AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಇಲಾಖೆ ಎರವಲು ಸೇವೆ ಮೂರು ವರ್ಷಕ್ಕೆ ಸೀಮಿತ: ಅಲೋಕ್ ಮೋಹನ್ ಆದೇಶ

ಪೊಲೀಸ್ ಇಲಾಖೆ ಎರವಲು ಸೇವೆಯನ್ನು ಮೂರು ವರ್ಷಕ್ಕೆ ಸೀಮಿತಗೊಳಿಸಿ ಪೊಲೀಸ್ ಮಹಾನಿರ್ದೇಶ ಅಲೋಕ್ ಮೋಹನ್ ಆದೇಶಿಸಿದ್ದಾರೆ. ವಿಶೇಷ ಕಾರಣ ಅಥವಾ ಸಂದರ್ಭದಲ್ಲಿ ಡಿಜಿ ಐಜಿಪಿ ಕಚೇರಿ ಆದೇಶದ ಮೇರೆಗೆ ಗರಿಷ್ಠ 5 ವರ್ಷದವರೆಗೆ ವಿಸ್ತರಣೆ ಮಾಡಲಾಗುತ್ತದೆ.

ಪೊಲೀಸ್ ಇಲಾಖೆ ಎರವಲು ಸೇವೆ ಮೂರು ವರ್ಷಕ್ಕೆ ಸೀಮಿತ: ಅಲೋಕ್ ಮೋಹನ್ ಆದೇಶ
ಪೊಲೀಸ್ ಇಲಾಖೆ ಎರವಲು ಸೇವೆ ಮೂರು ವರ್ಷಕ್ಕೆ ಸೀಮಿತಗೊಳಿಸಿ ಕರ್ನಾಟಕ ಡಿಜಿ ಐಜಿಪಿ ಅಲೋಕ್ ಮೋಹನ್ ಆದೇಶ
Shivaprasad B
| Edited By: |

Updated on: Aug 04, 2023 | 10:26 PM

Share

ಬೆಂಗಳೂರು, ಆಗಸ್ಟ್ 4: ಪಿಎಸ್ಐ (PSI) ಮತ್ತು ಸಿಬ್ಬಂದಿ ಎರವಲು ಸೇವೆಯನ್ನು ಮೂರು ವರ್ಷಕ್ಕೆ ಸೀಮಿತಗೊಳಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ (Alok Mohan) ಆದೇಶ ಹೊರಡಿಸಿದ್ದಾರೆ. ಮೂರು ವರ್ಷ ಮುಗಿದ ಬಳಿಕ ಮಾತೃ ಘಟಕಕ್ಕೆ ವರ್ಗಾವಣೆ ಮಾಡಲಾಗುತ್ತದೆ.

ವಿಶೇಷ ಕಾರಣ ಅಥವಾ ಸಂದರ್ಭದಲ್ಲಿ ಡಿಜಿ ಐಜಿಪಿ ಕಚೇರಿ ಆದೇಶದ ಮೇರೆಗೆ ಗರಿಷ್ಠ 5 ವರ್ಷದವರೆಗೆ ವಿಸ್ತರಣೆ ಮಾಡಲಾಗುತ್ತದೆ. ಮಾತೃ ಘಟಕದಲ್ಲಿ ಕನಿಷ್ಠ ಎರಡು ವರ್ಷ ಕೂಲ್ ಪಿರಿಯೆಡ್ ಪೂರೈಸಬೇಕು. ಕೂಲ್ ಪಿರಿಯೆಡ್ ಪೂರೈಸದೇ ಮತ್ತೆ ಎರವಲು ಸೇವೆ ನೀಡಲು ನಿರ್ಬಂಧ ವಿಧಿಸಲಾಗಿದೆ.

ಇದನ್ನೂ ಓದಿ: PSI ನೇಮಕಾತಿ ಅಕ್ರಮ ಪ್ರಕರಣ: ಮರು ಪರೀಕ್ಷೆಯೇ ಸೂಕ್ತ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್

ಗುಪ್ತವಾರ್ತೆ, ಸಿಐಡಿ, ಅರಣ್ಯ ಘಟಕ, ಲೋಕಾಯುಕ್ತ, ಕೆಪಿಟಿಸಿಎಲ್, ಬಿಡಿಎ, ಬಿಎಂಟಿಎಫ್, ಹೈಕೋರ್ಟ್, ಕೆಎಟಿ, ಸಿಎಟಿ, ಡಿಸಿಆರ್‌ಇ ಸೇರಿ ಇತರ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುವ ಪಿಎಸ್‌ಐ ಮತ್ತು ಕೆಳ ದರ್ಜೆ ಸಿಬ್ಬಂದಿಗೆ ಈ ಆದೇಶ ಅನ್ವಯವಾಗಲಿದೆ.

ಅವಧಿ ಮೀರಿ ಮುಂದುವರಿಯುವುದು ಆಡಳಿತಾತ್ಮಕ ದೃಷ್ಟಿಯಿಂದ ಸೂಕ್ತವಲ್ಲದ ಹಿನ್ನೆಲೆ ವಿಶೇಷ ಘಟಕದಲ್ಲಿ 3 ವರ್ಷ ಅವಧಿ ಪೂರೈಸಿದ ಎಸ್‌ಐ, ಸಿಬ್ಬಂದಿ ಮಾರ್ಗಸೂಚಿ ಪಾಲನೆ ಮಾಡಬೇಕೆಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಈ ಬಗ್ಗೆ ಎಲ್ಲಾ ಜಿಲ್ಲೆಯ ಎಸ್‌ಪಿ ಮತ್ತು ಪೊಲೀಸ್ ಆಯುಕ್ತರು ಕ್ರಮ ತೆಗೆದುಕೊಳ್ಳಬೇಕೆಂದು ಸೂಚಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ