AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ ಅಪಘಾತದಲ್ಲಿ ಮೃತದೇಹ ಅದಲುಬದಲು: ನಾಯಿಮರಿ ಟ್ಯಾಟೂ ಸಹಾಯದಿಂದ ಮಹಿಳೆಯ ಶವ ಪತ್ತೆ

Dharwad Road Accident dog tattoo link ಧಾರವಾಡ ಅಪಘಾತದ ಬಳಿಕ ಒಂದು ಶವ ಅದಲು ಬದಲಾಗಿ ಎಡವಟ್ಟು ನಡೆದು ಹೋಗಿತ್ತು. ಕೊನೆಗೆ ನಾಯಿಮರಿ ಟ್ಯಾಟೂ ಸಹಾಯದಿಂದ ಮಹಿಳೆಯೊಬ್ಬರ ಮೃತದೇಹ ಗುರುತು ಪತ್ತೆ ಮಾಡಲಾಗಿದೆ.

ಧಾರವಾಡ ಅಪಘಾತದಲ್ಲಿ ಮೃತದೇಹ ಅದಲುಬದಲು: ನಾಯಿಮರಿ ಟ್ಯಾಟೂ ಸಹಾಯದಿಂದ ಮಹಿಳೆಯ ಶವ ಪತ್ತೆ
ಕೊನೆಯದಾಗಿ ಗೆಳತಿರು ಕ್ಲಿಕ್ಕಿಸಿದ ಸೆಲ್ಫಿ
Follow us
TV9 Web
| Updated By: ganapathi bhat

Updated on:Apr 06, 2022 | 8:52 PM

ಧಾರವಾಡ: ಮೊನ್ನೆ (ಜ.15) ಬೆಳಗ್ಗೆ ಧಾರವಾಡದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸಂಭವಿಸಿದ ಅಪಘಾತದಲ್ಲಿ 11 ಜನ ಸಾವನ್ನಪ್ಪಿರುವ ದಾರುಣೆ ಘಟನೆ ನಡೆದಿದೆ. ಈ ಅಪಘಾತದ ಬಳಿಕ, ಮೃತರಾದವರಲ್ಲಿ ಕೆಲವರ ಶವ ಗುರುತು ಪತ್ತೆ ಸವಾಲಾಗಿ ಪರಿಣಮಿಸಿದೆ. ಒಂದು ಶವ ಅದಲು ಬದಲಾಗಿದ್ದು ಎಡವಟ್ಟು ನಡೆದು ಹೋಗಿತ್ತು. ಕೊನೆಗೆ ನಾಯಿಮರಿ ಟ್ಯಾಟೂ ಸಹಾಯದಿಂದ ಮಹಿಳೆಯೊಬ್ಬರ ಶವದ ಗುರುತು ಪತ್ತೆ ಮಾಡಲಾಗಿದೆ.

ಕೆಲವರು ಪ್ರೀತಿಗಾಗಿ, ಇನ್ನೂ ಕೆಲವರು ಫ್ಯಾಷನ್​ಗಾಗಿ ಟ್ಯಾಟೂ ಹಾಕಿಸಿಕೊಳ್ಳುತ್ತಾರೆ. ಆದರೆ ಇಲ್ಲಿ, ಕೈಗೆ ಹಾಕಿಸಿಕೊಂಡಿದ್ದ ಟ್ಯಾಟೂ ಸಹಾಯದಿಂದ ಶವದ ಗುರುತು ಪತ್ತೆ ಮಾಡಲಾಗಿದೆ. ಧಾರವಾಡ ತಾಲೂಕಿನ ಇಟಿಗಟ್ಟಿ ಗ್ರಾಮದ ಬಳಿ ಮೊನ್ನೆ ನಡೆದ ಭೀಕರ ಅಪಘಾತದಲ್ಲಿ 11 ಜನ ಮೃತಪಟ್ಟಿದ್ದಾರೆ. ಮೃತರ ಶವ ಪರೀಕ್ಷೆ ನಂತರ ಶವ ಅದಲು ಬದಲಾಗಿತ್ತು. ಹೀಗಾಗಿ ದೇಹಗಳನ್ನು ಗುರುತಿಸುವುದು ಕಷ್ಟವಾಗಿತ್ತು. ಒಬ್ಬರಿಗೆ ಸಂಬಂಧಪಟ್ಟ ಶವವನ್ನ ಇನ್ನೊಬ್ಬರು ತಗೆದುಕೊಂಡು ಹೋಗುವ ವೇಳೆ, ಕೈಗೆ ಹಾಕಿಸಿಕೊಂಡಿದ್ದ ನಾಯಿಮರಿ ಟ್ಯಾಟೂ ಸಹಾಯದಿಂದ ಮೃತರು ಅದಲು ಬದಲಾಗಿರುವುದನ್ನು ಗುರುತಿಸಲಾಗಿದೆ.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಶವಪರೀಕ್ಷೆ ನಂತರ ಯಸ್ಮಿತಾ ಎಂಬವರ ಮೃತದೇಹವನ್ನು ಪರಂಜ್ಯೋತಿ ಕುಟುಂಬದವರು ತೆಗೆದುಕೊಂಡು ಹೋಗಿದ್ದರು. ಆದರೆ ಯಸ್ಮಿತಾಳ ಕುಟುಂಬದವರು ಅವಳ ಕೈ ಮೇಲೆ ಟ್ಯಾಟೂ ಇಲ್ಲದಿರುವುದನ್ನು ನೋಡಿ ಇದು ನಮ್ಮ ಯಸ್ಮಿತಾ ಮೃತ ದೇಹ ಅಲ್ಲ ಎಂದು ತಿಳಿಸಿದ್ದಾರೆ. ಕೂಡಲೇ ಶವವನ್ನು ತೆಗೆದುಕೊಂಡು ಹೋಗುತ್ತಿದ್ದ ಪರಂಜ್ಯೋತಿ ಕಡೆಯವರಿಗೆ ಪೊಲೀಸರು ಕರೆ ಮಾಡಿ ವಿಚಾರಿಸಿದಾಗ ಆಕೆಯ ಕೈ ಮೇಲೆ ನಾಯಿಮರಿ ಟ್ಯಾಟೂ ಇರುವುದು ಪತ್ತೆಯಾಗಿದೆ. ಹೀಗಾಗೇ ಯಸ್ಮಿತಾ ಮೃತದೇಹವನ್ನ ತೆಗೆದುಕೊಂಡು ಹೋಗುತ್ತಿದ್ದ ಜ್ಯೋತಿ ಕುಟುಂಬಸ್ಥರು, ಮೃತದೇಹವನ್ನು ಹಿಂದಿರುಗಿಸಿದ್ದಾರೆ.

ಧಾರವಾಡ ಅಪಘಾತ; ಗಂಟಲುಬ್ಬಿ ಕಣ್ಣೀರಾದ ಗೆಳತಿ ಹಂಚಿಕೊಂಡ ಒಡನಾಡಿಗಳ ನೆನಪು

ಟೆಂಪೋಗೆ ಟಿಪ್ಪರ್​ ಡಿಕ್ಕಿ: ಮೃತರ ಸಂಖ್ಯೆ 13ಕ್ಕೆ ಏರಿಕೆ, ಮಾಜಿ ಶಾಸಕರ ಸೊಸೆ ದುರ್ಮರಣ

Published On - 8:14 pm, Sun, 17 January 21

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?