AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲ್ಲಿಕಾರ್ಜುನ ಖರ್ಗೆ ವಿರುದ್ದ ಅವಮಾನಕರ ಹೇಳಿಕೆ ಕೇಸ್: ಸೂಲಿಬೆಲೆಗೆ ಜಾಮೀನು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಭಾಷಣ ಪ್ರಕರಣದಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ರಾಯಚೂರಿನ 1ನೇ ಹೆಚ್ಚು ಸೆಷನ್ಸ್ ಕೋರ್ಟ್​ನಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಜನವರಿ 20ರಂದು ಸಿರವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮಲ್ಲಿಕಾರ್ಜುನ ಖರ್ಗೆ ವಿರುದ್ದ ಅವಮಾನಕರ ಹೇಳಿಕೆ ಕೇಸ್: ಸೂಲಿಬೆಲೆಗೆ ಜಾಮೀನು
ಮಲ್ಲಿಕಾರ್ಜುನ ಖರ್ಗೆ ವಿರುದ್ದ ಅವಮಾನಕರ ಹೇಳಿಕೆ ಕೇಸ್: ಸೂಲಿಬೆಲೆಗೆ ಜಾಮೀನು
ಭೀಮೇಶ್​​ ಪೂಜಾರ್
| Edited By: |

Updated on:Oct 04, 2024 | 7:53 PM

Share

ರಾಯಚೂರು, ಅಕ್ಟೋಬರ್​ 04: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಿರುದ್ದ‌ ಅಪಮಾನಕರ ಭಾಷಣ ಪ್ರಕರಣಕ್ಕೆ ಸಂಬಂಧಿಸಂತೆ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ಜಿಲ್ಲೆಯ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದ ಹಿನ್ನೆಲೆ ರಾಯಚೂರಿನ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಿಂದ ಇಂದು ನಿರೀಕ್ಷಣಾ ಜಾಮೀನು ನೀಡಲಾಗಿದೆ.

18 ಜನವರಿ 2024 ರಂದು ರಾಯಚೂರು ಜಿಲ್ಲೆಯ ಸಿರವಾರದಲ್ಲಿ ನಮೋ ಬ್ರಿಗೇಡ್ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಭಾಷಣ ಮಾಡಿದ್ದರು. ಈ ವೇಳೆ ಭಾಷಣದಲ್ಲಿ ಕಲಬುರ್ಗಿ ಇಎಸ್‌ಐ ಆಸ್ಪತ್ರೆ ವಿಚಾರವಾಗಿ ಮಾತನಾಡಿದ್ದು, ಮಲ್ಲಿಕಾರ್ಜುನ ಖರ್ಗೆ ವಿರುದ್ದ ಅವಮಾನಕರ ಹೇಳಿಕೆ ಆರೋಪ ಮಾಡಲಾಗಿತ್ತು.

ಇದನ್ನೂ ಓದಿ: ಅ.28ರಂದು ಮುಡಾ ಕೇಸ್​​ಗೆ ಹೊಸ ರೂಪ: ಹೊಸ ಬಾಂಬ್ ಸಿಡಿಸಿದ ದೂರುದಾರ ಅಬ್ರಾಹಂ!

ಕಲಬುರ್ಗಿಯ ಕಾಂಗ್ರೆಸ್ ಮುಖಂಡ ನೀಡಿದ ದೂರು ಆಧರಿಸಿ ಜನವರಿ 20 ರಂದು ಸಿರವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆ ಮೂಲಕ ಎಫ್​ಐಆರ್​ನಲ್ಲಿ ಜಾತಿನಿಂದನೆ ಆರೋಪ ಮಾಡಲಾಗಿತ್ತು. ಆದರೆ ಕಲಬುರ್ಗಿ ಹೈಕೋರ್ಟ್ ಜಾತಿನಿಂದನೆ ಆರೋಪದ ಎಫ್‌ಐಆರ್ ರದ್ದುಗೊಳಿಸಿತ್ತು.

ಬಳಿಕ ಚಕ್ರವರ್ತಿ ಸೂಲಿಬೆಲೆ ಅಪಮಾನಕರ ಭಾಷಣ, ದ್ವೇಷ ಭಾಷಣ ಪ್ರಕರಣ ಎದುರಿಸುತ್ತಿದ್ದರು. ಈ ವಿಚಾರವಾಗಿ ಇಂದು ಕೋರ್ಟ್​ನಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.

ಚಕ್ರವರ್ತಿ ಸೂಲಿಬೆಲೆ ಹೇಳಿದ್ದೇನು?

ಖರ್ಗೆ ಸಾಹೇಬರ ಕಾಲದಲ್ಲಿ ಇಎಸ್​ಐ ಆಸ್ಪತ್ರೆ ನಿರ್ಮಾಣ‌ ಮಾಡಲಾಗಿತ್ತು. ಆಸ್ಪತ್ರೆ ಮೇಲ್ಭಾಗದಲ್ಲಿ ಡ್ರೋನ್ ಕ್ಯಾಮರಾದಿಂದ ನೋಡಿದರೆ ಈ ಚಿತ್ರ ಕಾಣುತ್ತದೆ. ಮೊದಲ ಅಕ್ಷರ ಖ, ಎರಡನೇ ಅಕ್ಷರ ಗೆ, ಆ ಮೇಲೆ ಅರ್ಧ ಅಕ್ಷರ ಖರ್ಗೆ ಅಂತಾ. ಅವರು ಕಟ್ಟಿದ ಬಿಲ್ಡಿಂಗ್ ಮೇಲೆ ಖರ್ಗೆ ಅಂತಾ ಕಾಣಬೇಕು. ಕಟ್ಟಡ ಇರೋವರೆಗೆ ಅವರ ಹೆಸರು ಉಳಿಬೇಕು ಅಂತಾ ಈ ರೀತಿ ಮಾಡಲಾಗಿದೆ. ಇದು ಅವರ ಸ್ವಂತ ದುಡ್ಡಲ್ಲ, ಪಾರ್ಟಿ ದುಡ್ಡಲ್ಲ ಜನರ ತೆರಿಗೆ ದುಡ್ಡಲ್ಲಿ ತಮ್ಮ ಹೆಸರು ಶಾಶ್ವತಗೊಳಿಸುವಂತ ಅಯೋಗ್ಯರಿದ್ದಾರೆ ಎಂದು ಕಿಡಿಕಾರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:36 pm, Fri, 4 October 24

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More