AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್, ಧಾರವಾಡ ಜಿಲ್ಲೆಯಲ್ಲಿ ಗ್ರಾಮಗಳು ವಕ್ಫ್​ ಪಾಲು: ಜನ ಕಂಗಾಲು

ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಅರ್ಧ ಊರೇ ವಕ್ಫ್​ ಆಸ್ತಿಯಂತೆ. ಕಳೆದ ವಾರವಷ್ಟೇ ಈ ಗ್ರಾಮದಲ್ಲಿನ ಅನೇಕ ರೈತರ ಜಮೀನುಗಳ ಪಹಣಿಯ 11 ನೇ ಕಲಂನಲ್ಲಿ ವಕ್ಫ್ ಆಸ್ತಿ ಅಂತಾ ದಾಖಲಾಗಿದ್ದು ಬೆಳಕಿಗೆ ಬಂದಿತ್ತು. ಇದೀಗ ಈ ಪ್ರಕರಣ ಮುಂದುವರೆದು ಗ್ರಾಮದ ಅರ್ಧ ಆಸ್ತಿಯೇ ವಕ್ಪ್​ಗೆ ಸೇರಿದ್ದು ಅಂತಾ ದಾಖಲಾಗಿದೆ.

ಬೀದರ್, ಧಾರವಾಡ ಜಿಲ್ಲೆಯಲ್ಲಿ ಗ್ರಾಮಗಳು ವಕ್ಫ್​ ಪಾಲು: ಜನ ಕಂಗಾಲು
ಬೀದರ್, ಧಾರವಾಡ ಜಿಲ್ಲೆಯಲ್ಲಿ ಗ್ರಾಮಗಳು ವಕ್ಫ್​ ಪಾಲು: ಜನ ಕಂಗಾಲು
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Nov 04, 2024 | 3:57 PM

Share

ಧಾರವಾಡ, ನವೆಂಬರ್​ 04: ಕರ್ನಾಟಕದಲ್ಲಿ ಇದೀಗ ಎಲ್ಲ ಕಡೆಯಲ್ಲಿ ವಕ್ಫ್​ (Waqf) ಆಸ್ತಿ ವಿಚಾರವೇ ಚರ್ಚೆಯಲ್ಲಿದೆ. ಇದುವರೆಗೂ ರೈತರ ಹೊಲ ಹಾಗೂ ಸಾರ್ವಜನಿಕ ಆಸ್ತಿಯಲ್ಲಿ ನಮೂದಾಗಿದ್ದ ವಕ್ಫ್​ ಆಸ್ತಿ ಅನ್ನೋ ಪದ, ಇದೀಗ ಧಾರವಾಡದಲ್ಲಿ ಅರ್ಧ ಊರಿನ ಆಸ್ತಿಯಲ್ಲಿ ನಮೂದಾಗಿದೆ. ಇದರಿಂದಾಗಿ ಕಂಗೆಟ್ಟ ಗ್ರಾಮಸ್ಥರು ವಕ್ಫ್​ ಕಚೇರಿಗೆ ಮುತ್ತಿಗೆ ಹಾಕಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಅರ್ಧ ಊರೇ ವಕ್ಫ್​ ಆಸ್ತಿ

ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಅರ್ಧ ಊರೇ ವಕ್ಫ್​ ಆಸ್ತಿಯಂತೆ. ಕಳೆದ ವಾರವಷ್ಟೇ ಈ ಗ್ರಾಮದಲ್ಲಿನ ಅನೇಕ ರೈತರ ಜಮೀನುಗಳ ಪಹಣಿಯ 11 ನೇ ಕಲಂನಲ್ಲಿ ವಕ್ಫ್ ಆಸ್ತಿ ಅಂತಾ ದಾಖಲಾಗಿದ್ದು ಬೆಳಕಿಗೆ ಬಂದಿತ್ತು. ಇದೀಗ ಈ ಪ್ರಕರಣ ಮುಂದುವರೆದು ಗ್ರಾಮದ ಅರ್ಧ ಆಸ್ತಿಯೇ ವಕ್ಪ್​ಗೆ ಸೇರಿದ್ದು ಅಂತಾ ದಾಖಲಾಗಿದೆ. ಇದೀಗ ಈ ಗ್ರಾಮದ ಅನೇಕ ಓಣಿಗಳು ವಕ್ಫ್ ಆಸ್ತಿಗೆ ಸೇರಿವೆ ಅಂತಾ ಗ್ರಾಮದ ಮುಸ್ಲಿಂ ಸಮುದಾಯಕ್ಕೆ ಸೇರಿದ ಭವನದ ಹೊರಗೆ ನೋಟಿಸ್ ಅಂಟಿಸಲಾಗಿದೆ.

ಇದನ್ನೂ ಓದಿ: ತೀವ್ರಗೊಂಡ ವಕ್ಫ್​ ಭೂ ವಿವಾದ: ಶಾ ಸೇರಿದಂತೆ ಸಂಸತ್‌ ಜಂಟಿ ಸದನ ಸಮಿತಿಗೆ ಅಶೋಕ್ ಪತ್ರ

ಆ ನೋಟಿಸ್​ನಲ್ಲಿ ವಕ್ಫ್ ಆಸ್ತಿಯ ಗಡಿಯನ್ನು ನಮೂದಿಸಲಾಗಿದ್ದು, ಅದರ ಪ್ರಕಾರ ಅರ್ಧಕ್ಕರ್ಧ ಊರು ಆ ವ್ಯಾಪ್ತಿಯಲ್ಲಿ ಬರುತ್ತೆ. ಅಲ್ಲದೇ ಈ ನೋಟಿಸ್​ನ್ನು ಇಂಗ್ಲಿಷ್ ಭಾಷೆಯಲ್ಲಿ ಮುದ್ರಿಸಲಾಗಿದ್ದು, ಇದರ ಹಿಂದೆ ದೊಡ್ಡ ಷಡ್ಯಂತ್ರವಿದೆ ಅನ್ನೋದು ಸ್ಥಳೀಯರ ಆರೋಪ. ಇದೇ ಕಾರಣಕ್ಕೆ ಇಂದು ಗ್ರಾಮದ ನೂರಾರು ಜನರು ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ ಮುತಾಲಿಕ್ ನೇತ್ರತ್ವದಲ್ಲಿ ಧಾರವಾಡ ನಗರದ ಸಾಧನಕೇರಿ ಬಡಾವಣೆಯಲ್ಲಿರುವ ಜಿಲ್ಲಾ ವಕ್ಫ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಈ ವೇಳೆ ವಕ್ಫ್ ಅಧಿಕಾರಿ ತಾಜುದ್ದೀನ್ ಶೇಖ್ ಅವರನ್ನು ತರಾಟೆಗೆ ತೆಗೆದುಕೊಂಡರು.

ಈ ವೇಳೆ ಅಧಿಕಾರಿ ಏನೇನೋ ಹೇಳಲು ಯತ್ನಿಸಿದರೂ ಅದರಿಂದ ರೈತರು ಮತ್ತಷ್ಟು ಆಕ್ರೋಶಗೊಂಡರೇ ವಿನಃ ಅವರ ಸಿಟ್ಟು ಕಡಿಮೆಯಂತೂ ಆಗಲೇ ಇಲ್ಲ. ಇದರಲ್ಲಿ ತಮ್ಮ ಕೈವಾಡವೇನೂ ಇಲ್ಲ ಅಂತಾನೇ ವಾದಿಸಿದ ಅಧಿಕಾರಿ ತಾಜುದ್ದೀನ್ ಶೇಖ್, ಮುತಾಲಿಕ್ ಹಾಗೂ ರೈತರಿಂದ ಮತ್ತಷ್ಟು ಬೈಸಿಕೊಳ್ಳುವಂತಾಯಿತು. ಅಲ್ಲದೇ ಇಡೀ ಊರಿನ ಅರ್ಧ ಭಾಗದಷ್ಟು ಪ್ರದೇಶ ವಕ್ಫ್ ಆಸ್ತಿ ವ್ಯಾಪ್ತಿಯಲ್ಲಿ ಬರುತ್ತೆ ಅನ್ನುವಂಥ ನೋಟಿಸ್ ಅಂಟಿಸಿದ್ದು ಏಕೆ ಅನ್ನೋ ಪ್ರಶ್ನೆಗೆ ಅಧಿಕಾರಿ ಬಳಿ ಉತ್ತರವೇ ಇರಲಿಲ್ಲ.

ಇದರ ಹಿಂದೆ ದೊಡ್ಡ ಷಡ್ಯಂತ್ರವಿದ್ದು, ಕೂಡಲೇ ಈ ದಾಖಲೆಯನ್ನು ಬದಲಾಯಿಸುವಂತೆ ಜನರು ಆಗ್ರಹಿಸಿದರು. ಅಲ್ಲದೇ ಕಳೆದ ವಾರ ರೈತರೊಬ್ಬರ ಜಮೀನಿನ ಪಹಣಿಯಲ್ಲಿ ದಾಖಲಾಗಿದ್ದ ವಕ್ಫ್ ಆಸ್ತಿ ಅನ್ನೋದನ್ನು ಇದೀಗ ಅಧಿಕಾರಿಗಳು ತೆಗೆದು ಹಾಕಿರೋದು ಕೂಡ ಇಲ್ಲಿ ಪ್ರಸ್ತಾಪವಾಯಿತು.

ಇದನ್ನೂ ಓದಿ: ಅನ್ನದಾನೇಶ್ವರ ಮಠದ ಆಸ್ತಿಯಲ್ಲೂ ವಕ್ಫ್​ ಹೆಸರು: ಉಗ್ರ ಹೋರಾಟ ಎಚ್ಚರಿಕೆ ನೀಡಿದ ಸ್ವಾಮೀಜಿ

ದಿನದಿಂದ ದಿನಕ್ಕೆ ಈ ವಕ್ಫ್ ಆಸ್ತಿ ದಾಖಲಾಗುತ್ತಿರುವ ಪ್ರಕರಣ ಹೊಸ ಹೊಸ ತಿರುವು ಪಡೆಯುತ್ತಿದೆ. ಇದರೊಂದಿಗೆ ಅನೇಕ ಕಡೆಗಳಲ್ಲಿ ಮುಸ್ಲಿಮರ ಆಸ್ತಿಗಳ ದಾಖಲೆಯಲ್ಲಿಯೂ ಇದೇ ರೀತಿ ನಮೂದಾಗಿರೋದು ಕೂಡ ಅಧಿಕಾರಿಗಳಿಗೆ ದೊಡ್ಡ ತಲೆನೋವು ತಂದಿದೆ. ಒಟ್ಟಿನಲ್ಲಿ ಈ ಪ್ರಕರಣಗಳ ಹಿಂದೆ ಯಾರಿದ್ದಾರೆ ಅನ್ನೋದು ಇದೀಗ ಸಾಕಷ್ಟು ಕುತೂಹಲ ಸೃಷ್ಟಿಸಿದ್ದಂತೂ ಸತ್ಯ.

ಬೀದರ್ ಜಿಲ್ಲೆಯ ನೂರಕ್ಕೂ ಹೆಚ್ಚು ಮನೆಗಳು ಈಗ ವಕ್ಪ್ ಬೋರ್ಡ್ ಆಸ್ತಿ

ಇದೇ ರೀತಿಯಾಗಿ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಉಡಬಾಳ ಗ್ರಾಮದ ನೂರಕ್ಕೂ ಹೆಚ್ಚು ಮನೆಗಳು ಈಗ ವಕ್ಪ್ ಬೋರ್ಡ್ ಆಸ್ತಿ ಪಾಲಾಗಿದೆ. ರೈತನ ಜಮೀನು ಪಕ್ಕದಲ್ಲಿರುವ ಗ್ರಾಮದ ನೂರಕ್ಕೂ ‌ಹೆಚ್ಚು ಮನೆಗಳು ವಕ್ಪ್ ಹೆಸರಿಗೆ ನಮೂದಿಸಲಾಗಿದೆ. 2013 ರಲ್ಲಿ ಅರ್ಧದಷ್ಟು ಊರು 18.60 ಎಕರೆಗಳಷ್ಟು ಜಮೀನು ವಕ್ಪ್ ಪಾಲಾಗಿದೆ.

ಕೃಷ್ಣ ಮೂರ್ತಿ ಎಂಬುವ ರೈತನ 18.60 ಎಕರೆಯಷ್ಟು ಫಲವತ್ತಾದ ಜಮೀನು ವಕ್ಫ್ ಬೋರ್ಡ್ ಪಾಲಾಗಿದೆ. 11 ವರ್ಷದಿಂದಾ ಪಹಣಿಯಲ್ಲಿನ ವಕ್ಫ್ ಬೋರ್ಡ್ ಹೆಸರು ತೆಗೆಸಲು ರೈತ ಪರದಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ