AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ: ಸತೀಶ್ ಜಾರಕಿಹೊಳಿಗೆ ಸಮನ್ಸ್​​

ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಸಮನ್ಸ್ ನೀಡಿದೆ. ಹೇಳಿಕೆಗೆ ಸಂಬಂಧಿಸಿದಂತೆ ಆಗಸ್ಟ್​ 27 ರಂದು ವಿಚಾರಣೆಗೆ ಹಾಜಾರಗುವಂತೆ ಏಕದಸ್ಯ ಪೀಠ ಆದೇಶಿಸಿದೆ.

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ: ಸತೀಶ್ ಜಾರಕಿಹೊಳಿಗೆ ಸಮನ್ಸ್​​
ಸಚಿವ ಸತೀಶ್ ಜಾರಕಿಹೊಳಿ
Ramesha M
| Edited By: ವಿವೇಕ ಬಿರಾದಾರ|

Updated on:Aug 09, 2024 | 2:40 PM

Share

ಬೆಂಗಳೂರು, ಆಗಸ್ಟ್​ 09: ಹಿಂದೂ (Hindu) ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಸಮನ್ಸ್ (Summons) ನೀಡಿದೆ. ಹಿಂದೂ ಧರ್ಮ‌ಕ್ಕೆ ನಿಂದನೆ ಮಾಡುವ‌ ಮೂಲಕ ಅಶಾಂತಿ ಮೂಡಿಸಲು ಯತ್ನಿಸಲಾಗುತ್ತಿದೆ. ಸಮುದಾಯಗಳ ನಡುವೆ ದ್ವೇಷ ಮೂಡಿಸಲು ಯತ್ನಿಸಲಾಗಿದೆ ಎಂದು 2022ರಲ್ಲಿ ವಕೀಲ ಕೆ.ದಿಲೀಪ್ ಕುಮಾರ್ ಎಂಬುವರು ಖಾಸಗಿ ದೂರು ದಾಖಲಿಸಿದ್ದರು. ದೂರು ಪರಿಗಣಿಸಿದ ನ್ಯಾ. ಕೆ.ಎನ್.ಶಿವಕುಮಾರ್ ಅವರಿದ್ದ ಪೀಠ ಆಗಸ್ಟ್​ 27ಕ್ಕೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

2022ರ ನವೆಂಬರ್​ನಲ್ಲಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಆಯೋಜಿಸಲಾಗಿದ್ದ ಮಾನವ ಬಂದುತ್ವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಚಿವ ಸತೀಶ್​ ಜಾರಕಿಹೊಳಿ, ಹಿಂದೂ ಎಂಬ ಪದ ಎಲ್ಲಿಂದ ಬಂತು? ಇದು ನಮ್ಮ ಪದವಲ್ಲ ಪರ್ಷಿಯನ್​ನಿಂದ ಬಂದಿದ್ದು. ಭಾರಕ್ಕೂ ಪರ್ಷಿಯನ್​ಗೂ ಏನು ಸಂಬಂಧ? ಎಂದು ಹೇಳಿದ್ದರು.

ಇದನ್ನೂ ಓದಿ: ಅಪೆಕ್ಸ್ ಬ್ಯಾಂಕಲ್ಲಿ ಹಗರಣ ನಡೆದಿದ್ದರೆ ಸರ್ಕಾರ ಗಮನ ಹರಿಸುತ್ತದೆ: ಸತೀಶ್ ಜಾರಕಿಹೊಳಿ 

ಮುಂದುವರೆದು ಹಿಂದೂ ಭಾರತೀಯ ಪದವೇ ಅಲ್ಲ, ಅದು ಪರ್ಷಿಯನ್​ ಪದ, ಹಿಂದೂ ನಮ್ಮದು ಹೇಗೆ ಆಯಿತು ಅನ್ನೋದು ಚರ್ಚೆ ಆಗಬೇಕಿದೆ. ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಅದು ನಿಮಗೆ ತಿಳಿದರೆ ನಾಚಿಕೆ ಆಗುತ್ತೆ. ಎಲ್ಲಿಂದಲೋ ಬಂದಿರುವ ಧರ್ಮವನ್ನು ತಂದು ಒತ್ತಾಯಪೂರ್ವಕವಾಗಿ ಹೇರಲಾಗುತ್ತಿದೆ ಎಂದು ಅವಹೇಳಕಾರಿ ಹೇಳಿಕೆ ನೀಡಿದ್ದರು.

ಈ ಹೇಳಿಕೆ ಪಕ್ಷ ತಿರಸ್ಕರಿಸುತ್ತೆ: ಸುರ್ಜೇವಾಲಾ

ಜಾರಕಿಹೊಳಿಯವರ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​, ರಾಜ್ಯ ಪ್ರಧಾನ ಕಾರ್ಯದರ್ಶಿ ರಣದೀಪ್​ ಸಿಂಗ್ ಸುರ್ಜೇವಾಲಾ ಖಂಡಿಸಿದ್ದರು. ಸತೀಶ್​ ಜಾರಕಿಹೊಳಿ ಅವರ ಹೇಳಿಕೆಯು ಅತ್ಯಂತ ದುರದೃಷ್ಟಕರ, ಇದನ್ನು ಪಕ್ಷ ತಿರಸ್ಕರಿಸುತ್ತದೆ ಎಂದು ಸುರ್ಜೇವಾಲಾ ಹೇಳಿದ್ದರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:49 pm, Fri, 9 August 24

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು