AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ

ಕೇರಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಸಹ ಉಸ್ತುವಾರಿಯಾಗಿರುವ ಡಿಸಿಎಂ ಡಾ.ಅಶ್ವತ್ಥ್​ ನಾರಾಯಣ ಇಂದು ಎಲೆಕ್ಷನ್​ ತಯಾರಿಯಿಂದ ಕೊಂಚ ಬ್ರೇಕ್​ ಪಡೆದು ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದರು.

ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ
ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ
KUSHAL V
|

Updated on: Mar 16, 2021 | 10:35 PM

Share

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಸಹ ಉಸ್ತುವಾರಿಯಾಗಿರುವ ಡಿಸಿಎಂ ಡಾ.ಅಶ್ವತ್ಥ್​ ನಾರಾಯಣ ಇಂದು ಎಲೆಕ್ಷನ್​ ತಯಾರಿಯಿಂದ ಕೊಂಚ ಬ್ರೇಕ್​ ಪಡೆದು ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದರು. ಚುನಾವಣಾ ಪ್ರಚಾರದಿಂದ ಬ್ರೇಕ್​ ಪಡೆದು ಸಂಜೆ ಅಯ್ಯಪ್ಪಸ್ವಾಮಿಯ ದರ್ಶನ ಮಾಡಿದರು. ಮಾಲಾಧಾರಿಯಾಗಿ ತೆರಳಿ ಡಾ.ಅಶ್ವತ್ಥ ನಾರಾಯಣ ಸ್ವಾಮಿಯ ದರ್ಶನ ಪಡೆದರು.

SABARIMALA ASHWATH NARAYANA 2

ಪೂಜೆಯಲ್ಲಿ ಭಾಗಿಯಾದ ಡಿಸಿಎಂ ಅಶ್ವತ್ಥ್ ನಾರಾಯಣ

SABARIMALA ASHWATH NARAYANA 1

ಇರುಮುಡಿ ಹೊರಲು ಸಿದ್ಧರಾದ ಡಿಸಿಎಂ

ಅಸ್ವತ್ಥ್​ ನಾರಾಯಣ ಪಂಪಾ ನದಿಯಿಂದ ಇರುಮಡಿ ಹೊತ್ತು ಕಾಲ್ನಡಿಗೆಯಲ್ಲಿ ತೆರಳಿದರು. ಅಯ್ಯಪ್ಪನ ಸನ್ನಿಧಾನದಲ್ಲಿ ಪಡಿಪೂಜೆಯಲ್ಲಿ ಭಾಗಿಯಾಗಿ ಬಳಿಕ ದೇವರ ದರ್ಶನ ಮಾಡಿದರು. ಇದಲ್ಲದೆ, ಪಂದಳಂ ಅರಮನೆಗೂ ಡಿಸಿಎಂ ಡಾ.ಅಶ್ವತ್ಥ್​ ನಾರಾಯಣ ಭೇಟಿಕೊಟ್ಟರು.

SABARIMALA ASHWATH NARAYANA 3

ಅಯ್ಯಪ್ಪನ ದರ್ಶನಕ್ಕೆ ಕಾಲ್ನಡಿಗೆಯಲ್ಲಿ ತೆರಳಿದ ಡಿಸಿಎಂ

ಮೇಲುಕೋಟೆಯಲ್ಲಿ ವಿಜೃಂಭಣೆಯಿಂದ ನಡೆದ ತೆಪ್ಪೋತ್ಸವ ಇತ್ತ, ಸಕ್ಕರೆ ನಾಡು ಮಂಡ್ಯದ ಇತಿಹಾಸ ಪ್ರಸಿದ್ಧ ಮೇಲುಕೋಟೆಯಲ್ಲಿ ತೆಪ್ಪೋತ್ಸವ ವಿಜೃಂಭಣೆಯಿಂದ ನೆರವೇರಿತು. ವೈರಮುಡಿ ಬ್ರಹ್ಮೋತ್ಸವ ಅಂಗವಾಗಿ ತೆಪ್ಪೋತ್ಸವ ಆಚರಣೆ ಮಾಡಲಾಯಿತು. ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯಲ್ಲಿ ಮಾ.24ರಂದು ಸರಳ, ಸಂಪ್ರದಾಯಿಕವಾಗಿ ವೈರಮುಡಿ ಉತ್ಸವ ನೆರವೇರಲಿದೆ.

MND VAIRAMUDHI UTSAV 1

ಮೇಲುಕೋಟೆಯಲ್ಲಿ ವಿಜೃಂಭಣೆಯಿಂದ ನಡೆದ ತೆಪ್ಪೋತ್ಸವ

ಈ ನಡುವೆ, ಅಲಂಕಾರಗೊಂಡ ಚೆಲುವನಾರಾಯಣಸ್ವಾಮಿಯ ಉತ್ಸವ ಮೂರ್ತಿಯ ಮೆರವಣಿಗೆ ಸಹ ನಡೆಸಲಾಯಿತು. ಶ್ರೀದೇವಿ, ಭೂದೇವಿ ಜೊತೆ ಉತ್ಸವ ಮೂರ್ತಿಯ ಮೆರವಣಿಗೆ ನಡೆಸಲಾಯಿತು. ಪೂಜೆಯ ನಂತರ ಕಲ್ಯಾಣಿಯಲ್ಲಿ ತೆಪ್ಪೋತ್ಸವ ನೆರವೇರಿಸಲಾಯಿತು. ಈ ಬಾರಿ ತೆಪ್ಪೋತ್ಸವಕ್ಕೆ ವಿಶಿಷ್ಟವಾದ ತೆಪ್ಪ ಸಹ ನಿರ್ಮಾಣವಾಗಿತ್ತು. ತೆಪ್ಪೋತ್ಸವ ಕಣ್ತುಂಬಿಕೊಳ್ಳಲು ನೂರಾರು ಭಕ್ತರು ಆಗಮಿಸಿದ್ದರು.

MND VAIRAMUDHI UTSAV 2

ತೆಪ್ಪೋತ್ಸವಕ್ಕೆ ವಿಶಿಷ್ಟವಾದ ತೆಪ್ಪದ ನಿರ್ಮಾಣ

ಇದನ್ನೂ ಓದಿ: ನನ್ನ ಜೀವಕ್ಕೆ ಅಪಾಯವಿದೆ.. ನನಗೆ ಫೋನ್, ಮೆಸೇಜ್ ಮಾಡಬೇಡಿ ಎಂದಿದ್ದಳು -‘ಸಿಡಿ ಲೇಡಿ’ ತಾಯಿಯ ಆತಂಕ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!