AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುತ್ತಿಗೆದಾರನ ನಿರ್ಲಕ್ಷ್ಯ; ಡಿಟೋನೇಟರ್ ಸ್ಪೋಟಗೊಂಡು ಮಕ್ಕಳು ಆಸ್ಪತ್ರೆಗೆ ದಾಖಲು

ಆ ಮಕ್ಕಳು ಅದರ ಜೊತೆ ಆಡುತ್ತಿದ್ದರು. ಅದರ ಜೊತೆ ಆಡುತ್ತಿದ್ದಂತೆ ಅದರ ಬಗ್ಗೆ ಕುತೂಹಲವೂ ಹೆಚ್ಚಾಗಿತ್ತು. ನಂತ್ರ ಅದರೊಳಗೆ ಏನಿದೆ ಅಂತ ನೋಡೋಕೆ ಕಲ್ಲಿನಿಂದ ಜಜ್ಜಿದ್ರೂ. ಆಮೇಲೆ ಅಲ್ಲಿ ನಡೆದಿದ್ದು ಯಾರು ಊಹಿಸಲಾಗದಂತ ಘಟನೆ.

ಗುತ್ತಿಗೆದಾರನ ನಿರ್ಲಕ್ಷ್ಯ; ಡಿಟೋನೇಟರ್ ಸ್ಪೋಟಗೊಂಡು ಮಕ್ಕಳು ಆಸ್ಪತ್ರೆಗೆ ದಾಖಲು
ಡಿಟೋನೇಟರ್ ಸ್ಪೋಟಗೊಂಡು ಮಕ್ಕಳು ಆಸ್ಪತ್ರೆಗೆ ದಾಖಲು
TV9 Web
| Edited By: |

Updated on: Jun 22, 2021 | 8:54 AM

Share

ಹಾಸನ: ಜಿಲ್ಲೆ ಆಲೂರು ತಾಲೂಕಿನ ಚನ್ನೇನಹಳ್ಳಿಯ ನಿವಾಸಿಗಳಾದ ಅಭಿಷೇಕ್ ಹಾಗೂ ಕೃತಿಕ ಕೈಗೆ ಸಿಕ್ಕ ಡಿಟೋನೇಟರ್ ತಂದು ಜಜ್ಜಿ ಆಸ್ಪತ್ರೆಯಲ್ಲಿ ನರಳಾಡುತ್ತಿದ್ದಾರೆ. ಚನ್ನೇನಹಳ್ಳಿಯಲ್ಲಿ ನಡೆಯುತ್ತಿರೋ ಎತ್ತಿನಹೊಳೆ ಕಾಮಗಾರಿ ಕಲ್ಲು ಸಿಡಿಸಲು ತಂದಿದ್ದ ಡಿಟೋನೇಟರ್ಗಳನ್ನ ಗುತ್ತಿಗೆದಾರ ಕೆಲಸಮುಗಿದ ಮೇಲೆ ಅಲ್ಲೇ ಬಿಟ್ಟು ಹೋಗಿದ್ದ. ಸಾಕಷ್ಟು ಪ್ರಮಾಣದಲ್ಲಿದ್ದ ಡಿಟೋನೇಟರ್ ಅನ್ನು ಕುತೂಹಲದಿಂದ ತಂದಿದ್ದ ಮಕ್ಕಳು ಅದನ್ನ ಕಲ್ಲಿನಿಂದ ಜಜ್ಜಿದ್ದಾರೆ. ಕಲ್ಲಿನಿಂದ ಜಜ್ಜುತ್ತಿದ್ದಂತೆ ಡಿಟೋನೇಟರ್ ಸ್ಪೋಟಗೊಂಡು ಮಕ್ಕಳಿಗೆ ತೀವ್ರವಾಗಿ ಗಾಯವಾಗಿದೆ. ಸದ್ಯ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಿಂಗಳುಗಳ ಹಿಂದೆಯೇ ಕಾಮಗಾರಿ ಮುಗಿಸಿ ಹೋಗಿರೋ ಗುತ್ತಿಗೆದಾರ ನಿರ್ಲಕ್ಷ್ಯದಿಂದ ಡಿಟೋನೇಟರ್ ಗಳನ್ನ ಅಲ್ಲಿಯೇ ಬಿಟ್ಟು ಹೋಗಿದ್ದ. ಸಾಕಷ್ಟು ಪ್ರಮಾಣದಲ್ಲಿ ವೈಯರ್ ರೀತಿಯಲ್ಲಿದ್ದ ಅದನ್ನ ಮಕ್ಕಳು ಕುತೂಹಲದಿಂದ ಮನೆಯ ಬಳಿ ಹೊತ್ತು ತಂದಿದ್ದಾರೆ. ಅದನ್ನ ಕಲ್ಲಿನಿಂದ ಜಜ್ಜಿ ಬೇರ್ಪಡಿಸಲು ಯತ್ನಿಸಿದ ವೇಳೆ ಸ್ಫೋಟವಾಗಿದೆ. ಸ್ಫೋಟದ ತೀವ್ರತೆ ಸುತ್ತಮುತ್ತಲ ಹಳ್ಳಿಗಳಿಗೂ ಕೇಳಿದೆ. ಆದ್ರೆ ಎರಡು ಮೂರು ಡಿಟೋನೇಟರ್ ಮಾತ್ರ ಸ್ಫೋಟವಾಗಿದ್ದು, ನಡೆಯಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ, ಬಾಂಬ್ ನಿಸ್ಕ್ರಿಯಾದಳ ಸಿಬ್ಬಂದಿ ಕೂಡ ಭೇಟಿ ನೀಡಿ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದು, ಅಲ್ಲಿದ್ದ ಡಿಟೋನೇಟರ್ ಗಳನ್ನ ವಶಕ್ಕೆ ಪಡೆಯಲಾಗಿದೆ.

ರಾಜ್ಯದಲ್ಲಿ ಸ್ಫೋಟಕಗಳಿಂದ ದೊಡ್ಡ ದೊಡ್ಡ ಅನಾಹುತ ನಡೆಯುತ್ತಿದ್ದರು, ಸಂಬಂಧ ಪಟ್ಟವರು ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ಇಲ್ಲಿ ಕೂಡ ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಮಕ್ಕಳು ಆಸ್ಪತ್ರೆಯಲ್ಲಿ ನರಳಾಡುವಂತಾಗಿದೆ.

ಇದನ್ನೂ ಓದಿ: Karnataka Weather: ಕರ್ನಾಟಕದಲ್ಲಿ ಕೊಂಚ ತಗ್ಗಿದ ವರುಣನ ಆರ್ಭಟ; ಮಲೆನಾಡು, ಕರಾವಳಿ ಭಾಗದಲ್ಲಿ ಇಂದು ಯೆಲ್ಲೋ ಅಲರ್ಟ್​

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ