AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯಲ್ಲ ಎಂದ ಕೇಂದ್ರ ಸರ್ಕಾರ: ಡಿಕೆ ಶಿವಕುಮಾರ್​ ಆರೋಪ

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು 2023-24ನೇ ಸಾಲಿನ ಬಜೆಟ್​​ನಲ್ಲಿ ಕೇಂದ್ರ ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 5,300 ಕೋಟಿ ರೂ. ಅನುದಾನ ಮೀಸಲಿಟ್ಟಿತ್ತು. ಆದರೆ ಇದೀಗ ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯಲ್ಲ ಎನ್ನುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪ ಮಾಡಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯಲ್ಲ ಎಂದ ಕೇಂದ್ರ ಸರ್ಕಾರ: ಡಿಕೆ ಶಿವಕುಮಾರ್​ ಆರೋಪ
ಡಿಸಿಎಂ ಡಿಕೆ ಶಿವಕುಮಾರ್​
ಪ್ರಸನ್ನ ಗಾಂವ್ಕರ್​
| Edited By: |

Updated on: Aug 07, 2023 | 1:43 PM

Share

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಯನ್ನು (Upper Bhadra Project) ರಾಷ್ಟ್ರೀಯ ಯೋಜನೆ ಎಂದು 2023-24ನೇ ಸಾಲಿನ ಬಜೆಟ್​​ನಲ್ಲಿ ಕೇಂದ್ರ ಸರ್ಕಾರ (Central Government) ಘೋಷಿಸಿತ್ತು. ಇದಕ್ಕಾಗಿ 5,300 ಕೋಟಿ ರೂ. ಅನುದಾನ ಮೀಸಲಿಟ್ಟಿತ್ತು. ಆದರೆ ಇದೀಗ ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯಲ್ಲ ಎನ್ನುತ್ತಿದ್ದಾರೆ. ಅದಕ್ಕೆ ನಾನೇನು ಮಾಡಬೇಕು, ನನಗೂ ಜವಬ್ದಾರಿ ಇದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಗಂಭೀರ ಆರೋಪ ಮಾಡಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಯೋಜನೆ ಸಂಬಂಧ ಜಲಸಂಪನ್ಮೂಲ ಇಲಾಖೆಯಲ್ಲಿ 600 ಕೋಟಿ ರೂ. ಮಾತ್ರ ಇದೆ. ಆದರೆ 1 ಕೋಟಿ 25 ಲಕ್ಷ ರೂ. ಕೆಲಸ ಮಂಜೂರು ಆಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಕುದುರೆ.. ಶೂರ.. ಧೀರ ಅಂತ ತಿವಿದ ಹಿಂದಿನ ಸಿಎಂ ಬೊಮ್ಮಾಯಿ -ಬೊಮ್ಮಾಯಿ ಮಾತಿಗೆ ಡಿಸಿಎಂ ಡಿಕೆ ಶಿವಕುಮಾರ್​​​ಗೂ ನಗು!

ಸಚಿವ ಚಲುವರಾಯಸ್ವಾಮಿ ವಿರುದ್ಧ ಕೃಷಿ ಇಲಾಖೆ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿರುವ ವಿಚಾರವಾಗಿ ಮಾತನಾಡಿದ ಅವರು ಆರೋಪದ ಬಗ್ಗೆ ತನಿಖೆ ಮಾಡಿಸೋಣ. ನನ್ನ ವಿರುದ್ಧ ತನಿಖೆ ಮಾಡಿಸಬೇಕೆಂದು ಡಾ.ಅಶ್ವತ್ಥ್ ಹೇಳಿದ್ದರು. ಮುನಿರತ್ನ ವಿರುದ್ಧದ ಆರೋಪ ಬಗ್ಗೆ ತನಿಖೆ ಮಾಡಿಸಿ ಎಂದಿದ್ದರು.

ಬಿಬಿಎಂಪಿ ಕಾಮಗಾರಿಗಳ ಬಗ್ಗೆಯೂ ತನಿಖೆ ಮಾಡಿಸುತ್ತೇವೆ. ಬಿಬಿಎಂಪಿಯಲ್ಲಿ ಟೆಂಡರ್ ಆಗದಿದ್ದರೂ ಕಾಮಗಾರಿ ನಡೆಸಿದ್ದಾರೆ. ಹೀಗಾಗಿ ಪರಿಶೀಲನೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಬಿಎಂಪಿಯಲ್ಲಿ ಕೆಲಸ ಯಾರು ಕೊಟ್ಟರು ಗೊತ್ತಿಲ್ಲ. ಟೆಂಡರ್ ಆಗಿಲ್ಲ ಆದರೂ ಕಾಮಗಾರಿ ಮಾಡಿದ್ದಾರೆ. 25 ದಿನಕ್ಕೆ, 15 ದಿನಕ್ಕೆ ಬಿಲ್ ಆಗಿಬಿಡತ್ತಾ? 15 ದಿನಕ್ಕೆ ಇಲ್ಲಿ ಕೆಲಸ ಆಗಿಬಿಡತ್ತಾ? ಅದಕ್ಕಾಗಿಯೇ ಪರಿಶೀಲನೆಗೆ ಅಧಿಕಾರಿಗಳನ್ನು ಕೇಳಿದ್ದೇನೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ