AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತ್ಯಸಂಸ್ಕಾರಕ್ಕೆ ಉಚಿತ ಚಿತಾಗಾರ; ಕೊರೊನಾ ಸಂಕಷ್ಟಕ್ಕೆ ಮಿಡಿದ ದೇವಾಂಗ ಮಂಡಳಿ

ಕೊರೊನಾ ಸೋಂಕಿನಿಂದ ನರಳಿ ನರಳಿ ಮೃತಪಟ್ಟವರ ಅಂತ್ಯಸಂಸ್ಕಾರವನ್ನು ನೆಮ್ಮದಿಯಿಂದ ನಡೆಸಲು ಸಾಧ್ಯವಾಗುತ್ತಿಲ್ಲ. ದಿನಗಟ್ಟಲೆ ಚಿತಾಗಾರಗಳ ಮುಂದೆ ಜನ ಪರದಾಡುತ್ತಿರುವ ದೃಶ್ಯಗಳು ಇಂದಿಗೂ ಬೆಂಗಳೂರಿನಲ್ಲಿ ಕಾಣಿಸುತ್ತಿವೆ.

ಅಂತ್ಯಸಂಸ್ಕಾರಕ್ಕೆ ಉಚಿತ ಚಿತಾಗಾರ; ಕೊರೊನಾ ಸಂಕಷ್ಟಕ್ಕೆ ಮಿಡಿದ ದೇವಾಂಗ ಮಂಡಳಿ
ಚಿತಾಗಾರ
Follow us
sandhya thejappa
|

Updated on: May 02, 2021 | 12:46 PM

ದೇವನಹಳ್ಳಿ: ಕೊರೊನಾ ಎರಡನೇ ಅಲೆಯ ಆರ್ಭಟದಿಂದ ಚಿತಾಗಾರದ ಮುಂದೆ ಆ್ಯಂಬುಲೆನ್ಸ್​ಗಳು ಸಾಲುಗಟ್ಟಿ ನಿಲ್ಲುತ್ತಿವೆ. ಇದರಿಂದ ಶವಸಂಸ್ಕಾರಕ್ಕೂ ಕುಟುಂಬಸ್ಥರು ಪರದಾಡುತ್ತಿದ್ದಾರೆ. ಈ ಬೆನ್ನೆಲ್ಲೆ ಇದೀಗ ಅಂತ್ಯಸಂಸ್ಕಾರಕ್ಕೆ ಪರದಾಡುವವರ ನೋವಿಗೆ ದೇವಾಂಗ ಮಂಡಳಿ ಸ್ಪಂದಿಸಿದ್ದು, ಉಚಿತ ಅಂತ್ಯಸಂಸ್ಕಾರಕ್ಕೆ ಖಾಸಗಿ ಚಿತಾಗಾರ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಕೊರೊನಾ ಸೋಂಕಿನಿಂದ ನರಳಿ ನರಳಿ ಮೃತಪಟ್ಟವರ ಅಂತ್ಯಸಂಸ್ಕಾರವನ್ನು ನೆಮ್ಮದಿಯಿಂದ ನಡೆಸಲು ಸಾಧ್ಯವಾಗುತ್ತಿಲ್ಲ. ದಿನಗಟ್ಟಲೆ ಚಿತಾಗಾರಗಳ ಮುಂದೆ ಜನ ಪರದಾಡುತ್ತಿರುವ ದೃಶ್ಯಗಳು ಇಂದಿಗೂ ಬೆಂಗಳೂರಿನಲ್ಲಿ ಕಾಣಿಸುತ್ತಿವೆ. ಹೀಗಾಗಿ ಕೊರೊನಾದಿಂದ ಸಾವನ್ನಪಿರುವ ಸೋಂಕಿತರ ವಿಧಿ ವಿಧಾನಗಳನ್ನು ಪೂರೈಸಲು ಅನುವು ಮಾಡಿಕೊಡುವ ಮೂಲಕ ದೇವಾಂಗ ಮಂಡಳಿ ಮುಂದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ದೇವಾಂಗ ಮಂಡಳಿಯ ಖಾಸಗಿ ಮುಕ್ತಿಧಾಮದಲ್ಲಿ ಆರು ಸಿಲಿಕಾನ್ ಬಾಕ್ಸ್​ಗಳಿದ್ದು, ಕೆಲ ದಿನಗಳಿಂದ ಮುಕ್ತಿಧಾಮಕ್ಕೆ ಬೀಗ ಜಡಿದಿದ್ದರು.

ಆದರೆ ಬೆಂಗಳೂರು ಸೇರಿದಂತೆ ಗ್ರಾಮಾಂತರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊವಿಡ್ ಸೋಂಕಿನಿಂದ ಮೃತಪಟ್ಟ ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ದಿನಗಟ್ಟಲೆ ಚಿತಾಗಾರದ ಮುಂದೆ ಸಂಬಂಧಿಕರು ಪರದಾಡುತ್ತಿದ್ದರು. ಹೀಗಾಗಿ ಸಾವು ನೋವುಗಳನ್ನ ಮಾಧ್ಯಮಗಳಲ್ಲಿ ಕಂಡ ದೊಡ್ಡಬಳ್ಳಾಪುರದ ದೇವಾಂಗ ಮಂಡಳಿ ಸದಸ್ಯರು ಇದೀಗ ಬೀಗ ಹಾಕಿದ್ದ ಮುಕ್ತಿಧಾಮವನ್ನ ಪುನರಾರಂಭಿಸಿದ್ದಾರೆ.

ಚಿತಾಗಾರದಲ್ಲಿ ಬೆಳಗಿನಿಂದ ಸಂಜೆವರೆಗೂ ಕೊರೊನಾ ಇಲ್ಲದ ಮೃತದೇಹಗಳಿಗೆ ಮತ್ತು ಸಂಜೆ 4 ಗಂಟೆ ನಂತರ ಕೊವಿಡ್​ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡಿದೆ. ಮೃತದೇಹ ಸುಡಲು ಸೌದೆ ಮತ್ತು ಅಂತಿಮ ವಿಧಿ ವಿಧಾನಗಳ ಕಾರ್ಯಕ್ಕೆ ಬೇಕಾದ ಸಾಮಾಗ್ರಿಗಳನ್ನು ಮಂಡಳಿ ಉಚಿತವಾಗಿ ನೀಡುತ್ತಿದ್ದಾರೆ. ಅಲ್ಲದೆ ಶವಸಂಸ್ಕಾರ ಮಾಡಿದ ನಂತರ ಮುಕ್ತಿಧಾಮದಲ್ಲಿ ಸ್ನಾನ ಮಾಡುವ ವ್ಯವಸ್ಥೆಯನ್ನು ಕುಟುಂಬಸ್ಥರಿಗೆ ಮಾಡಿಕೊಡಲಾಗಿದೆ. ಸಂಕಷ್ಟದ ಸಂದರ್ಭದಲ್ಲಿ ಖಾಸಗಿ ಚಿತಾಗಾರದಲ್ಲಿ ಸಾರ್ವಜನಿಕರು ಅಂತ್ಯಕ್ರಿಯೆ ಮಾಡಲು ದೇವಾಂಗ ಮಂಡಳಿ ತೆಗೆದುಕೊಂಡಿರುವ ನಿರ್ಧಾರಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

ನಿಮ್ಮ ಪರಿಶ್ರಮ, ಹೋರಾಟ ವ್ಯರ್ಥವಾಗುವುದಿಲ್ಲ: ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ. ವೈ ವಿಜಯೇಂದ್ರ

ಅತಿ ಹೆಚ್ಚು ತೂಕದ ಮಾವಿನ ಹಣ್ಣು ಬೆಳೆದು ವಿಶ್ವ ದಾಖಲೆಗೆ ಹೆಸರಾದ ಕೊಲಂಬಿಯಾ ರೈತರು

(Devanga mandali has given free devanahalli)

ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್