Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಬ್ಯುಲೆನ್ಸ್​ನಲ್ಲಿ ಪ್ರಚಾರ: ದೇವೇಗೌಡ ಕುರಿತ ಡಿಕೆ ಸುರೇಶ್ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ಹೀಗಿತ್ತು ನೋಡಿ

ಆಂಬ್ಯುಲೆನ್ಸ್​ನಲ್ಲಿ ಪ್ರಚಾರ: ದೇವೇಗೌಡ ಕುರಿತ ಡಿಕೆ ಸುರೇಶ್ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ಹೀಗಿತ್ತು ನೋಡಿ

Sunil MH
| Updated By: Ganapathi Sharma

Updated on: Oct 28, 2024 | 11:40 AM

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರು ಆಂಬ್ಯುಲೆನ್ಸ್​ನಲ್ಲಿ ಪ್ರಚಾರಕ್ಕೆ ಬರಲಿದ್ದಾರೆ, ಬರಲಿ ಎಂಬ ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ಹೇಳಿಕೆಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ತಿರುಗೇಟು ನೀಡಿದರು. ಚನ್ನಪಟ್ಟಣ ಉಪಚುನಾವಣೆ ಪ್ರಚಾರಕ್ಕೆ ಹೊರಡುವುದಕ್ಕೂ ಮುನ್ನ ಬೆಂಗಳೂರಿನಲ್ಲಿ ಕುಮಾರಸ್ವಾಮಿ ಹೇಳಿದ್ದೇನೆಂಬುದನ್ನು ಇಲ್ಲಿ ನೋಡಿ.

ಬೆಂಗಳೂರು, ಅಕ್ಟೋಬರ್ 28: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಆರೋಗ್ಯದ ಬಗ್ಗೆ ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ನೀಡಿರುವ ಹೇಳಿಕೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರನ್ನು ಕೆರಳಿಸಿದೆ. ಡಿಕೆ ಸುರೇಶ್ ನೀಡಿರುವ ಹೇಳಿಕೆಗೆ ಬೆಂಗಳೂರಿನಲ್ಲಿ ತಿರುಗೇಟು ನೀಡಿದ ಅವರು, ದೇವೇಗೌಡರ ಆರೋಗ್ಯದ ಬಗ್ಗೆ ಕೇವಲವಾಗಿ ಮಾತನಾಡುತ್ತಿದ್ದಾರೆ. ಎಂಸಿ ಅಶ್ವತ್ಥ್ ಕೊಟ್ಟ ಹೇಳಿಕೆಯನ್ನೇ ಡಿಕೆ ಸುರೇಶ್ ಹೇಳಿದ್ದಾರೆ. ಇದೇ ಅಶ್ವತ್ಥ್ ಪರ ಹಿಂದೆ ದೇವೇಗೌಡರು ಹಳ್ಳಿ ಹಳ್ಳಿಗೆ‌ ಪ್ರಚಾರಕ್ಕೆ ಬಂದಿರಲಿಲ್ವಾ ಆಗ ವ್ಯಾಮೋಹಕ್ಕೆ‌ ಬಿದ್ದು ದೇವೇಗೌಡರು ಪ್ರಚಾರಕ್ಕೆ ಬಂದಿದ್ದರಾ ಎಂದು ಪ್ರಶ್ನಿಸಿದರು.

ದೇವೇಗೌಡರು ಬರುತ್ತಿರುವುದು ಮೊಮ್ಮಗನ ಪಟ್ಟಾಭಿಷೇಕಕ್ಕೆ ಎನ್ನುತ್ತಿದ್ದಾರೆ. ಅಶ್ವತ್ಥ್ ಗೆಲ್ಲಿಸಲು ಅವತ್ತು ದೇವೇಗೌಡರು‌ ಹೋಗಿರಲಿಲ್ವಾ? ಅವತ್ತು ಯಾರಿಗೋಸ್ಕರ ದೇವೇಗೌಡರು ಹೋಗಿದ್ದರು? ಈ ರೀತಿಯ ಸಣ್ಣತನದ ಮಾತಿಗೆ ಕಾಲವೇ ಉತ್ತರ ಕೊಡುತ್ತದೆ ಎಂದರು.

ಇದನ್ನೂ ಓದಿ: ಆಂಬ್ಯುಲೆನ್ಸ್​ನಲ್ಲಿ ಪ್ರಚಾರಕ್ಕೆ ಬರ್ತಾರೆ: ದೇವೇಗೌಡ ವಿರುದ್ಧ ಡಿಕೆ ಸುರೇಶ್ ಹೇಳಿಕೆಯನ್ನೇ ಪ್ರತ್ಯಸ್ತ್ರ ಮಾಡಲು ಮುಂದಾದ ದಳ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ