Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯಲ್ಲ ಎಂದ ಕೇಂದ್ರ ಸರ್ಕಾರ: ಡಿಕೆ ಶಿವಕುಮಾರ್​ ಆರೋಪ

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು 2023-24ನೇ ಸಾಲಿನ ಬಜೆಟ್​​ನಲ್ಲಿ ಕೇಂದ್ರ ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 5,300 ಕೋಟಿ ರೂ. ಅನುದಾನ ಮೀಸಲಿಟ್ಟಿತ್ತು. ಆದರೆ ಇದೀಗ ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯಲ್ಲ ಎನ್ನುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪ ಮಾಡಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯಲ್ಲ ಎಂದ ಕೇಂದ್ರ ಸರ್ಕಾರ: ಡಿಕೆ ಶಿವಕುಮಾರ್​ ಆರೋಪ
ಡಿಸಿಎಂ ಡಿಕೆ ಶಿವಕುಮಾರ್​
Follow us
ಪ್ರಸನ್ನ ಗಾಂವ್ಕರ್​
| Updated By: ವಿವೇಕ ಬಿರಾದಾರ

Updated on: Aug 07, 2023 | 1:43 PM

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಯನ್ನು (Upper Bhadra Project) ರಾಷ್ಟ್ರೀಯ ಯೋಜನೆ ಎಂದು 2023-24ನೇ ಸಾಲಿನ ಬಜೆಟ್​​ನಲ್ಲಿ ಕೇಂದ್ರ ಸರ್ಕಾರ (Central Government) ಘೋಷಿಸಿತ್ತು. ಇದಕ್ಕಾಗಿ 5,300 ಕೋಟಿ ರೂ. ಅನುದಾನ ಮೀಸಲಿಟ್ಟಿತ್ತು. ಆದರೆ ಇದೀಗ ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯಲ್ಲ ಎನ್ನುತ್ತಿದ್ದಾರೆ. ಅದಕ್ಕೆ ನಾನೇನು ಮಾಡಬೇಕು, ನನಗೂ ಜವಬ್ದಾರಿ ಇದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಗಂಭೀರ ಆರೋಪ ಮಾಡಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಯೋಜನೆ ಸಂಬಂಧ ಜಲಸಂಪನ್ಮೂಲ ಇಲಾಖೆಯಲ್ಲಿ 600 ಕೋಟಿ ರೂ. ಮಾತ್ರ ಇದೆ. ಆದರೆ 1 ಕೋಟಿ 25 ಲಕ್ಷ ರೂ. ಕೆಲಸ ಮಂಜೂರು ಆಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಕುದುರೆ.. ಶೂರ.. ಧೀರ ಅಂತ ತಿವಿದ ಹಿಂದಿನ ಸಿಎಂ ಬೊಮ್ಮಾಯಿ -ಬೊಮ್ಮಾಯಿ ಮಾತಿಗೆ ಡಿಸಿಎಂ ಡಿಕೆ ಶಿವಕುಮಾರ್​​​ಗೂ ನಗು!

ಸಚಿವ ಚಲುವರಾಯಸ್ವಾಮಿ ವಿರುದ್ಧ ಕೃಷಿ ಇಲಾಖೆ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿರುವ ವಿಚಾರವಾಗಿ ಮಾತನಾಡಿದ ಅವರು ಆರೋಪದ ಬಗ್ಗೆ ತನಿಖೆ ಮಾಡಿಸೋಣ. ನನ್ನ ವಿರುದ್ಧ ತನಿಖೆ ಮಾಡಿಸಬೇಕೆಂದು ಡಾ.ಅಶ್ವತ್ಥ್ ಹೇಳಿದ್ದರು. ಮುನಿರತ್ನ ವಿರುದ್ಧದ ಆರೋಪ ಬಗ್ಗೆ ತನಿಖೆ ಮಾಡಿಸಿ ಎಂದಿದ್ದರು.

ಬಿಬಿಎಂಪಿ ಕಾಮಗಾರಿಗಳ ಬಗ್ಗೆಯೂ ತನಿಖೆ ಮಾಡಿಸುತ್ತೇವೆ. ಬಿಬಿಎಂಪಿಯಲ್ಲಿ ಟೆಂಡರ್ ಆಗದಿದ್ದರೂ ಕಾಮಗಾರಿ ನಡೆಸಿದ್ದಾರೆ. ಹೀಗಾಗಿ ಪರಿಶೀಲನೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಬಿಎಂಪಿಯಲ್ಲಿ ಕೆಲಸ ಯಾರು ಕೊಟ್ಟರು ಗೊತ್ತಿಲ್ಲ. ಟೆಂಡರ್ ಆಗಿಲ್ಲ ಆದರೂ ಕಾಮಗಾರಿ ಮಾಡಿದ್ದಾರೆ. 25 ದಿನಕ್ಕೆ, 15 ದಿನಕ್ಕೆ ಬಿಲ್ ಆಗಿಬಿಡತ್ತಾ? 15 ದಿನಕ್ಕೆ ಇಲ್ಲಿ ಕೆಲಸ ಆಗಿಬಿಡತ್ತಾ? ಅದಕ್ಕಾಗಿಯೇ ಪರಿಶೀಲನೆಗೆ ಅಧಿಕಾರಿಗಳನ್ನು ಕೇಳಿದ್ದೇನೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ