AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anand Mamani: ಅನಂದ್ ಮಾಮನಿ ರಾಜಕೀಯ ಜೀವನ, ಹತ್ತಿ ವ್ಯಾಪಾರದಿಂದ ವಿಧಾನಸಭೆ ವರೆಗೆ

ವಿಧಾನಸಭೆಗೆ ಸವದತ್ತಿ ಕ್ಷೇತ್ರದಿಂದ 3 ಭಾರಿ ಆಯ್ಕೆಯಾಗಿದ್ದರು ಆನಂದ್ ಮಾಮನಿ

Anand Mamani: ಅನಂದ್ ಮಾಮನಿ ರಾಜಕೀಯ ಜೀವನ,  ಹತ್ತಿ ವ್ಯಾಪಾರದಿಂದ ವಿಧಾನಸಭೆ ವರೆಗೆ
ವಿಧಾನಸಭೆ ಉಪಸಭಾಪತಿ ಆನಂದ್ ಮಾಮನಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 23, 2022 | 2:10 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಡೆಪ್ಯುಟಿ ‌ಸ್ಪೀಕರ್ ಆನಂದ್ ಮಾಮನಿ (Anand Mamani) ಅವರು ನಿಧನರಾಗಿದ್ದಾರೆ. ಹಲವು ದಿನಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶನಿವಾರ ಮಧ್ಯೆರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು. ಇನ್ನು ಅವರು ಸಚಿವರಾಗಬೇಕು ಎಂಬ ಮಹಾದಾಸೆ ಹೊಂದಿದ್ದರು. ಆದ್ರೆ, ಅದು ಈಡೇರಲಿಲ್ಲ.

ಆನಂದ್ (ವಿಶ್ವನಾಥ್) ಚಂದ್ರಶೇಖರ್ ಮಾಮನಿ ಅವರು ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ಜನವರಿ 18, 1966 ಜನಿಸಿದರು. ತಂದೆ ಚಂದ್ರಶೇಖರ ಮಲ್ಲಿಕಾರ್ಜುನ ಮಾಮನಿ, ತಾಯಿ ಶ್ರೀಮತಿ ಗಂಗಮ್ಮ ಮಾಮನಿ. ಹಿಂದೂ ಲಿಂಗಾಯತ (ಪಂಚಮಸಾಲಿ) ಸಮುದಾಯಕ್ಕೆ ಸೇರಿದ ಇವರು ಸವದತ್ತಿಯ ಗೌರವ ಕುಟುಂಬಕ್ಕೆ ಸೇರಿದವರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸವದತ್ತಿಯ ನಂ 1 ಸರ್ಕಾರಿ ಶಾಲೆಯಲ್ಲಿ, ಪ್ರೌಢಶಾಲಾ ಶಿಕ್ಷಣವನ್ನು ಸವದತ್ತಿಯ ಕೆ.ಎಲ್​.ಇ ಶಾಲೆಯಲ್ಲಿ ಪೂರ್ಣಗೊಳಿಸಿದರು.

ಸವದತ್ತಿಯ ಶ್ರೀ ಎಸ್​.ವಿ.ಎಸ್​ ಬೆಳ್ಳುಬ್ಬಿ ಕಾಲೇಜಿನಲ್ಲಿ ಬಿ. ಕಾಂ ಪದವಿಯನ್ನು ಪಡೆದರು. ಆನಂದ ಮಾಮನಿ ಕೃಷಿಯಲ್ಲಿ ಆಸಕ್ತಿ ಹೊಂದಿದ್ದು, ರಾಜಕೀಯಕ್ಕೆ ಬರುವ ಮುನ್ನ ಕೃಷಿ ಮಾಡುತ್ತಿದ್ದರು. 1984 ರಿಂದ 1999 ರವರೆಗೆ ಹತ್ತಿ ವ್ಯಾಪಾರ ಮಾಡುತ್ತಿದ್ದರು. ಪ್ರತಿ ವರ್ಷ 2ರಿಂದ 3.5 ಕೋಟಿ ರೂಪಾಯಿ ವ್ಯವಹಾರ ಮಾಡುತ್ತಿದ್ದರು. ಆನಂದ ಮಾಮನಿ ಪತ್ನಿ ಶ್ರೀಮತಿ ರತ್ನಾ ಆನಂದ ಮಾಮನಿ. ಇಬ್ಬರು ಮಕ್ಕಳಿದ್ದಾರೆ. ಒಂದು ಹೆಣ್ಣು ಚೇತನಾ (15) ಒಂದು ಗಂಡು ಚಿನ್ಮಯ ಮಾಮನಿ (13)

ರಾಜಕೀಯ ಜೀವನ

ಆನಂದ್ ಮಾಮನಿ ಅವರು 2000 ರಿಂದ ಸವದತ್ತಿಯ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಮತ್ತು ಶ್ರೀ ಕಾಡಶಿದ್ದೇಶ್ವರ ಉಚಿತ ಪ್ರಸಾದ ನಿಲಯ, ಶ್ರೀ ಚಂದ್ರಮ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಸವದತ್ತಿ ಅಧ್ಯಕ್ಷರಾದರು. 2000 ರಿಂದ 2002ರ ವರೆಗೆ ಪ್ರಾಥಮಿಕ ಸರಕಾರಿ ಕೃಷಿ ಮತ್ತು ಅಭಿವೃದ್ಧಿ ಬ್ಯಾಂಕ್, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ, ಯಲ್ಲಮ್ಮನಗುಡ್ಡ ಮತ್ತು ಶ್ರೀ ರೇಣುಕಾ ಯಲ್ಲಮ್ಮ ಎಜುಕೇಶನ್ ಸೊಸೈಟಿ, ಸೌಂದತ್ತಿಯ ಸದಸ್ಯರಾಗಿ‌ ಕಾರ್ಯನಿರ್ವಹಿಸಿದ್ದಾರೆ.

13 ಜೂನ್ 2015 ರಂದು ಅವರು ಡಿ ಸಿ ಸಿ ಬ್ಯಾಂಕ್ ಬೆಳಗಾವಿ ನಿರ್ದೇಶಕರಾಗಿ ಆಯ್ಕೆಯಾದರು.  ಮತ್ತೊಮ್ಮೆ 07-09-2020 ರಂದು ರೇಣುಕಾ ದೇವಸ್ತಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಎರಡನೇ ಬಾರಿಗೆ 06-11-2020 ರಿಂದ ಡಿ ಸಿ ಸಿ ಬ್ಯಾಂಕ್ ಬೆಳಗಾವಿ ನಿರ್ದೇಶಕರಾಗಿ ಆಯ್ಕೆಯಾಗಿದ್ದರು.

2008 ರಲ್ಲಿ ಬಿಜೆಪಿ ಪಕ್ಷದಿಂದ ಮೊದಲ ಬಾರಿಗೆ ಸವದತ್ತಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು. ಈ ಅವಧಿಯಲ್ಲಿ ಮತ್ತೊಮ್ಮೆ ಶ್ರೀ ರೇಣುಕಾ ಯೆಲ್ಲಮ್ಮ ದೇವಸ್ತಾನ ವ್ಯವಸ್ಥಾಪನಾ ಸಮಿತಿ, ಯೆಲ್ಲಮ್ಮನಗುಡ್ಡ 2008 ರಿಂದ 2013ವರೆಗೆ ಅಧ್ಯಕ್ಷರಾದರು. ಅವರು ಮತ್ತೆ 2013-2018 ರಲ್ಲಿ ಎರಡನೇ ಬಾರಿಗೆ ಬಿಜೆಪಿಯಿಂದ ವಿಧಾನಸಭೆಗೆ ಸ್ಪರ್ಧಿಸಿ ಜಯಗಳಿಸಿದರು. ಮತ್ತೆ 2018 ರಲ್ಲಿ ಮೂರನೇ ಬಾರಿಗೆ ಹ್ಯಾಟ್ರಿಕ್​ ವಿಜಯ ಸಾಧಿಸಿದರು. 23-03-2020  ರಿಂದ ಬಿಜೆಪಿ ಸರ್ಕಾರದಲ್ಲಿ ವಿಧಾನಸಭಾ ಡೆಪ್ಯುಟಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ತಂದೆ ಚಂದ್ರಶೇಖರ್ ಹಾದಿ ಹಿಡಿದ ಮಗ ಆನಂದ ಮಾಮನಿ

ಡೆಪ್ಯುಟಿ ಸ್ಪೀಕರ್ ಆಗಿದ್ದಾಗಲೇ ಅಂದು ತಂದೆ ತೀರಿಹೋಗಿದ್ದರು. ಇಂದು ಪುತ್ರ. 1995-1999 ಅವಧಿಯಲ್ಲಿ ದಿ. ಚಂದ್ರಶೇಖರ ಮಾಮನಿ ಅವರು ಉಪಸಭಾಧ್ಯಕ್ಷ ಸ್ಥಾನ ನಿಭಾಯಿಸಿದ್ದರು. ಅದೇ ಗತ್ತಿನಲ್ಲೇ ಆನಂದ ಮಾಮನಿ ಅವರು ಕೂಡ ಉಪಸಭಾಧ್ಯಕ್ಷ ಹುದ್ದೆ ನಿಭಾಯಿಸುತ್ತಿದ್ದ. ಆದ್ರೆ ಕಾಕತಾಳಿಯ ಎಂಬಂತೆ ತಂದೆ-ಮಗ ಇಬ್ಬರೂ ಉಪಸಭಾಧ್ಯಕ್ಷರಾಗಿದ್ದಾಗಲೇ ಇಹಲೋಕ ತ್ಯಜಿಸಿದ್ದಾರೆ.

Published On - 1:46 am, Sun, 23 October 22

ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ