿದೆ.

ಇದನ್ನು ಓದಿ: ಹೆಚ್ಚುವರಿ ಶುಲ್ಕ ವಿಧಿಸಲು ಅವಕಾಶ ಕೋರಿ ಹೈಕೋರ್ಟ್​ಗೆ ಓಲಾ, ಉಬರ್ ಅರ್ಜಿ: 5 ದಿನದಲ್ಲಿ ಪ್ರತಿಕ್ರಿಯಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ

ಸರ್ಕಾರದ ನಿಯಮವನ್ನು ಉಲ್ಲಂಘಿಸಿ ಜನರಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದ ಓಲಾ ಹಾಗೂ ಉಬರ್​ ಪ್ರಯಾಣ ದರವನ್ನು ನಿಗದಿ ಮಾಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ 15 ದಿನಗಳ ಕಾಲಾವಕಾಶ ನೀಡಿತ್ತು. ಆದ್ರೆ ಕಾಟಾಚಾರಕ್ಕೆ ಸಭೆ ಮಾಡಿ ಸುಮ್ಮನಾಗಿದ್ದ ಸಾರಿಗೆ ಇಲಾಖೆ ಇದೀಗ ದರ ನಿಗದಿ ಮಾಡಿ. ಈ ಬಗ್ಗೆ ಹೈಕೋರ್ಟ್​ಗೂ ಸಾರಿಗೆ ಇಲಾಖೆ ವರದಿಯನ್ನು ನೀಡಿದೆ. ಇದೀಗ ಹೈಕೋರ್ಟ್ ತೀರ್ಪು ಬಾಕಿದೆ.

ಓಲಾ, ಉಬರ್, Rapido ಕಂಪನಿಗಳೊಂದಿಗೆ ಸಭೆ ನಡೆಸಿ ದರ ನಿಗದಿ ಬಗ್ಗೆ ಚರ್ಚಿಸಿ ಸಾರಿಗೆ ಇಲಾಖೆ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಆ್ಯಪ್ ಆಧಾರಿತ ಓಲಾ- ಉಬರ್ Rapido ಹಾಗೂ ಸರ್ಕಾರದ ನಡುವೆ ದರ ನಿಗದಿ ಹಗ್ಗಜಗ್ಗಾಟ ಒಂದು ರೀತಿಯ ಅಂತ್ಯವಾಗಿದೆ ಎಂದು ಹೇಳಬಹುದು. ಸಭೆಯಲ್ಲಿ ಕನಿಷ್ಠ 2 ಕಿ.ಮೀ.ಗೆ 100 ರೂ. ನಿಗದಿ ಮಾಡುವಂತೆ ಕಂಪನಿಗಳು ಡಿಮ್ಯಾಂಡ್ ಮಾಡಿತ್ತು. ಆದರೆ ಸಾರಿಗೆ ಇಲಾಖೆ ಕನಿಷ್ಠ ದರ 30, 40, 60 ರೂ. ಇದ್ದರೆ ಇದೀಗ ಜತೆಗೆ ಶೇ.5ರಷ್ಟು ಹೆಚ್ಚಳ ಮಾಡಿದೆ.

ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:08 pm, Fri, 25 November 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ