AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವದುರ್ಗ ಕ್ಷೇತ್ರದ ಜೆಡಿಎಸ್ ಶಾಸಕಿ ಕರೆಮ್ಮಾ ನಾಯಕ್ ಕಾರು ಅಪಘಾತ

ದೇವದುರ್ಗ ಕ್ಷೇತ್ರದ ಜೆಡಿಎಸ್ MLA ಕರೆಮ್ಮಾ ನಾಯಕ್ ಕಾರು ಅಪಘಾತವಾಗಿದ್ದು, ಘಟನೆಯಲ್ಲಿ ಶಾಸಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮುಂದೆ ಹೋಗುತ್ತಿದ್ದ ಕಾರಿಗೆ ಶಾಸಕಿ ಇದ್ದ ಕಾರು ಡಿಕ್ಕಿಯಾಗಿದ್ದು, ದೇವದುರ್ಗದಿಂದ ಹುಬ್ಬಳ್ಳಿಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ಕರೆಮ್ಮಾ ನಾಯಕ್ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.

ದೇವದುರ್ಗ ಕ್ಷೇತ್ರದ ಜೆಡಿಎಸ್ ಶಾಸಕಿ ಕರೆಮ್ಮಾ ನಾಯಕ್ ಕಾರು ಅಪಘಾತ
ಕಾರು ಅಪಘಾತ
ಭೀಮೇಶ್​​ ಪೂಜಾರ್
| Edited By: |

Updated on: Oct 12, 2025 | 11:21 AM

Share

ರಾಯಚೂರು, ಅಕ್ಟೋಬರ್​ 12: ಲಿಂಗಸುಗೂರು ತಾಲೂಕಿನ ಗೊಲಪಲ್ಲಿ ಗ್ರಾಮದ ಬಳಿ ದೇವದುರ್ಗ ಕ್ಷೇತ್ರದ ಜೆಡಿಎಸ್  ಶಾಸಕಿ ಕರೆಮ್ಮಾ ನಾಯಕ್ (Karemma Nayak) ಕಾರು ಅಪಘಾತವಾಗಿದೆ. ಮುಂದೆ ಹೋಗುತ್ತಿದ್ದ ಕಾರಿಗೆ ಶಾಸಕಿ ಇದ್ದ ಕಾರು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಕರೆಮ್ಮಾ ನಾಯಕ್​ ಗೆ ಸಣ್ಣಪುಟ್ಟ ಗಾಯಗಳಾಗಿವೆ. ದೇವದುರ್ಗದಿಂದ ಹುಬ್ಬಳ್ಳಿಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದ್ದು, ಲಿಂಗಸುಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಶಾಸಕಿ ತೆರಳಿದ್ದಾರೆ.

ಹುಬ್ಬಳ್ಳಿಗೆ ಶಾಸಕರು ತೆರಳುತ್ತಿದ್ದ ವೇಳೆ ಕಾರಿನ ಮುಂಬದಿ ಇದ್ದ ಮತ್ತೊಂದು ಕಾರಿಗೆ ನಾಯಿ ಅಡ್ಡ ಬಂದಿದೆ. ಈ ವೇಳೆ ನಾಯಿ ತಪ್ಪಿಸಲು ಕಾರಿನ ಚಾಲಕ ಯತ್ನಿಸಿದ್ದು, ರಸ್ತೆ ಪಕ್ಕದ ಗುಡ್ಡಕ್ಕೆ ಕಾರು ಡಿಕ್ಕಿಯಾಗಿದೆ. ಹಿಂದೆಯೇ ಶಾಸಕರಿದ್ದ ಕಾರು ಕೂಡ ನಿಯಂತ್ರಣ ಕಳೆದುಕೊಂಡು ಅಪಘಾತ ನಡೆದಿದೆ. ಘಟನೆಯಲ್ಲಿ ಜಖಂಗೊಂಡಿರುವ ಎರಡು ಕಾರುಗಳು ಕೂಡ ಕರೆಮ್ಮಾ ನಾಯಕ್ ಅವರಿಗೆ ಸೇರಿದ್ದು ಎನ್ನಲಾಗಿದ್ದು, ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಮನೆಗೆ ನುಗ್ಗಿದ ದರೋಡೆಕೋರರ ಜೊತೆ ಹೋರಾಡಿದ ಚನ್ನಗಿರಿ ಮಹಿಳೆ

ಫ್ಲೆಕ್ಸ್​ ಹರಿದ ಕಿಡಿಗೇಡಿಗಳ ಬಂಧನ

ದಾವಣಗೆರೆ ನಗರದ ಬೇತೂರು ರಸ್ತೆಯ ಅರಳಿಮರ ಸರ್ಕಲ್‌ ನಲ್ಲಿ ದಸರಾ ಶೋಭಾಯಾತ್ರೆ ಹಿನ್ನಲೆ ಹಾಕಲಾಗಿದ್ದ ಫ್ಲೆಕ್ಸ್​ ಹರಿದ ಪ್ರಕರಣ ಸಂಬಂಧ 5 ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಮುಕ್ತಿಯಾರ್, ಅಬೀದ್, ಆತಿಕ್, ಸಾಧಿಕ್, ಅಮಾನುಲ್ಲಾ ಬಂಧಿತ ಆರೋಪಿಗಳು. ಚಾಮುಂಡೇಶ್ವರಿ, ಆಂಜನೇಯ ಹಾಗೂ ಶ್ರೀರಾಮನ ಭಾವಚಿತ್ರವಿದ್ದ ಫ್ಲೆಕ್ಸ್ ಗೆ ಅಕ್ಟೋಬರ್ 2ರ ರಾತ್ರಿ ವೇಳೆ ಕಿಡಿಕೇಡಿಗಳು ಬ್ಲೇಡ್​ ಹಾಕಿದ್ದರು. ಘಟನೆಯಿಂದ ಕೋಮು ಭಾವನೆಗೆ ಧಕ್ಕೆ ಯತ್ನ ಹಿನ್ನಲೆ, ಈ ಸಂಬಂಧ ಆಜಾದ್ ನಗರ ಠಾಣೆಯ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್
ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ನಮ್ಮ ಮೆಟ್ರೋದಲ್ಲಿ ಇಂದಿನಿಂದ ಹೊಸ ಬದಲಾವಣೆ: ಇಲ್ಲಿದೆ ಮಾಹಿತಿ
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಖರ್ಗೆ ಖಡಕ್ ಮಾತು
ವಿಧಾನಸಭೆ ಚುನಾವಣೆಗೆ ತಾನು ಈ ಕ್ಷೇತ್ರದ ಟಿಕೆಟ್​​ ಆಕಾಂಕ್ಷಿ ಎಂದ ಪ್ರತಾಪ್​
ವಿಧಾನಸಭೆ ಚುನಾವಣೆಗೆ ತಾನು ಈ ಕ್ಷೇತ್ರದ ಟಿಕೆಟ್​​ ಆಕಾಂಕ್ಷಿ ಎಂದ ಪ್ರತಾಪ್​
ದರ್ಶನ್ ಗೈರು ಹಾಜರಿ: ಸಂಕ್ರಾಂತಿ ಆಚರಣೆಗೆ ವಿಜಯಲಕ್ಷ್ಮಿ ಮುಂದಾಳತ್ವ
ದರ್ಶನ್ ಗೈರು ಹಾಜರಿ: ಸಂಕ್ರಾಂತಿ ಆಚರಣೆಗೆ ವಿಜಯಲಕ್ಷ್ಮಿ ಮುಂದಾಳತ್ವ
ಏರ್ಪೋಟ್ ರಸ್ತೆಯಲ್ಲಿ ಬಲಿಗಾಗಿ ಕಾಯುತ್ತಿದೆ ಟೋಲ್ ಬೂತ್
ಏರ್ಪೋಟ್ ರಸ್ತೆಯಲ್ಲಿ ಬಲಿಗಾಗಿ ಕಾಯುತ್ತಿದೆ ಟೋಲ್ ಬೂತ್