AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರಾಧ ಹಿನ್ನೆಲೆಯ ವ್ಯಕ್ತಿಗಳ ಜತೆ ಸಂಪರ್ಕ, ಪೊಲೀಸ್ ಠಾಣೆಯಲ್ಲಿ ಖಾಸಗಿ ಸಂಭ್ರಮಾಚರಣೆಗಳಿಗೆ ಸಂಪೂರ್ಣ ನಿಷೇಧ: ಪ್ರವೀಣ್ ಸೂದ್ ಆದೇಶ

ಪೊಲೀಸರು ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗುವುದಕ್ಕೆ ಮುನ್ನ ತಿಳಿದುಕೊಳ್ಳಬೇಕು. ಕಾರ್ಯಕ್ರಮ ಆಯೋಜಿಸಿರುವ ಸಂಸ್ಥೆ, ವ್ಯಕ್ತಿ ಹಿನ್ನೆಲೆ ತಿಳಿಯಬೇಕು ಎಂದು ಪ್ರವೀಣ್ ಸೂದ್‌ ಆದೇಶಿಸಿದ್ದಾರೆ.

ಅಪರಾಧ ಹಿನ್ನೆಲೆಯ ವ್ಯಕ್ತಿಗಳ ಜತೆ ಸಂಪರ್ಕ, ಪೊಲೀಸ್ ಠಾಣೆಯಲ್ಲಿ ಖಾಸಗಿ ಸಂಭ್ರಮಾಚರಣೆಗಳಿಗೆ ಸಂಪೂರ್ಣ ನಿಷೇಧ: ಪ್ರವೀಣ್ ಸೂದ್ ಆದೇಶ
ಡಿಜಿ ಐಜಿಪಿ ಪ್ರವೀಣ್ ಸೂದ್
TV9 Web
| Edited By: |

Updated on:Aug 02, 2021 | 5:32 PM

Share

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಶಿಸ್ತು ಪಾಲನೆಗೆ ಖಡಕ್ ಆದೇಶ ಹೊರಡಿಸಲಾಗಿದೆ. ರೌಡಿಶೀಟರ್‌ಗಳು, ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳು, ಸಮಾಜಘಾತುಕ ವ್ಯಕ್ತಿಗಳ ಜತೆ ಸಂಪರ್ಕ ಇಟ್ಟುಕೊಳ್ಳಬಾರದು. ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಜತೆ ಭಾಗಿಯಾಗಬಾರದು. ಯಾವುದೇ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಸೂಕ್ತವಲ್ಲ ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್‌ ಖಡಕ್ ಆದೇಶ ಹೊರಡಿಸಿದ್ದಾರೆ.

ಪೊಲೀಸರು ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗುವುದಕ್ಕೆ ಮುನ್ನ ತಿಳಿದುಕೊಳ್ಳಬೇಕು. ಕಾರ್ಯಕ್ರಮ ಆಯೋಜಿಸಿರುವ ಸಂಸ್ಥೆ, ವ್ಯಕ್ತಿ ಹಿನ್ನೆಲೆ ತಿಳಿಯಬೇಕು ಎಂದು ಪ್ರವೀಣ್ ಸೂದ್‌ ಆದೇಶಿಸಿದ್ದಾರೆ.

ಪೊಲೀಸ್ ಠಾಣೆ, ಸರ್ಕಲ್ ಇನ್ಸ್‌ಪೆಕ್ಟರ್ ಕಚೇರಿ, ಎಸಿಪಿ ಕಚೇರಿಗಳಲ್ಲಿ ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವ ಯಾವುದೇ ಖಾಸಗಿ ಕಾರ್ಯಕ್ರಮ ಆಚರಣೆ ಮಾಡುವಂತಿಲ್ಲ ಎಂದು ಅವರು ಹೇಳಿದ್ದಾರೆ. ಅಷ್ಟೇ ಅಲ್ಲದೆ, ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಸ್ವಾಗತ, ಬೀಳ್ಕೊಡುಗೆ ವಿಚಾರವಾಗಿ ಪ್ರತಿಕ್ರಿಯಸಿದ ಅವರು, ಸ್ವಾಗತ, ಬೀಳ್ಕೊಡುಗೆ ಕಾರ್ಯಕ್ರಮಕ್ಕೂ ನಿರ್ಬಂಧ ಹೇರಿ ಆದೇಶ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿ ಮಾತ್ರ ಇರಬೇಕು. ಸಭೆ, ಸಮಾರಂಭಕ್ಕೆ ನೇರವಾಗಿ ಹಣ ಸಂಗ್ರಹ ಮಾಡುವಂತಿಲ್ಲ. ಹಿರಿಯ ಅಧಿಕಾರಿ ಅನುಮತಿ ಇಲ್ಲದೆ ಹಣ ಸಂಗ್ರಹಿಸಬಾರದು. ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚನೆ ಕೊಟ್ಟಿದ್ದಾರೆ. ಎಲ್ಲಾ ಅಂಶಗಳನ್ನ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಘಟಕಾಧಿಕಾರಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಎಫ್​ಐಆರ್ ಆದರೂ ಬಂಧಿಸದಿದ್ದವರ ಮಾಹಿತಿ ಸಂಗ್ರಹಿಸಲು ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ

ನಿವೃತ್ತಿಗೆ ಮೂರೇ ದಿನ ಬಾಕಿ ಇರುವಾಗ ದೆಹಲಿ ಪೊಲೀಸ್ ಆಯುಕ್ತರಾಗಿ ನೇಮಕಗೊಂಡ ರಾಕೇಶ್ ಅಸ್ತಾನಾ !

(DG IGP Praveen Sood on Police Officials contact with Criminal Background People Celebrating Personal Programs in Station)

Published On - 5:30 pm, Mon, 2 August 21

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​