AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂರ ಮೀಸಲಾತಿ ರದ್ದು ವಿಚಾರ: ಯತ್ನಾಳ್, ಬೆಲ್ಲದ್ ಹೇಳಿಕೆಗೆ ಮುಸ್ಲಿಂ ಮುಖಂಡರಿಂದ ಖಂಡನೆ

ಮುಸ್ಲಿಂರ ಮೀಸಲಾತಿ ಬಗ್ಗೆ ಚಕಾರ ಎತ್ತಿ ರದ್ದುಗೊಳಿಸಬೇಕು ಎಂದು ಹೇಳಿಕೆ ನೀಡಿದ ಬಿಜೆಪಿ ಶಾಸಕರಾದ ಯತ್ನಾಳ್ ಮತ್ತು ಬೆಲ್ಲದ್ ಅವರನ್ನು ಮುಸ್ಲಿಂ ಮುಖಂಡರು ಟೀಕಿಸಿದ್ದಾರೆ.

ಮುಸ್ಲಿಂರ ಮೀಸಲಾತಿ ರದ್ದು ವಿಚಾರ: ಯತ್ನಾಳ್, ಬೆಲ್ಲದ್ ಹೇಳಿಕೆಗೆ ಮುಸ್ಲಿಂ ಮುಖಂಡರಿಂದ ಖಂಡನೆ
ಬಿಜೆಪಿ ಶಾಸಕರಾದ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಅರವಿಂದ್ ಬೆಲ್ಲದ್
Follow us
TV9 Web
| Updated By: Rakesh Nayak Manchi

Updated on:Nov 03, 2022 | 4:12 PM

ಧಾರವಾಡ: ರಾಜ್ಯದಲ್ಲಿ ಮುಸ್ಲಿಂ ಸಮುದಾಯದ ಮೀಸಲಾತಿ ರದ್ದತಿ ಬಗ್ಗೆ ಜನಪ್ರತಿನಿಧಿಗಳು ಹೇಳಿಕೆ ನೀಡುತ್ತಿದ್ದಾರೆ. ಓಬಿಸಿ ಕೋಟಾದಿಂದ ಮುಸ್ಲಿಂರನ್ನು ತೆಗದುಹಾಕುವಂತೆ ಹೇಳಿಕೆ ವಿಚಾರ ಬಿಜೆಪಿ ಶಾಸಕರಾದ ಅರವಿಂದ ಬೆಲ್ಲದ್, ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಧಾರವಾಡದ ಮುಸ್ಲಿಂ ಮುಖಂಡರು ಖಂಡನೆ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಅಂಜುಮನ್ ಇಸ್ಲಾಂ ಮಾಜಿ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ, ಪಂಚಮಸಾಲಿಗಳ ಮೀಸಲಾತಿ ಹೋರಾಟವನ್ನು ನಾವು ಬೆಂಬಲಿಸುತ್ತೇವೆ. ಅವರು ಮೀಸಲಾತಿ ತೆಗೆದುಕೊಳ್ಳಲಿ, ಈ ಬಗ್ಗೆ ನಮ್ಮ ಆಕ್ಷೇಪ ಇಲ್ಲ. ಆದರೆ ಬೆಲ್ಲದ್ ಮತ್ತು ಯತ್ನಾಳ್ ಮುಸ್ಲಿಂರ ಓಬಿಸಿ ಬಗ್ಗೆ ಮಾತನಾಡಿದ್ದಾರೆ. ಇದು ಸರಿಯಲ್ಲ. ಅವರ ಹೇಳಿಕೆಗಳನ್ನು ಖಂಡಿಸುತ್ತೇವೆ ಎಂದರು.

ಅಲ್ಪಸಂಖ್ಯಾತ ಮೀಸಲಾತಿ ಬಗ್ಗೆ ಯತ್ನಾಳ್ ಹೇಳಿದ್ದೇನು?

ಬ್ರಾಹ್ಮಣ ಸಮುದಾಯದವರಿಗೆ ಅಲ್ಪಸಂಖ್ಯಾತ ಸ್ಥಾನಮಾನ ಸಿಗಬೇಕು. ಜನಸಂಖ್ಯೆಯಲ್ಲಿ ಬ್ರಾಹ್ಮಣರು ಕೇವಲ ಶೇಕಡಾ 2ರಿಂದ 3ರಷ್ಟಿದ್ದಾರೆ. ದೇಶದಲ್ಲಿ ನಿಜವಾದ ಅಲ್ಪಸಂಖ್ಯಾತ ಸಮುದಾಯ ಅಂದರೆ ಬ್ರಾಹ್ಮಣರು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದರು. ಮುಸ್ಲಿಂ ಸಮುದಾಯದವರು ಅಲ್ಪಸಂಖ್ಯಾತರು ಅಲ್ಲವೇ ಅಲ್ಲ. ಒಂದು ಜನಾಂಗದಷ್ಟಿರುವ ಮುಸ್ಲಿಮರು ಹೇಗೆ ಅಲ್ಪ ಸಂಖ್ಯಾತರಾಗುತ್ತಾರೆ. ದೇಶದ್ರೋಹಿ ಕೆಲಸ ಮತ್ತು ಪಾಕಿಸ್ತಾನದ ಪರ ಅವರು ಮಾತನಾಡುತ್ತಾರೆ. ಅಂಥವರಿಗೆ ಮೀಸಲಾತಿ ಬೇಕು ಅಂದರೆ ಹೇಗೆ? ಬಹಳ ಸೌಲಭ್ಯ ಬೇಕಿದ್ದರೆ ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗಬಹುದು ಎಂದು ಹೇಳಿದ್ದರು. ಅಲ್ಪ ಸಂಖ್ಯಾತ ಹಾಗೂ 2ಎ ಎರಡೆರಡುವ ಮೀಸಲಾತಿ ಲಾಭವನ್ನು ಮುಸ್ಲೀಂ ಸಮುದಾಯದವರು ಪಡೆಯುತ್ತಿದ್ದಾರೆ. 2ಎ ಮೀಸಲಾತಿಯಿಂದ ತೆಗೆದುಹಾಕಲು ಎಲ್ಲ ತಯಾರಿ ನಡೆದಿದೆ. ಈ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲಿ ಗಂಭೀರ ಚಿಂತನೆ ನಡೆಯುತ್ತಿವೆ ಎಂದಿದ್ದರು. ಈ ವಿಚಾರವಾಗಿ ಶಾಸಕ ಅರವಿಂದ ಬೆಲ್ಲದ್ ನೀಡಿದ ಹೇಳಿಕೆಯನ್ನೂ ಯತ್ನಾಳ್ ಬೆಂಬಲಿಸಿದ್ದರು.

ಅರವಿಂದ ಬೆಲ್ಲದ್ ನೀಡಿದ ಹೇಳಿಕೆ ಏನು?

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಹೆಚ್ಚಿಸಿದ ಬಸವರಾಜ ಬೊಮ್ಮಾಯಿ (Basavaraj Bommai) ಸರ್ಕಾರದ ಕ್ರಮವನ್ನು ಸ್ವಾಗತಿಸುತ್ತಾ ಟಿವಿ9 ಜೊತೆ ಮಾತನಾಡಿದ್ದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್, ಹಿಂದಿನ ಕಾಂಗ್ರೆಸ್ ಸರ್ಕಾರ ಧರ್ಮಾಧಾರಿತ (religion-based) ಮೀಸಲಾತಿಯನ್ನು ಜಾರಿಗೆ ತಂದ ಕಾರಣ ಮುಸಲ್ಮಾನರು 2ಎ ಮತ್ತು 2ಬಿ-ಎರಡೂ ಕೆಟೆಗಿರಿಗಳಲ್ಲಿ ಮೀಸಲಾತಿ ಪಡೆಯುತ್ತಿದ್ದಾರೆ. ಅದನ್ನು ರದ್ದು ಮಾಡಿ ಬಹಳ ದಿನಗಳಿಂದ ಮೀಸಲಾತಿಗಾಗಿ ಆಗ್ರಹಿಸಿತ್ತಿರುವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ನೀಡಬೇಕೆಂದು ಹೇಳಿದ್ದರು.

ಬಿಜೆಪಿಯ ಯತ್ನಾಳ್ ಮತ್ತು ಕಾಂಗ್ರೆಸ್​ನ ಕಾಶಪ್ಪನವರ ವಿರುದ್ಧ ಪ್ರತಿಭಟನೆ

ಬಣಜಿಗ ಸಮುದಾಯದ ಬಗ್ಗೆ ಅವಮಾನಕಾರಿಯಾಗಿ ಮಾತನಾಡಿರುವ ಆರೋಪ ಸಂಬಂಧ ವಿಜಯಪುರ ನಗರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹಾಗೂ ಕಾಂಗ್ರೆಸ್ ಮುಖಂಡ ವಿಜಯಾನಂದ ಕಾಶಪ್ಪನವರ ವಿರುದ್ದ ಬಣಜಿಗ ಸಮುದಾಯದ ಮಂದಿ ಪ್ರತಿಭಟನೆ ನಡೆಸಿದರು. ವಿಜಯಪುರ ನಗರದ ಸಿದ್ದೇಶ್ವರ ದೇವಸ್ಥಾನ ಎದುರು ಪ್ರತಿಭಟನಾ ಸಭೆ ನಡೆಸಲಾಗಿದ್ದು, ಗುಂಡಾಗಿರಿಯಿಂದ ಮಾತನಾಡುವ ಯತ್ನಾಳಗೆ ಧಿಕ್ಕಾರ, ಜಾತಿ ನಿಂದನೆ ಮಾಡಿದವರಿಗೆ ಧಿಕ್ಕಾರ, ಸಮಾಜದ ಬಗ್ಗೆ ಅವಹೇಳನಾಕಾರಿಯಾಗಿ ಮಾತನಾಡುವ ಕಾಶಪ್ಪನವರಿಗೆ ಧಿಕ್ಕಾರ, ಲಿಂಗಾಯತ ಸಮಾಜವನ್ನು ಒಡೆಯುವ ಕಾಶಪ್ಪನವರಿಗೆ ಧಿಕ್ಕಾರ ಎಂಬ ಘೋಷಣೆಗಳನ್ನು ಕೂಗಿ ಭಿತ್ತಿ ಪತ್ರಗಳನ್ನು ಪ್ರದರ್ಶನ ಮಾಡಿದರು.

ಅಲ್ಲದೆ, ಯತ್ನಾಳ್ ಹಾಗೂ ಕಾಶಪ್ಪನವರ ಭಾವಚಿತ್ರಕ್ಕೆ ಕಪ್ಪು‌ ಪಟ್ಟಿ ಹಚ್ಚಿ ಪ್ರತಿಭಟನೆ ನಡೆಸಲಾಗಿದ್ದು, ಸಿದ್ದೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಿತು. ನಂತರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಬಣಜಿಗ ಸಮಾಜದ ಮುಖಂಡರು ಮನವಿ ಸಲ್ಲಿಸಿದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:12 pm, Thu, 3 November 22

ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್