AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ

ಕೇರಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಸಹ ಉಸ್ತುವಾರಿಯಾಗಿರುವ ಡಿಸಿಎಂ ಡಾ.ಅಶ್ವತ್ಥ್​ ನಾರಾಯಣ ಇಂದು ಎಲೆಕ್ಷನ್​ ತಯಾರಿಯಿಂದ ಕೊಂಚ ಬ್ರೇಕ್​ ಪಡೆದು ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದರು.

ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ
ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ
KUSHAL V
|

Updated on: Mar 16, 2021 | 10:35 PM

Share

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಸಹ ಉಸ್ತುವಾರಿಯಾಗಿರುವ ಡಿಸಿಎಂ ಡಾ.ಅಶ್ವತ್ಥ್​ ನಾರಾಯಣ ಇಂದು ಎಲೆಕ್ಷನ್​ ತಯಾರಿಯಿಂದ ಕೊಂಚ ಬ್ರೇಕ್​ ಪಡೆದು ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದರು. ಚುನಾವಣಾ ಪ್ರಚಾರದಿಂದ ಬ್ರೇಕ್​ ಪಡೆದು ಸಂಜೆ ಅಯ್ಯಪ್ಪಸ್ವಾಮಿಯ ದರ್ಶನ ಮಾಡಿದರು. ಮಾಲಾಧಾರಿಯಾಗಿ ತೆರಳಿ ಡಾ.ಅಶ್ವತ್ಥ ನಾರಾಯಣ ಸ್ವಾಮಿಯ ದರ್ಶನ ಪಡೆದರು.

SABARIMALA ASHWATH NARAYANA 2

ಪೂಜೆಯಲ್ಲಿ ಭಾಗಿಯಾದ ಡಿಸಿಎಂ ಅಶ್ವತ್ಥ್ ನಾರಾಯಣ

SABARIMALA ASHWATH NARAYANA 1

ಇರುಮುಡಿ ಹೊರಲು ಸಿದ್ಧರಾದ ಡಿಸಿಎಂ

ಅಸ್ವತ್ಥ್​ ನಾರಾಯಣ ಪಂಪಾ ನದಿಯಿಂದ ಇರುಮಡಿ ಹೊತ್ತು ಕಾಲ್ನಡಿಗೆಯಲ್ಲಿ ತೆರಳಿದರು. ಅಯ್ಯಪ್ಪನ ಸನ್ನಿಧಾನದಲ್ಲಿ ಪಡಿಪೂಜೆಯಲ್ಲಿ ಭಾಗಿಯಾಗಿ ಬಳಿಕ ದೇವರ ದರ್ಶನ ಮಾಡಿದರು. ಇದಲ್ಲದೆ, ಪಂದಳಂ ಅರಮನೆಗೂ ಡಿಸಿಎಂ ಡಾ.ಅಶ್ವತ್ಥ್​ ನಾರಾಯಣ ಭೇಟಿಕೊಟ್ಟರು.

SABARIMALA ASHWATH NARAYANA 3

ಅಯ್ಯಪ್ಪನ ದರ್ಶನಕ್ಕೆ ಕಾಲ್ನಡಿಗೆಯಲ್ಲಿ ತೆರಳಿದ ಡಿಸಿಎಂ

ಮೇಲುಕೋಟೆಯಲ್ಲಿ ವಿಜೃಂಭಣೆಯಿಂದ ನಡೆದ ತೆಪ್ಪೋತ್ಸವ ಇತ್ತ, ಸಕ್ಕರೆ ನಾಡು ಮಂಡ್ಯದ ಇತಿಹಾಸ ಪ್ರಸಿದ್ಧ ಮೇಲುಕೋಟೆಯಲ್ಲಿ ತೆಪ್ಪೋತ್ಸವ ವಿಜೃಂಭಣೆಯಿಂದ ನೆರವೇರಿತು. ವೈರಮುಡಿ ಬ್ರಹ್ಮೋತ್ಸವ ಅಂಗವಾಗಿ ತೆಪ್ಪೋತ್ಸವ ಆಚರಣೆ ಮಾಡಲಾಯಿತು. ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ಮಾ.24ರಂದು ಸರಳ, ಸಂಪ್ರದಾಯಿಕವಾಗಿ ವೈರಮುಡಿ ಉತ್ಸವ ನೆರವೇರಲಿದೆ.

MND VAIRAMUDHI UTSAV 1

ಮೇಲುಕೋಟೆಯಲ್ಲಿ ವಿಜೃಂಭಣೆಯಿಂದ ನಡೆದ ತೆಪ್ಪೋತ್ಸವ

ಈ ನಡುವೆ, ಅಲಂಕಾರಗೊಂಡ ಚೆಲುವನಾರಾಯಣಸ್ವಾಮಿಯ ಉತ್ಸವ ಮೂರ್ತಿಯ ಮೆರವಣಿಗೆ ಸಹ ನಡೆಸಲಾಯಿತು. ಶ್ರೀದೇವಿ, ಭೂದೇವಿ ಜೊತೆ ಉತ್ಸವ ಮೂರ್ತಿಯ ಮೆರವಣಿಗೆ ನಡೆಸಲಾಯಿತು. ಪೂಜೆಯ ನಂತರ ಕಲ್ಯಾಣಿಯಲ್ಲಿ ತೆಪ್ಪೋತ್ಸವ ನೆರವೇರಿಸಲಾಯಿತು. ಈ ಬಾರಿ ತೆಪ್ಪೋತ್ಸವಕ್ಕೆ ವಿಶಿಷ್ಟವಾದ ತೆಪ್ಪ ಸಹ ನಿರ್ಮಾಣವಾಗಿತ್ತು. ತೆಪ್ಪೋತ್ಸವ ಕಣ್ತುಂಬಿಕೊಳ್ಳಲು ನೂರಾರು ಭಕ್ತರು ಆಗಮಿಸಿದ್ದರು.

MND VAIRAMUDHI UTSAV 2

ತೆಪ್ಪೋತ್ಸವಕ್ಕೆ ವಿಶಿಷ್ಟವಾದ ತೆಪ್ಪದ ನಿರ್ಮಾಣ

ಇದನ್ನೂ ಓದಿ: ನನ್ನ ಜೀವಕ್ಕೆ ಅಪಾಯವಿದೆ.. ನನಗೆ ಫೋನ್, ಮೆಸೇಜ್ ಮಾಡಬೇಡಿ ಎಂದಿದ್ದಳು -‘ಸಿಡಿ ಲೇಡಿ’ ತಾಯಿಯ ಆತಂಕ

Follow Us
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ